ದೊಡ್ಡಬಳ್ಳಾಪುರ: 2023ನೇ ಸಾಲಿನ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಸೋಬಾನೆ ಹಾಡುಗಳ ಕಲಾವಿದೆ ತಾಲ್ಲೂಕಿನ ನಾಗಸಂದ್ರ ಗ್ರಾಮದ ಓಬವ್ವ ಅವರಿಗೆ ಲಭಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಚಲಿತದಲ್ಲಿ ಇರುವ ಸೋಬಾನೆ ಪದಗಳನ್ನು ಕುಟುಂಬದಲ್ಲಿನ ಹಿರಿಯರಿಂದ ಕಲಿತಿರುವ ಓಬಮ್ಮ ಹಲವಾರು ವೇದಿಕೆಗಳಲ್ಲಿ ಹಾಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆಯುವ ಜಾನಪದ ಉತ್ಸವ, ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ಷೇತ್ರದಲ್ಲಿನ ಉತ್ಸವ ಹಾಗೂ ಬೆಂಗಳೂರು ಆಕಾಶವಾಣಿ ಕೇಂದ್ರದ ವತಿಯಿಂದ ನಡೆದ ಶಿಬಿರಗಳಲ್ಲು ಭಾಗವಹಿಸಿ ಸೋಬಾನೆ ಪದಗಳನ್ನು ಹಾಡಿದ್ದಾರೆ.
ತಾಲ್ಲೂಕು ಕಲಾವಿದರ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಶುಭ ಸಮಾರಂಭಗಳಿಂದ ಸಾವಿನ ಮನೆಯಲ್ಲಿನ ದುಖಃವನ್ನು ಮರೆಸುವವರೆಗೆ ಎಲ್ಲಾ ರೀತಿಯ ಜಾನಪದ ಗೀತೆಗಳನ್ನು ಹಾಡುವ ಓಬಮ್ಮ ಅವರ ಹಾಡು ಗಾರಿಕೆಯನ್ನು ಗುರುತಿಸಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ, ದೊಡ್ಡಳ್ಳಾಪುರದ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರ ಸಾಂಸ್ಕೃತಿ ಸಮಿತಿ ವತಿಯಿಂದ ಗೌರವಿಸಲಾಗಿದೆ.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…