ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ರಸ್ತೆಯ ಎಲ್ಐಸಿ ಕಚೇರಿ ಸಮೀಪದ ಇಂಪೀರಿಯರ್ ಸೋಫಾ ಸೇಟ್ ಅಂಗಡಿ ಹಾಗೂ ಕೃಷ್ಣಪ್ಪ ಗ್ರ್ಯಾನೈಟ್ ಅಂಗಡಿಗಳ ಮೇಲ್ಛಾವಣಿಯ ತಗಡಿನ ಶೀಟ್ ಗಳನ್ನು ಕತ್ತರಿಸಿ ಒಳ ನುಗ್ಗಿರುವ ಕಳ್ಳರು ಬರಿಗೈಯಲ್ಲಿ ಹೋಗಿರುವ ಪ್ರಕರಣ ಬುಧವಾರ ರಾತ್ರಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇದೇ ರಸ್ತೆಯ ಬದಿಯಲ್ಲಿನ ಮನೆಗಳ ಬಳಿ ನಿಲ್ಲಿಸಿದ್ದ ಲಾರಿ, ನೀರಿನ ಟ್ಯಾಂಕರ್ಗಳಲ್ಲಿ ಬ್ಯಾಟರಿ, ಡೀಸೆಲ್ ಸೇರಿದಂತೆ ಇತರೆ ವಸ್ತುಗಳನ್ನು ನಾಲ್ಕು ದಿನಗಳ ಹಿಂದೆಯಷ್ಟೇ ಕಳವು ಮಾಡಲಾಗಿತ್ತು. ಈ ಕಳವು ಪ್ರಕರಣ ಮರೆಯುವ ಮುನ್ನವೇ ಬುಧವಾರ ರಾತ್ರಿ ಅಂಗಡಿಯ ಮೇಲ್ಛಾವಣಿ ತಗಡಿನ ಶೀಟ್ಗಳನ್ನು ಕತ್ತರಿಸಿ ಒಳಗೆ ಇಳಿದಿರುವುದು ನಗರದ ಇತರೆ ಅಂಗಡಿ ಮಾಲೀಕರ ನಿದ್ದೆಗಡೆಸಿದೆ.
ಸೋಫಾ ಹಾಗೂ ಗ್ರ್ಯಾನೈಟ್ ಅಂಗಡಿಗಳ ಗಲ್ಲಾ ಪೆಟ್ಟಿಗೆಯಲ್ಲಿ ಒಂದೆರಡು ಸಾವಿರ ಚಿಲ್ಲರೆ ಹಣ ಬಿಟ್ಟರೆ ಇತರೆ ಬೆಲೆ ಬಾಳುವ ವಸ್ತುಗಳು ಇರಲಿಲ್ಲ. ಸೋಫಾ ಸೆಟ್ಗಳನ್ನು ಮೇಲ್ಛಾವಣಿ ಮೂಲಕ ಸಾಗಿಸಲು ಸಾಧ್ಯವಾಗದೆ ಚಿಲ್ಲರೆ ಕಾಸಿಗಷ್ಟೆ ತೃಪ್ತಿಪಟ್ಟು ಹೋಗಿದ್ದಾರೆ. ಅಂಗಡಿಯಲ್ಲಿನ ಇತರೆ ವಸ್ತುಗಳಿಗೆ ಯಾವುದೇ ರೀತಿಯ ಹಾನಿಯನ್ನು ಮಾಡಿಲ್ಲ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…