ಸೋಬಾನೆ ಹಾಡುಗಳ ಕಲಾವಿದೆಗೆ ಒಲಿದ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರ: 2023ನೇ ಸಾಲಿನ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಸೋಬಾನೆ ಹಾಡುಗಳ ಕಲಾವಿದೆ ತಾಲ್ಲೂಕಿನ ನಾಗಸಂದ್ರ ಗ್ರಾಮದ ಓಬವ್ವ ಅವರಿಗೆ ಲಭಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಚಲಿತದಲ್ಲಿ ಇರುವ ಸೋಬಾನೆ ಪದಗಳನ್ನು ಕುಟುಂಬದಲ್ಲಿನ ಹಿರಿಯರಿಂದ ಕಲಿತಿರುವ ಓಬಮ್ಮ ಹಲವಾರು ವೇದಿಕೆಗಳಲ್ಲಿ ಹಾಡಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆಯುವ ಜಾನಪದ ಉತ್ಸವ, ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ಷೇತ್ರದಲ್ಲಿನ ಉತ್ಸವ ಹಾಗೂ ಬೆಂಗಳೂರು ಆಕಾಶವಾಣಿ ಕೇಂದ್ರದ ವತಿಯಿಂದ ನಡೆದ ಶಿಬಿರಗಳಲ್ಲು ಭಾಗವಹಿಸಿ ಸೋಬಾನೆ ಪದಗಳನ್ನು ಹಾಡಿದ್ದಾರೆ.

ತಾಲ್ಲೂಕು ಕಲಾವಿದರ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಶುಭ ಸಮಾರಂಭಗಳಿಂದ ಸಾವಿನ ಮನೆಯಲ್ಲಿನ ದುಖಃವನ್ನು ಮರೆಸುವವರೆಗೆ ಎಲ್ಲಾ ರೀತಿಯ ಜಾನಪದ ಗೀತೆಗಳನ್ನು ಹಾಡುವ ಓಬಮ್ಮ ಅವರ ಹಾಡು ಗಾರಿಕೆಯನ್ನು ಗುರುತಿಸಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ, ದೊಡ್ಡಳ್ಳಾಪುರದ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರ ಸಾಂಸ್ಕೃತಿ ಸಮಿತಿ ವತಿಯಿಂದ ಗೌರವಿಸಲಾಗಿದೆ.

Ramesh Babu

Journalist

Recent Posts

ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿದ ಶಾಸಕ ಸಿ.ಬಿ.ಸುರೇಶ್ ಬಾಬು

  *ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 hour ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

22 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

22 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

1 day ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

4 days ago