Categories: ಕೋಲಾರ

ಸೊಸೈಟಿಯಿಂದ ರೈತರಿಗೆ ಸಾಲದ ರೂಪದಲ್ಲಿಯೇ ಲಾಭದಾಯಕ ಸಸಿಗಳನ್ನು ನೀಡಲು ಡಿಸಿಪಿ ದೇವರಾಜ್ ಸಲಹೆ

ಕೋಲಾರ: ರೈತರು ಅಭಿವೃದ್ಧಿಯಾಗಲು ಲಾಭದಾಯಕ ಸಸಿಗಳನ್ನು ಸೊಸೈಟಿ ಮೂಲಕವೇ ಸಾಲದ ರೂಪದಲ್ಲಿ ನೀಡುವ ಮೂಲಕ ಹೊಸ ಬದಲಾವಣೆಗೆ ಮುಂದಾಗಬೇಕು ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ಸಲಹೆ ನೀಡಿದರು,

ಭಾನುವಾರ ತಾಲೂಕಿನ ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ವಾಟನೆ ಹಾಗೂ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಸಹಕಾರಿ ಸಂಘಗಳು ಎಂದರೆ ಕೇವಲ ಸಾಲ ಕೊಡುವುದು ಸಾಲವನ್ನು ಕಟ್ಟಿಸಿಕೊಳ್ಳುವುದಕ್ಕೆ ಅಷ್ಟೇ ಸೀಮಿತಗೊಳಿಸದೇ ರೈತರಿಗೆ ಉಪಯುಕ್ತ ಮಾಹಿತಿ ನೀಡಬೇಕು ರೈತರು ಪ್ರತಿ ಬಾರಿ ಟಮೋಟ, ಆಲೂಗಡ್ಡೆ ಯಂತಹ ತರಕಾರಿ ಬೆಳೆಗಳಿಂದ ಸಾಲದ ಸುಳಿಯಲ್ಲಿ ಸಿಕ್ಕಿ ಜೀವನ ನಿರ್ವಹಣೆ ಕಷ್ಟವಾಗುತ್ತದೆ ಹೊಸ ಹೊಸ ಬಗೆಯ ಹಣ್ಣಿನ ಗಿಡಗಳನ್ನು ಸೊಸೈಟಿ ಮೂಲಕವೇ ಲಾಭ ಪಡೆಯುವುದು ಹೇಗೆ ಎಂಬುದನ್ನು ತೋರಿಸಿಕೊಡಬೇಕು ಎಂದರು.

ಯಾರಿಗೆ ಆಗಲಿ ಅಧಿಕಾರ ಎಂಬುದು ಶಾಶ್ವತವಲ್ಲ ತಮಗೆ ಅಧಿಕಾರ ಸಿಕ್ಕಾಗ ಬದಲಾವಣೆ ಮಾಡುವುದು ಅವರ ಜವಾಬ್ದಾರಿಯಾಗಬೇಕು ಸೊಸೈಟಿ ಕಟ್ಟಡವು ರೈತರ ಸ್ವತ್ತು ಆಗಿದ್ದು ಇಲ್ಲಿಂದ ಹೋಬಳಿಯ ರೈತರಿಗೆ ಮಾಹಿತಿ, ಮಾರ್ಗದರ್ಶನ ನಿರಂತರವಾಗಿ ನೀಡಬೇಕು ಸೊಸೈಟಿಗೆ ಸ್ವಂತ ಜಾಗವನ್ನು ಮಂಜೂರು ಮಾಡಿದ್ದರು ಕಾರಣಾಂತರಗಳಿಂದ ಸಮಸ್ಯೆಯಾಗಿತ್ತು ಕೂಡಲೇ ಜಿಲ್ಲಾಧಿಕಾರಿಯೊಂದಿಗೆ ಮಾತಾಡಿ ಆದಷ್ಟು ಬೇಗ ಸಮಸ್ಯೆ ಇತ್ಯರ್ಥ ಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಕ್ಕಲೇರಿ ರೇಷ್ಮೆ ಬೆಳಗಾರರ ಹಾಗೂ ರೈತರ ಸಹಕಾರ ಸಂಘದ‌ ಅಧ್ಯಕ್ಷ ಎಂ.ಪಾಲಾಕ್ಷಗೌಡ ಮಾತನಾಡಿ, ಸೊಸೈಟಿಯಲ್ಲಿ ಈ ಸಾಲಿನಲ್ಲಿ 23.39 ಲಕ್ಷದಷ್ಟು ಲಾಭವನ್ನು ಗಳಿಸಿದೆ ಈ ವರ್ಷವು ಸಹ ರೈತರಿಗೆ ಮಹಿಳಾ ಸಂಘಗಳಿಗೆ ಹಾಗೂ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಸಾಲ ನೀಡುವ ಮೂಲಕ ಜಿಲ್ಲೆಗೆ ಮಾದರಿ ಸೊಸೈಟಿಯಾಗಿ ಮಾಡಿದ್ದೇವೆ ರೈತ ಭವನದ ನಿರ್ಮಾಣಕ್ಕೆ 37.50 ಲಕ್ಷದಷ್ಟು ದಾನಿಗಳ ಮೂಲಕವೇ ಪಡೆದಿದ್ದು ಇದರಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ 15 ಲಕ್ಷವನ್ನು ಅಪೆಕ್ಸ್ ಬ್ಯಾಂಕ್ ಮೂಲಕ ಮತ್ತು ಮಾಜಿ‌ ಕೆ.ಶ್ರೀನಿವಾಸಗೌಡ 4 ಲಕ್ಷ ಸೇರಿದ್ದು ಉಳಿದ ಹಣವನ್ನು ದಾನಿಗಳಿಂದ ಪಡೆದಿದ್ದು ಎಂಎಲ್ಸಿ ಅನಿಲ್ ಕುಮಾರ್ ಅವರು 10 ಲಕ್ಷ ಕೊಡತ್ತೇವೆ ಎಂದು ಹೇಳಿದ್ದು ಇದುವರೆಗೂ ಕೊಟ್ಟಿಲ್ಲ ಎಂದರು,

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಜೆಡಿಎಸ್ ಮುಖಂಡ ವಕ್ಕಲೇರಿ ರಾಮು, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಅಂಬರೀಶ್, ಕ್ರಿಯಾಜಿನ್ ಸಂಸ್ಥೆಯ ಮಂಜುನಾಥ್ ಯಾದವ್, ನಾರಾಯಣಸ್ವಾಮಿ, ಶ್ರೀಕಾಂತ್, ಸತೀಶ್, ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮುದವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ನಿರ್ದೇಶಕರಾದ ಎಂ.ಆನಂದ್ ಕುಮಾರ್, ಆರ್.ಚಂದ್ರೇಗೌಡ, ವೆಂಕಟಗಿರಿಯಪ್ಪ, ಟಿ.ಮುನಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್.ಕೃಷ್ಣಪ್ಪ, ಬಿ.ಎನ್ ಚಿದಾನಂದ, ಎಂ ರಮೇಶ್, ಚೌಡಮ್ಮ, ಶಾಂತಕುಮಾರಿ ಕಾರ್ಯದರ್ಶಿ ಎಂ.ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 hour ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

3 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

15 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

15 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

15 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

17 hours ago