ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ರಸ್ತೆಯ ಎಲ್ಐಸಿ ಕಚೇರಿ ಸಮೀಪದ ಇಂಪೀರಿಯರ್ ಸೋಫಾ ಸೇಟ್ ಅಂಗಡಿ ಹಾಗೂ ಕೃಷ್ಣಪ್ಪ ಗ್ರ್ಯಾನೈಟ್ ಅಂಗಡಿಗಳ ಮೇಲ್ಛಾವಣಿಯ ತಗಡಿನ ಶೀಟ್ ಗಳನ್ನು ಕತ್ತರಿಸಿ ಒಳ ನುಗ್ಗಿರುವ ಕಳ್ಳರು ಬರಿಗೈಯಲ್ಲಿ ಹೋಗಿರುವ ಪ್ರಕರಣ ಬುಧವಾರ ರಾತ್ರಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇದೇ ರಸ್ತೆಯ ಬದಿಯಲ್ಲಿನ ಮನೆಗಳ ಬಳಿ ನಿಲ್ಲಿಸಿದ್ದ ಲಾರಿ, ನೀರಿನ ಟ್ಯಾಂಕರ್ಗಳಲ್ಲಿ ಬ್ಯಾಟರಿ, ಡೀಸೆಲ್ ಸೇರಿದಂತೆ ಇತರೆ ವಸ್ತುಗಳನ್ನು ನಾಲ್ಕು ದಿನಗಳ ಹಿಂದೆಯಷ್ಟೇ ಕಳವು ಮಾಡಲಾಗಿತ್ತು. ಈ ಕಳವು ಪ್ರಕರಣ ಮರೆಯುವ ಮುನ್ನವೇ ಬುಧವಾರ ರಾತ್ರಿ ಅಂಗಡಿಯ ಮೇಲ್ಛಾವಣಿ ತಗಡಿನ ಶೀಟ್ಗಳನ್ನು ಕತ್ತರಿಸಿ ಒಳಗೆ ಇಳಿದಿರುವುದು ನಗರದ ಇತರೆ ಅಂಗಡಿ ಮಾಲೀಕರ ನಿದ್ದೆಗಡೆಸಿದೆ.
ಸೋಫಾ ಹಾಗೂ ಗ್ರ್ಯಾನೈಟ್ ಅಂಗಡಿಗಳ ಗಲ್ಲಾ ಪೆಟ್ಟಿಗೆಯಲ್ಲಿ ಒಂದೆರಡು ಸಾವಿರ ಚಿಲ್ಲರೆ ಹಣ ಬಿಟ್ಟರೆ ಇತರೆ ಬೆಲೆ ಬಾಳುವ ವಸ್ತುಗಳು ಇರಲಿಲ್ಲ. ಸೋಫಾ ಸೆಟ್ಗಳನ್ನು ಮೇಲ್ಛಾವಣಿ ಮೂಲಕ ಸಾಗಿಸಲು ಸಾಧ್ಯವಾಗದೆ ಚಿಲ್ಲರೆ ಕಾಸಿಗಷ್ಟೆ ತೃಪ್ತಿಪಟ್ಟು ಹೋಗಿದ್ದಾರೆ. ಅಂಗಡಿಯಲ್ಲಿನ ಇತರೆ ವಸ್ತುಗಳಿಗೆ ಯಾವುದೇ ರೀತಿಯ ಹಾನಿಯನ್ನು ಮಾಡಿಲ್ಲ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…