ರಾಖಿ ಹಬ್ಬದಂದು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(TGSRTC) ಬಸ್ಸಿನಲ್ಲಿ ಗರ್ಭಿಣಿಗೆ ಹೆರಿಗೆ ಮಾಡಿಸಿ ಮಹಿಳಾ ಕಂಡಕ್ಟರ್ ಮಾನವೀಯತೆ ಮೆರೆದಿದ್ದಾರೆ.
ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ ನಲ್ಲಿಯೇ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ತಕ್ಷಣ ಸ್ಪಂದಿಸಿ ಬಸ್ ನಲ್ಲಿ ಹೆರಿಗೆ ಮಾಡಿಸಿದ್ದಾರೆ. ನಂತರ, ತಾಯಿ ಮತ್ತು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸೋಮವಾರ ಬೆಳಗ್ಗೆ ಗದ್ವಾಲ-ವನಪರ್ತಿ ಮಾರ್ಗದ ಗ್ರಾಮದ ಬೆಳಕು ಬಸ್ನಲ್ಲಿ ರಕ್ಷಾಬಂಧನದ ನಿಮಿತ್ತ ತಮ್ಮ ಸಹೋದರರಿಗೆ ರಾಖಿ ಕಟ್ಟಲು ಗದ್ವಾಲ ದೀಪೋಣದ ಗರ್ಭಿಣಿ ಸಂಧ್ಯಾ ವನಪರ್ತಿಗೆ ತೆರಳುತ್ತಿದ್ದರು.
ಬಸ್ ನಾಚಹಳ್ಳಿ ತಲುಪಿದ ಕೂಡಲೇ ಗರ್ಭಿಣಿಗೆ ಹೊಟ್ಟೆನೋವು ಕಾಣಿಸಿಕೊಂಡಿತು. ತಕ್ಷಣ ಎಚ್ಚೆತ್ತ ಮಹಿಳಾ ಕಂಡಕ್ಟರ್ ಜಿ.ಭಾರತಿ ಬಸ್ ನಿಲ್ಲಿಸಿದರು. ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ನರ್ಸ್ ಸಹಾಯದಿಂದ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ.
ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಜನನ ನಂತರ 108 ಸಹಾಯದಿಂದ ತಾಯಿ ಮತ್ತು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದು, ಸದ್ಯ ತಾಯಿ ಮತ್ತು ಮಗು ಸುರಕ್ಷಿತವಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾವಲಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ಸಿಡಿಲು ಬಡಿದ ಪರಿಣಾಮ ಎರಡು…
ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ…
ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ…
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…