ಸೋಫಾ ಸೆಟ್ ಅಂಗಡಿ ಮೇಲ್ಛಾವಣಿ ಶೀಟ್ ಕತ್ತರಿಸಿ ಒಳನುಗ್ಗಿದ ಕಳ್ಳರು

ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ರಸ್ತೆಯ ಎಲ್ಐಸಿ ಕಚೇರಿ ಸಮೀಪದ ಇಂಪೀರಿಯರ್ ಸೋಫಾ ಸೇಟ್ ಅಂಗಡಿ ಹಾಗೂ ಕೃಷ್ಣಪ್ಪ ಗ್ರ್ಯಾನೈಟ್ ಅಂಗಡಿಗಳ ಮೇಲ್ಛಾವಣಿಯ ತಗಡಿನ ಶೀಟ್ ಗಳನ್ನು ಕತ್ತರಿಸಿ ಒಳ ನುಗ್ಗಿರುವ ಕಳ್ಳರು ಬರಿಗೈಯಲ್ಲಿ ಹೋಗಿರುವ ಪ್ರಕರಣ ಬುಧವಾರ ರಾತ್ರಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇದೇ ರಸ್ತೆಯ ಬದಿಯಲ್ಲಿನ ಮನೆಗಳ ಬಳಿ ನಿಲ್ಲಿಸಿದ್ದ ಲಾರಿ, ನೀರಿನ ಟ್ಯಾಂಕರ್ಗಳಲ್ಲಿ ಬ್ಯಾಟರಿ, ಡೀಸೆಲ್ ಸೇರಿದಂತೆ ಇತರೆ ವಸ್ತುಗಳನ್ನು ನಾಲ್ಕು ದಿನಗಳ ಹಿಂದೆಯಷ್ಟೇ ಕಳವು ಮಾಡಲಾಗಿತ್ತು. ಈ ಕಳವು ಪ್ರಕರಣ ಮರೆಯುವ ಮುನ್ನವೇ ಬುಧವಾರ ರಾತ್ರಿ ಅಂಗಡಿಯ ಮೇಲ್ಛಾವಣಿ ತಗಡಿನ ಶೀಟ್ಗಳನ್ನು ಕತ್ತರಿಸಿ ಒಳಗೆ ಇಳಿದಿರುವುದು ನಗರದ ಇತರೆ ಅಂಗಡಿ ಮಾಲೀಕರ ನಿದ್ದೆಗಡೆಸಿದೆ.

ಸೋಫಾ ಹಾಗೂ ಗ್ರ್ಯಾನೈಟ್ ಅಂಗಡಿಗಳ ಗಲ್ಲಾ ಪೆಟ್ಟಿಗೆಯಲ್ಲಿ ಒಂದೆರಡು ಸಾವಿರ ಚಿಲ್ಲರೆ ಹಣ ಬಿಟ್ಟರೆ ಇತರೆ ಬೆಲೆ ಬಾಳುವ ವಸ್ತುಗಳು ಇರಲಿಲ್ಲ. ಸೋಫಾ ಸೆಟ್ಗಳನ್ನು ಮೇಲ್ಛಾವಣಿ ಮೂಲಕ ಸಾಗಿಸಲು ಸಾಧ್ಯವಾಗದೆ ಚಿಲ್ಲರೆ ಕಾಸಿಗಷ್ಟೆ ತೃಪ್ತಿಪಟ್ಟು ಹೋಗಿದ್ದಾರೆ. ಅಂಗಡಿಯಲ್ಲಿನ ಇತರೆ ವಸ್ತುಗಳಿಗೆ ಯಾವುದೇ ರೀತಿಯ ಹಾನಿಯನ್ನು ಮಾಡಿಲ್ಲ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.

Ramesh Babu

Journalist

Recent Posts

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

1 hour ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

4 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

5 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

16 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

16 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

19 hours ago