Categories: ಕೋಲಾರ

ಸೊಸೈಟಿಯಿಂದ ರೈತರಿಗೆ ಸಾಲದ ರೂಪದಲ್ಲಿಯೇ ಲಾಭದಾಯಕ ಸಸಿಗಳನ್ನು ನೀಡಲು ಡಿಸಿಪಿ ದೇವರಾಜ್ ಸಲಹೆ

ಕೋಲಾರ: ರೈತರು ಅಭಿವೃದ್ಧಿಯಾಗಲು ಲಾಭದಾಯಕ ಸಸಿಗಳನ್ನು ಸೊಸೈಟಿ ಮೂಲಕವೇ ಸಾಲದ ರೂಪದಲ್ಲಿ ನೀಡುವ ಮೂಲಕ ಹೊಸ ಬದಲಾವಣೆಗೆ ಮುಂದಾಗಬೇಕು ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ಸಲಹೆ ನೀಡಿದರು,

ಭಾನುವಾರ ತಾಲೂಕಿನ ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ವಾಟನೆ ಹಾಗೂ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಸಹಕಾರಿ ಸಂಘಗಳು ಎಂದರೆ ಕೇವಲ ಸಾಲ ಕೊಡುವುದು ಸಾಲವನ್ನು ಕಟ್ಟಿಸಿಕೊಳ್ಳುವುದಕ್ಕೆ ಅಷ್ಟೇ ಸೀಮಿತಗೊಳಿಸದೇ ರೈತರಿಗೆ ಉಪಯುಕ್ತ ಮಾಹಿತಿ ನೀಡಬೇಕು ರೈತರು ಪ್ರತಿ ಬಾರಿ ಟಮೋಟ, ಆಲೂಗಡ್ಡೆ ಯಂತಹ ತರಕಾರಿ ಬೆಳೆಗಳಿಂದ ಸಾಲದ ಸುಳಿಯಲ್ಲಿ ಸಿಕ್ಕಿ ಜೀವನ ನಿರ್ವಹಣೆ ಕಷ್ಟವಾಗುತ್ತದೆ ಹೊಸ ಹೊಸ ಬಗೆಯ ಹಣ್ಣಿನ ಗಿಡಗಳನ್ನು ಸೊಸೈಟಿ ಮೂಲಕವೇ ಲಾಭ ಪಡೆಯುವುದು ಹೇಗೆ ಎಂಬುದನ್ನು ತೋರಿಸಿಕೊಡಬೇಕು ಎಂದರು.

ಯಾರಿಗೆ ಆಗಲಿ ಅಧಿಕಾರ ಎಂಬುದು ಶಾಶ್ವತವಲ್ಲ ತಮಗೆ ಅಧಿಕಾರ ಸಿಕ್ಕಾಗ ಬದಲಾವಣೆ ಮಾಡುವುದು ಅವರ ಜವಾಬ್ದಾರಿಯಾಗಬೇಕು ಸೊಸೈಟಿ ಕಟ್ಟಡವು ರೈತರ ಸ್ವತ್ತು ಆಗಿದ್ದು ಇಲ್ಲಿಂದ ಹೋಬಳಿಯ ರೈತರಿಗೆ ಮಾಹಿತಿ, ಮಾರ್ಗದರ್ಶನ ನಿರಂತರವಾಗಿ ನೀಡಬೇಕು ಸೊಸೈಟಿಗೆ ಸ್ವಂತ ಜಾಗವನ್ನು ಮಂಜೂರು ಮಾಡಿದ್ದರು ಕಾರಣಾಂತರಗಳಿಂದ ಸಮಸ್ಯೆಯಾಗಿತ್ತು ಕೂಡಲೇ ಜಿಲ್ಲಾಧಿಕಾರಿಯೊಂದಿಗೆ ಮಾತಾಡಿ ಆದಷ್ಟು ಬೇಗ ಸಮಸ್ಯೆ ಇತ್ಯರ್ಥ ಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಕ್ಕಲೇರಿ ರೇಷ್ಮೆ ಬೆಳಗಾರರ ಹಾಗೂ ರೈತರ ಸಹಕಾರ ಸಂಘದ‌ ಅಧ್ಯಕ್ಷ ಎಂ.ಪಾಲಾಕ್ಷಗೌಡ ಮಾತನಾಡಿ, ಸೊಸೈಟಿಯಲ್ಲಿ ಈ ಸಾಲಿನಲ್ಲಿ 23.39 ಲಕ್ಷದಷ್ಟು ಲಾಭವನ್ನು ಗಳಿಸಿದೆ ಈ ವರ್ಷವು ಸಹ ರೈತರಿಗೆ ಮಹಿಳಾ ಸಂಘಗಳಿಗೆ ಹಾಗೂ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಸಾಲ ನೀಡುವ ಮೂಲಕ ಜಿಲ್ಲೆಗೆ ಮಾದರಿ ಸೊಸೈಟಿಯಾಗಿ ಮಾಡಿದ್ದೇವೆ ರೈತ ಭವನದ ನಿರ್ಮಾಣಕ್ಕೆ 37.50 ಲಕ್ಷದಷ್ಟು ದಾನಿಗಳ ಮೂಲಕವೇ ಪಡೆದಿದ್ದು ಇದರಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ 15 ಲಕ್ಷವನ್ನು ಅಪೆಕ್ಸ್ ಬ್ಯಾಂಕ್ ಮೂಲಕ ಮತ್ತು ಮಾಜಿ‌ ಕೆ.ಶ್ರೀನಿವಾಸಗೌಡ 4 ಲಕ್ಷ ಸೇರಿದ್ದು ಉಳಿದ ಹಣವನ್ನು ದಾನಿಗಳಿಂದ ಪಡೆದಿದ್ದು ಎಂಎಲ್ಸಿ ಅನಿಲ್ ಕುಮಾರ್ ಅವರು 10 ಲಕ್ಷ ಕೊಡತ್ತೇವೆ ಎಂದು ಹೇಳಿದ್ದು ಇದುವರೆಗೂ ಕೊಟ್ಟಿಲ್ಲ ಎಂದರು,

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಜೆಡಿಎಸ್ ಮುಖಂಡ ವಕ್ಕಲೇರಿ ರಾಮು, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಅಂಬರೀಶ್, ಕ್ರಿಯಾಜಿನ್ ಸಂಸ್ಥೆಯ ಮಂಜುನಾಥ್ ಯಾದವ್, ನಾರಾಯಣಸ್ವಾಮಿ, ಶ್ರೀಕಾಂತ್, ಸತೀಶ್, ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮುದವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ನಿರ್ದೇಶಕರಾದ ಎಂ.ಆನಂದ್ ಕುಮಾರ್, ಆರ್.ಚಂದ್ರೇಗೌಡ, ವೆಂಕಟಗಿರಿಯಪ್ಪ, ಟಿ.ಮುನಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್.ಕೃಷ್ಣಪ್ಪ, ಬಿ.ಎನ್ ಚಿದಾನಂದ, ಎಂ ರಮೇಶ್, ಚೌಡಮ್ಮ, ಶಾಂತಕುಮಾರಿ ಕಾರ್ಯದರ್ಶಿ ಎಂ.ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

10 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

10 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

23 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 days ago