ಸೋಫಾ ಸೆಟ್ ಅಂಗಡಿ ಮೇಲ್ಛಾವಣಿ ಶೀಟ್ ಕತ್ತರಿಸಿ ಒಳನುಗ್ಗಿದ ಕಳ್ಳರು

ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ರಸ್ತೆಯ ಎಲ್ಐಸಿ ಕಚೇರಿ ಸಮೀಪದ ಇಂಪೀರಿಯರ್ ಸೋಫಾ ಸೇಟ್ ಅಂಗಡಿ ಹಾಗೂ ಕೃಷ್ಣಪ್ಪ ಗ್ರ್ಯಾನೈಟ್ ಅಂಗಡಿಗಳ ಮೇಲ್ಛಾವಣಿಯ ತಗಡಿನ ಶೀಟ್ ಗಳನ್ನು ಕತ್ತರಿಸಿ ಒಳ ನುಗ್ಗಿರುವ ಕಳ್ಳರು ಬರಿಗೈಯಲ್ಲಿ ಹೋಗಿರುವ ಪ್ರಕರಣ ಬುಧವಾರ ರಾತ್ರಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇದೇ ರಸ್ತೆಯ ಬದಿಯಲ್ಲಿನ ಮನೆಗಳ ಬಳಿ ನಿಲ್ಲಿಸಿದ್ದ ಲಾರಿ, ನೀರಿನ ಟ್ಯಾಂಕರ್ಗಳಲ್ಲಿ ಬ್ಯಾಟರಿ, ಡೀಸೆಲ್ ಸೇರಿದಂತೆ ಇತರೆ ವಸ್ತುಗಳನ್ನು ನಾಲ್ಕು ದಿನಗಳ ಹಿಂದೆಯಷ್ಟೇ ಕಳವು ಮಾಡಲಾಗಿತ್ತು. ಈ ಕಳವು ಪ್ರಕರಣ ಮರೆಯುವ ಮುನ್ನವೇ ಬುಧವಾರ ರಾತ್ರಿ ಅಂಗಡಿಯ ಮೇಲ್ಛಾವಣಿ ತಗಡಿನ ಶೀಟ್ಗಳನ್ನು ಕತ್ತರಿಸಿ ಒಳಗೆ ಇಳಿದಿರುವುದು ನಗರದ ಇತರೆ ಅಂಗಡಿ ಮಾಲೀಕರ ನಿದ್ದೆಗಡೆಸಿದೆ.

ಸೋಫಾ ಹಾಗೂ ಗ್ರ್ಯಾನೈಟ್ ಅಂಗಡಿಗಳ ಗಲ್ಲಾ ಪೆಟ್ಟಿಗೆಯಲ್ಲಿ ಒಂದೆರಡು ಸಾವಿರ ಚಿಲ್ಲರೆ ಹಣ ಬಿಟ್ಟರೆ ಇತರೆ ಬೆಲೆ ಬಾಳುವ ವಸ್ತುಗಳು ಇರಲಿಲ್ಲ. ಸೋಫಾ ಸೆಟ್ಗಳನ್ನು ಮೇಲ್ಛಾವಣಿ ಮೂಲಕ ಸಾಗಿಸಲು ಸಾಧ್ಯವಾಗದೆ ಚಿಲ್ಲರೆ ಕಾಸಿಗಷ್ಟೆ ತೃಪ್ತಿಪಟ್ಟು ಹೋಗಿದ್ದಾರೆ. ಅಂಗಡಿಯಲ್ಲಿನ ಇತರೆ ವಸ್ತುಗಳಿಗೆ ಯಾವುದೇ ರೀತಿಯ ಹಾನಿಯನ್ನು ಮಾಡಿಲ್ಲ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

10 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

21 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 day ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago