ಸೋಬಾನೆ ಹಾಡುಗಳ ಕಲಾವಿದೆಗೆ ಒಲಿದ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರ: 2023ನೇ ಸಾಲಿನ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಸೋಬಾನೆ ಹಾಡುಗಳ ಕಲಾವಿದೆ ತಾಲ್ಲೂಕಿನ ನಾಗಸಂದ್ರ ಗ್ರಾಮದ ಓಬವ್ವ ಅವರಿಗೆ ಲಭಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಚಲಿತದಲ್ಲಿ ಇರುವ ಸೋಬಾನೆ ಪದಗಳನ್ನು ಕುಟುಂಬದಲ್ಲಿನ ಹಿರಿಯರಿಂದ ಕಲಿತಿರುವ ಓಬಮ್ಮ ಹಲವಾರು ವೇದಿಕೆಗಳಲ್ಲಿ ಹಾಡಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆಯುವ ಜಾನಪದ ಉತ್ಸವ, ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ಷೇತ್ರದಲ್ಲಿನ ಉತ್ಸವ ಹಾಗೂ ಬೆಂಗಳೂರು ಆಕಾಶವಾಣಿ ಕೇಂದ್ರದ ವತಿಯಿಂದ ನಡೆದ ಶಿಬಿರಗಳಲ್ಲು ಭಾಗವಹಿಸಿ ಸೋಬಾನೆ ಪದಗಳನ್ನು ಹಾಡಿದ್ದಾರೆ.

ತಾಲ್ಲೂಕು ಕಲಾವಿದರ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಶುಭ ಸಮಾರಂಭಗಳಿಂದ ಸಾವಿನ ಮನೆಯಲ್ಲಿನ ದುಖಃವನ್ನು ಮರೆಸುವವರೆಗೆ ಎಲ್ಲಾ ರೀತಿಯ ಜಾನಪದ ಗೀತೆಗಳನ್ನು ಹಾಡುವ ಓಬಮ್ಮ ಅವರ ಹಾಡು ಗಾರಿಕೆಯನ್ನು ಗುರುತಿಸಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ, ದೊಡ್ಡಳ್ಳಾಪುರದ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರ ಸಾಂಸ್ಕೃತಿ ಸಮಿತಿ ವತಿಯಿಂದ ಗೌರವಿಸಲಾಗಿದೆ.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

12 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 days ago