ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ರಸ್ತೆಯ ಎಲ್ಐಸಿ ಕಚೇರಿ ಸಮೀಪದ ಇಂಪೀರಿಯರ್ ಸೋಫಾ ಸೇಟ್ ಅಂಗಡಿ ಹಾಗೂ ಕೃಷ್ಣಪ್ಪ ಗ್ರ್ಯಾನೈಟ್ ಅಂಗಡಿಗಳ ಮೇಲ್ಛಾವಣಿಯ ತಗಡಿನ ಶೀಟ್ ಗಳನ್ನು ಕತ್ತರಿಸಿ ಒಳ ನುಗ್ಗಿರುವ ಕಳ್ಳರು ಬರಿಗೈಯಲ್ಲಿ ಹೋಗಿರುವ ಪ್ರಕರಣ ಬುಧವಾರ ರಾತ್ರಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇದೇ ರಸ್ತೆಯ ಬದಿಯಲ್ಲಿನ ಮನೆಗಳ ಬಳಿ ನಿಲ್ಲಿಸಿದ್ದ ಲಾರಿ, ನೀರಿನ ಟ್ಯಾಂಕರ್ಗಳಲ್ಲಿ ಬ್ಯಾಟರಿ, ಡೀಸೆಲ್ ಸೇರಿದಂತೆ ಇತರೆ ವಸ್ತುಗಳನ್ನು ನಾಲ್ಕು ದಿನಗಳ ಹಿಂದೆಯಷ್ಟೇ ಕಳವು ಮಾಡಲಾಗಿತ್ತು. ಈ ಕಳವು ಪ್ರಕರಣ ಮರೆಯುವ ಮುನ್ನವೇ ಬುಧವಾರ ರಾತ್ರಿ ಅಂಗಡಿಯ ಮೇಲ್ಛಾವಣಿ ತಗಡಿನ ಶೀಟ್ಗಳನ್ನು ಕತ್ತರಿಸಿ ಒಳಗೆ ಇಳಿದಿರುವುದು ನಗರದ ಇತರೆ ಅಂಗಡಿ ಮಾಲೀಕರ ನಿದ್ದೆಗಡೆಸಿದೆ.
ಸೋಫಾ ಹಾಗೂ ಗ್ರ್ಯಾನೈಟ್ ಅಂಗಡಿಗಳ ಗಲ್ಲಾ ಪೆಟ್ಟಿಗೆಯಲ್ಲಿ ಒಂದೆರಡು ಸಾವಿರ ಚಿಲ್ಲರೆ ಹಣ ಬಿಟ್ಟರೆ ಇತರೆ ಬೆಲೆ ಬಾಳುವ ವಸ್ತುಗಳು ಇರಲಿಲ್ಲ. ಸೋಫಾ ಸೆಟ್ಗಳನ್ನು ಮೇಲ್ಛಾವಣಿ ಮೂಲಕ ಸಾಗಿಸಲು ಸಾಧ್ಯವಾಗದೆ ಚಿಲ್ಲರೆ ಕಾಸಿಗಷ್ಟೆ ತೃಪ್ತಿಪಟ್ಟು ಹೋಗಿದ್ದಾರೆ. ಅಂಗಡಿಯಲ್ಲಿನ ಇತರೆ ವಸ್ತುಗಳಿಗೆ ಯಾವುದೇ ರೀತಿಯ ಹಾನಿಯನ್ನು ಮಾಡಿಲ್ಲ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…