Categories: ಕೋಲಾರ

ಸೊಸೈಟಿಯಿಂದ ರೈತರಿಗೆ ಸಾಲದ ರೂಪದಲ್ಲಿಯೇ ಲಾಭದಾಯಕ ಸಸಿಗಳನ್ನು ನೀಡಲು ಡಿಸಿಪಿ ದೇವರಾಜ್ ಸಲಹೆ

ಕೋಲಾರ: ರೈತರು ಅಭಿವೃದ್ಧಿಯಾಗಲು ಲಾಭದಾಯಕ ಸಸಿಗಳನ್ನು ಸೊಸೈಟಿ ಮೂಲಕವೇ ಸಾಲದ ರೂಪದಲ್ಲಿ ನೀಡುವ ಮೂಲಕ ಹೊಸ ಬದಲಾವಣೆಗೆ ಮುಂದಾಗಬೇಕು ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ಸಲಹೆ ನೀಡಿದರು,

ಭಾನುವಾರ ತಾಲೂಕಿನ ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ವಾಟನೆ ಹಾಗೂ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಸಹಕಾರಿ ಸಂಘಗಳು ಎಂದರೆ ಕೇವಲ ಸಾಲ ಕೊಡುವುದು ಸಾಲವನ್ನು ಕಟ್ಟಿಸಿಕೊಳ್ಳುವುದಕ್ಕೆ ಅಷ್ಟೇ ಸೀಮಿತಗೊಳಿಸದೇ ರೈತರಿಗೆ ಉಪಯುಕ್ತ ಮಾಹಿತಿ ನೀಡಬೇಕು ರೈತರು ಪ್ರತಿ ಬಾರಿ ಟಮೋಟ, ಆಲೂಗಡ್ಡೆ ಯಂತಹ ತರಕಾರಿ ಬೆಳೆಗಳಿಂದ ಸಾಲದ ಸುಳಿಯಲ್ಲಿ ಸಿಕ್ಕಿ ಜೀವನ ನಿರ್ವಹಣೆ ಕಷ್ಟವಾಗುತ್ತದೆ ಹೊಸ ಹೊಸ ಬಗೆಯ ಹಣ್ಣಿನ ಗಿಡಗಳನ್ನು ಸೊಸೈಟಿ ಮೂಲಕವೇ ಲಾಭ ಪಡೆಯುವುದು ಹೇಗೆ ಎಂಬುದನ್ನು ತೋರಿಸಿಕೊಡಬೇಕು ಎಂದರು.

ಯಾರಿಗೆ ಆಗಲಿ ಅಧಿಕಾರ ಎಂಬುದು ಶಾಶ್ವತವಲ್ಲ ತಮಗೆ ಅಧಿಕಾರ ಸಿಕ್ಕಾಗ ಬದಲಾವಣೆ ಮಾಡುವುದು ಅವರ ಜವಾಬ್ದಾರಿಯಾಗಬೇಕು ಸೊಸೈಟಿ ಕಟ್ಟಡವು ರೈತರ ಸ್ವತ್ತು ಆಗಿದ್ದು ಇಲ್ಲಿಂದ ಹೋಬಳಿಯ ರೈತರಿಗೆ ಮಾಹಿತಿ, ಮಾರ್ಗದರ್ಶನ ನಿರಂತರವಾಗಿ ನೀಡಬೇಕು ಸೊಸೈಟಿಗೆ ಸ್ವಂತ ಜಾಗವನ್ನು ಮಂಜೂರು ಮಾಡಿದ್ದರು ಕಾರಣಾಂತರಗಳಿಂದ ಸಮಸ್ಯೆಯಾಗಿತ್ತು ಕೂಡಲೇ ಜಿಲ್ಲಾಧಿಕಾರಿಯೊಂದಿಗೆ ಮಾತಾಡಿ ಆದಷ್ಟು ಬೇಗ ಸಮಸ್ಯೆ ಇತ್ಯರ್ಥ ಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಕ್ಕಲೇರಿ ರೇಷ್ಮೆ ಬೆಳಗಾರರ ಹಾಗೂ ರೈತರ ಸಹಕಾರ ಸಂಘದ‌ ಅಧ್ಯಕ್ಷ ಎಂ.ಪಾಲಾಕ್ಷಗೌಡ ಮಾತನಾಡಿ, ಸೊಸೈಟಿಯಲ್ಲಿ ಈ ಸಾಲಿನಲ್ಲಿ 23.39 ಲಕ್ಷದಷ್ಟು ಲಾಭವನ್ನು ಗಳಿಸಿದೆ ಈ ವರ್ಷವು ಸಹ ರೈತರಿಗೆ ಮಹಿಳಾ ಸಂಘಗಳಿಗೆ ಹಾಗೂ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಸಾಲ ನೀಡುವ ಮೂಲಕ ಜಿಲ್ಲೆಗೆ ಮಾದರಿ ಸೊಸೈಟಿಯಾಗಿ ಮಾಡಿದ್ದೇವೆ ರೈತ ಭವನದ ನಿರ್ಮಾಣಕ್ಕೆ 37.50 ಲಕ್ಷದಷ್ಟು ದಾನಿಗಳ ಮೂಲಕವೇ ಪಡೆದಿದ್ದು ಇದರಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ 15 ಲಕ್ಷವನ್ನು ಅಪೆಕ್ಸ್ ಬ್ಯಾಂಕ್ ಮೂಲಕ ಮತ್ತು ಮಾಜಿ‌ ಕೆ.ಶ್ರೀನಿವಾಸಗೌಡ 4 ಲಕ್ಷ ಸೇರಿದ್ದು ಉಳಿದ ಹಣವನ್ನು ದಾನಿಗಳಿಂದ ಪಡೆದಿದ್ದು ಎಂಎಲ್ಸಿ ಅನಿಲ್ ಕುಮಾರ್ ಅವರು 10 ಲಕ್ಷ ಕೊಡತ್ತೇವೆ ಎಂದು ಹೇಳಿದ್ದು ಇದುವರೆಗೂ ಕೊಟ್ಟಿಲ್ಲ ಎಂದರು,

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಜೆಡಿಎಸ್ ಮುಖಂಡ ವಕ್ಕಲೇರಿ ರಾಮು, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಅಂಬರೀಶ್, ಕ್ರಿಯಾಜಿನ್ ಸಂಸ್ಥೆಯ ಮಂಜುನಾಥ್ ಯಾದವ್, ನಾರಾಯಣಸ್ವಾಮಿ, ಶ್ರೀಕಾಂತ್, ಸತೀಶ್, ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮುದವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ನಿರ್ದೇಶಕರಾದ ಎಂ.ಆನಂದ್ ಕುಮಾರ್, ಆರ್.ಚಂದ್ರೇಗೌಡ, ವೆಂಕಟಗಿರಿಯಪ್ಪ, ಟಿ.ಮುನಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್.ಕೃಷ್ಣಪ್ಪ, ಬಿ.ಎನ್ ಚಿದಾನಂದ, ಎಂ ರಮೇಶ್, ಚೌಡಮ್ಮ, ಶಾಂತಕುಮಾರಿ ಕಾರ್ಯದರ್ಶಿ ಎಂ.ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

5 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

18 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

18 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

21 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

22 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago