Categories: ಕೋಲಾರ

ಸೊಸೈಟಿಯಿಂದ ರೈತರಿಗೆ ಸಾಲದ ರೂಪದಲ್ಲಿಯೇ ಲಾಭದಾಯಕ ಸಸಿಗಳನ್ನು ನೀಡಲು ಡಿಸಿಪಿ ದೇವರಾಜ್ ಸಲಹೆ

ಕೋಲಾರ: ರೈತರು ಅಭಿವೃದ್ಧಿಯಾಗಲು ಲಾಭದಾಯಕ ಸಸಿಗಳನ್ನು ಸೊಸೈಟಿ ಮೂಲಕವೇ ಸಾಲದ ರೂಪದಲ್ಲಿ ನೀಡುವ ಮೂಲಕ ಹೊಸ ಬದಲಾವಣೆಗೆ ಮುಂದಾಗಬೇಕು ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ಸಲಹೆ ನೀಡಿದರು,

ಭಾನುವಾರ ತಾಲೂಕಿನ ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ವಾಟನೆ ಹಾಗೂ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಸಹಕಾರಿ ಸಂಘಗಳು ಎಂದರೆ ಕೇವಲ ಸಾಲ ಕೊಡುವುದು ಸಾಲವನ್ನು ಕಟ್ಟಿಸಿಕೊಳ್ಳುವುದಕ್ಕೆ ಅಷ್ಟೇ ಸೀಮಿತಗೊಳಿಸದೇ ರೈತರಿಗೆ ಉಪಯುಕ್ತ ಮಾಹಿತಿ ನೀಡಬೇಕು ರೈತರು ಪ್ರತಿ ಬಾರಿ ಟಮೋಟ, ಆಲೂಗಡ್ಡೆ ಯಂತಹ ತರಕಾರಿ ಬೆಳೆಗಳಿಂದ ಸಾಲದ ಸುಳಿಯಲ್ಲಿ ಸಿಕ್ಕಿ ಜೀವನ ನಿರ್ವಹಣೆ ಕಷ್ಟವಾಗುತ್ತದೆ ಹೊಸ ಹೊಸ ಬಗೆಯ ಹಣ್ಣಿನ ಗಿಡಗಳನ್ನು ಸೊಸೈಟಿ ಮೂಲಕವೇ ಲಾಭ ಪಡೆಯುವುದು ಹೇಗೆ ಎಂಬುದನ್ನು ತೋರಿಸಿಕೊಡಬೇಕು ಎಂದರು.

ಯಾರಿಗೆ ಆಗಲಿ ಅಧಿಕಾರ ಎಂಬುದು ಶಾಶ್ವತವಲ್ಲ ತಮಗೆ ಅಧಿಕಾರ ಸಿಕ್ಕಾಗ ಬದಲಾವಣೆ ಮಾಡುವುದು ಅವರ ಜವಾಬ್ದಾರಿಯಾಗಬೇಕು ಸೊಸೈಟಿ ಕಟ್ಟಡವು ರೈತರ ಸ್ವತ್ತು ಆಗಿದ್ದು ಇಲ್ಲಿಂದ ಹೋಬಳಿಯ ರೈತರಿಗೆ ಮಾಹಿತಿ, ಮಾರ್ಗದರ್ಶನ ನಿರಂತರವಾಗಿ ನೀಡಬೇಕು ಸೊಸೈಟಿಗೆ ಸ್ವಂತ ಜಾಗವನ್ನು ಮಂಜೂರು ಮಾಡಿದ್ದರು ಕಾರಣಾಂತರಗಳಿಂದ ಸಮಸ್ಯೆಯಾಗಿತ್ತು ಕೂಡಲೇ ಜಿಲ್ಲಾಧಿಕಾರಿಯೊಂದಿಗೆ ಮಾತಾಡಿ ಆದಷ್ಟು ಬೇಗ ಸಮಸ್ಯೆ ಇತ್ಯರ್ಥ ಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಕ್ಕಲೇರಿ ರೇಷ್ಮೆ ಬೆಳಗಾರರ ಹಾಗೂ ರೈತರ ಸಹಕಾರ ಸಂಘದ‌ ಅಧ್ಯಕ್ಷ ಎಂ.ಪಾಲಾಕ್ಷಗೌಡ ಮಾತನಾಡಿ, ಸೊಸೈಟಿಯಲ್ಲಿ ಈ ಸಾಲಿನಲ್ಲಿ 23.39 ಲಕ್ಷದಷ್ಟು ಲಾಭವನ್ನು ಗಳಿಸಿದೆ ಈ ವರ್ಷವು ಸಹ ರೈತರಿಗೆ ಮಹಿಳಾ ಸಂಘಗಳಿಗೆ ಹಾಗೂ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಸಾಲ ನೀಡುವ ಮೂಲಕ ಜಿಲ್ಲೆಗೆ ಮಾದರಿ ಸೊಸೈಟಿಯಾಗಿ ಮಾಡಿದ್ದೇವೆ ರೈತ ಭವನದ ನಿರ್ಮಾಣಕ್ಕೆ 37.50 ಲಕ್ಷದಷ್ಟು ದಾನಿಗಳ ಮೂಲಕವೇ ಪಡೆದಿದ್ದು ಇದರಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ 15 ಲಕ್ಷವನ್ನು ಅಪೆಕ್ಸ್ ಬ್ಯಾಂಕ್ ಮೂಲಕ ಮತ್ತು ಮಾಜಿ‌ ಕೆ.ಶ್ರೀನಿವಾಸಗೌಡ 4 ಲಕ್ಷ ಸೇರಿದ್ದು ಉಳಿದ ಹಣವನ್ನು ದಾನಿಗಳಿಂದ ಪಡೆದಿದ್ದು ಎಂಎಲ್ಸಿ ಅನಿಲ್ ಕುಮಾರ್ ಅವರು 10 ಲಕ್ಷ ಕೊಡತ್ತೇವೆ ಎಂದು ಹೇಳಿದ್ದು ಇದುವರೆಗೂ ಕೊಟ್ಟಿಲ್ಲ ಎಂದರು,

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಜೆಡಿಎಸ್ ಮುಖಂಡ ವಕ್ಕಲೇರಿ ರಾಮು, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಅಂಬರೀಶ್, ಕ್ರಿಯಾಜಿನ್ ಸಂಸ್ಥೆಯ ಮಂಜುನಾಥ್ ಯಾದವ್, ನಾರಾಯಣಸ್ವಾಮಿ, ಶ್ರೀಕಾಂತ್, ಸತೀಶ್, ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮುದವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ನಿರ್ದೇಶಕರಾದ ಎಂ.ಆನಂದ್ ಕುಮಾರ್, ಆರ್.ಚಂದ್ರೇಗೌಡ, ವೆಂಕಟಗಿರಿಯಪ್ಪ, ಟಿ.ಮುನಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್.ಕೃಷ್ಣಪ್ಪ, ಬಿ.ಎನ್ ಚಿದಾನಂದ, ಎಂ ರಮೇಶ್, ಚೌಡಮ್ಮ, ಶಾಂತಕುಮಾರಿ ಕಾರ್ಯದರ್ಶಿ ಎಂ.ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

4 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

19 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

2 days ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

2 days ago