Categories: ಲೇಖನ

ಸೌಂದರ್ಯ ಪ್ರಜ್ಞೆ ಮತ್ತು ಜಾಹೀರಾತು……

ಸೌಂದರ್ಯ ಪ್ರಜ್ಞೆ ಮತ್ತು ಜಾಹೀರಾತು……

ಮನುಷ್ಯ ರೂಪದ ಸೌಂದರ್ಯ ಪ್ರಜ್ಞೆ ಎಂಬ ವಿಸ್ಮಯ………..

ಒಬ್ಬ ಅತ್ಯಂತ ಸುಂದರ ಯುವಕ/ ಯುವತಿ ನಮಗೆ ಪರಿಚಯವಾಗುತ್ತಾರೆ. ಕೊನೆಗೆ ಅದು ಆತ್ಮೀಯ ಸ್ನೇಹವಾಗಿ ಮುಂದೆ ವ್ಯಾವಹಾರಿಕ ಸಂಬಂಧವೂ ಏರ್ಪಡುತ್ತದೆ. ಆಗ ಆ ವ್ಯಕ್ತಿ ನಮ್ಮ ಜೊತೆ ಉತ್ತಮ ಬಾಂಧವ್ಯ ಹೊಂದಿರುವವರೆಗೂ ಆತ ಅಥವಾ ಆಕೆ ಸುಂದರವಾಗಿಯೇ ಕಾಣುತ್ತಾರೆ. ಆದರೆ ಏನೋ ಕಾರಣದಿಂದಾಗಿ ಆ ಸುಂದರ ವ್ಯಕ್ತಿಯಿಂದ ನಮಗೆ ಮೋಸವಾಗುತ್ತದೆ ಎಂದು ಭಾವಿಸಿ. ಆಗ
ಯಾವ ಸುಂದರ ವ್ಯಕ್ತಿ ತನ್ನ ಸೌಂದರ್ಯದಿಂದ ನಮ್ಮ ಮನ ಗೆದ್ದಿದ್ದರೋ ಅದೇ ವ್ಯಕ್ತಿ ಈಗ ನಮಗೆ ಕೆಟ್ಟದಾಗಿ, ಕುರೂಪಿಯಾಗಿ ಕಾಣತೊಡಗುತ್ತಾರೆ. ಅವರ ಮುಖ ನೋಡಲೇ ಅಸಹ್ಯವಾಗುತ್ತದೆ‌.
ಅದೇ ಬಾಹ್ಯ ಸೌಂದರ್ಯ ವ್ಯಾವಹಾರಿಕ ವ್ಯತ್ಯಾಸದಿಂದ ನಮಗೆ ಆ ರೀತಿಯ ಭಾವನೆ ಉಂಟು ಮಾಡುತ್ತದೆ….

ಅದೇ ರೀತಿ ಒಬ್ಬ ಕುರೂಪಿ ವ್ಯಕ್ತಿ ಅಥವಾ ನೋಡಲು ಅಷ್ಟೇನು ಚಂದವಿಲ್ಲದ ವ್ಯಕ್ತಿ ನಮ್ಮ ಜೀವನದ ಅತ್ಯಂತ ಕಷ್ಟದ ದಿನಗಳಲ್ಲಿ ನಮಗೆ ಸಹಾಯ ಮಾಡಿದರೆ ಅದೇ ಕುರೂಪಿ ವ್ಯಕ್ತಿಯ ಚಿತ್ರಣ ನಮ್ಮ ಮನಸ್ಸಿನಲ್ಲಿ ಬದಲಾವಣೆ ಹೊಂದಿ ಸುಂದರವಾಗಿ ಕಾಣತೊಡಗುತ್ತಾರೆ.
ಅವರ ನಡವಳಿಕೆಗಳು ನಮಗೆ ಆತ್ಮೀಯತೆಯ‌ ಅನುಭವ ನೀಡುತ್ತದೆ….

ಅಂದರೆ ವ್ಯಕ್ತಿಯ ಸೌಂದರ್ಯ ಆತ ನಮ್ಮೊಡನೆ ಹೊಂದಿರುವ ಸಂಬಂಧದಿಂದ ಮತ್ತು ಆತನ ಬಗೆಗಿನ ನಮ್ಮ ಅಭಿಪ್ರಾಯದಿಂದ ನಿರ್ಧರಿಸಲ್ಪಡುತ್ತದೆ ಎಂದಾಯಿತು. ಹಾಗಾದರೆ ಮೇಲ್ನೋಟದ ಸೌಂದರ್ಯವನ್ನು ದೀರ್ಘಕಾಲದಲ್ಲಿ ನಿರ್ಧರಿಸುವುದು ನಮ್ಮ ಗುಣ – ನಡವಳಿಕೆ ಎಂದು ಭಾವಿಸಬಹುದಲ್ಲವೇ……

ಇದೇ ಆಧಾರದ ಮೇಲೆ ಬಹುತೇಕ ಸಿನಿಮಾಗಳು, ಅದರಲ್ಲಿ ನಟಿಸುವ ನಟ ನಟಿಯರ ಗುಣ ರೂಪಗಳು ಸೃಷ್ಟಿಯಾಗಿವೆ. ಒಬ್ಬ ಯುವತಿಯನ್ನು 5/6 ಜನ ಯುವಕರು ಅತ್ಯಾಚಾರ ಮಾಡಲು ಪ್ರಯತ್ನಿಸುತ್ತಾರೆ. ಆಕೆ ಆ ಸಮಯದಲ್ಲಿ ಅಸಹಾಯಕಳಾಗಿರುತ್ತಾಳೆ. ಅದೇ ಸಮಯಕ್ಕೆ ಆಪದ್ಭಾಂದವನಂತೆ ಪ್ರತ್ಯಕ್ಷವಾಗುವ ನಾಯಕ ಆಕ್ರೋಶದಿಂದ ಆ ಎಲ್ಲಾ ಜನರನ್ನು ಹೊಡೆದು ನಾಯಕಿಯನ್ನು ರಕ್ಷಿಸುತ್ತಾನೆ. ನೋಡುವ ಪ್ರೇಕ್ಷಕನಿಗೆ ಅವನ ಒಳ್ಳೆಯತನದಿಂದಲೇ ಸುಂದರ ನಾಯಕನಾಗಿ ಕಾಣುತ್ತಾನೆ. ಆ ಯುವಕರು ನೋಡಲು ಸುಂದರವಾಗಿದ್ದರೂ ವಿಲನ್ ಗಳಂತೆ ಕೆಟ್ಟದಾಗಿ ಕಾಣುತ್ತಾರೆ. ಅಂದರೆ ಬಾಹ್ಯ ಸೌಂದರ್ಯ ಭ್ರಮೆ ಮತ್ತು ತಾತ್ಕಾಲಿಕ. ಆತನ ಒಳ್ಳೆಯತನವೇ ನಿಜ ಮತ್ತು ಶಾಶ್ವತ ಸೌಂದರ್ಯ ಎಂದು ಪರಿಗಣಿಸಬಹುದಲ್ಲವೇ……

ಇದೇ ಸತ್ಯವಾದಲ್ಲಿ ಎಷ್ಟೊಂದು ಚೆಂದ ಅಲ್ಲವೆ. ಒಂದು ವೇಳೆ ನಮ್ಮ ಸೌಂದರ್ಯವನ್ನು ನಮ್ಮ ಒಳ್ಳೆಯ ನಡತೆ ನಿರ್ಧರಿಸುವುದಾದರೆ ಅದು ಅನೇಕರಿಗೆ ಉತ್ತಮ ನಾಗರಿಕ ನಡವಳಿಕೆಯನ್ನು ರೂಪಿಸಿಕೊಳ್ಳಲು ಪ್ರೇರಣೆಯಾಗಬಹುದಲ್ಲವೇ.
ಬಾಹ್ಯ ಸೌಂದರ್ಯ ಕೇವಲ ಮೊದಲ ನೋಟದ Physical ಅಪಿಯರೆನ್ಸ್ ಮಾತ್ರ ಮತ್ತು ಭ್ರಮೆ. ನಿಮ್ಮ ಗುಣವೇ ಶಾಶ್ವತ ಸೌಂದರ್ಯ….

ಸಮಾಜದ ಎಲ್ಲರ ಮನಸ್ಸು – ಆತ್ಮ – ವ್ಯಕ್ತಿತ್ವಗಳಲ್ಲಿ ಇದು ನೆಲೆಗೊಳ್ಳಲಿ ಎಂದು ಆಶಿಸುತ್ತಾ………………….

ಈ ಸೌಂದರ್ಯ ಜಾಹೀರಾತು ಮಾಡೆಲ್ ಗಳಿಗೆ……

ಓ ,
ಹಾಲು ಬಿಳುಪಿನ ಸುರಸುಂದರಾಂಗಿಣಿಯೇ,
ಹಾಯ್,
ಚೆಲುವಾಂತ ಚೆನ್ನಿಗ ಮನ್ಮಥನೇ,

Fair & Lovely – Fair & Handsome ಜಾಹೀರಾತುಗಳ ಸಪ್ತಲೋಕದಲ್ಲೂ ಮಿಂಚುವ ಮಾಡಲ್ ಗಳೇ,

ನಿಮ್ಮ ಸೌಂದರ್ಯಕ್ಕೆ – ಅದೃಷ್ಟಕ್ಕೆ ಅಭಿನಂದನೆಗಳು.
ಆ Product ಗಳ Brand Ambassador ಆಗಿರುವುಕ್ಕೆ ಸಂತೋಷ.
ಆದರೆ,……

ಪಕ್ಕದ ಮನೆಯ ಆ ಕಪ್ಪಗಿನ ಹುಡುಗಿಯೊಬ್ಬಳು,
ಈ ನೆಲದಲ್ಲಿ ಹುಟ್ಟಿರುವುದಕ್ಕೆ,
ತನ್ನ ನಿಯಂತ್ರಣದಲ್ಲಿಲ್ಲದ ದೇಹದ ಬಣ್ಣದ ಕಾರಣಕ್ಕಾಗಿ ಮದುವೆಯಾಗದೆ ತನ್ನೊಳಗೇ ಕೊರಗುತ್ತಿದ್ದಾಳೆ,
ಮೊದಲು ಅವಳಿಗೆ ಹೇಳಿ,
” ಬಣ್ಣಗಳಲ್ಲಿ ಯಾವುದು ಶ್ರೇಷ್ಠ ಎಂದು “……..

ಆಕರ್ಷಕ ದೇಹದ ಮಾಡಲ್ ಲೋಕದ ದೇವಾನು ದೇವತೆಗಳೇ,
ಸೂಟು ಬೂಟಿನ ಮಿರಿಮಿರಿ ಮಿಂಚುವ ಬಟ್ಟೆಗಳ ದಿಗ್ಗಜರೇ…..

ರೈಲು ನಿಲ್ದಾಣದ ಆ ಕಲ್ಲು ಬೆಂಚಿನ ಮೇಲೆ ಅರೆ ಬಟ್ಟೆಯಲ್ಲಿ ಮಲಗಿರುವ ನಮ್ಮದೇ ಕಂದಮ್ಮಗಳಿಗೆ ಒಮ್ಮೆ ತಿಳಿ ಹೇಳಿ,
ಅವರ ಬದುಕಿನ Brand ambassador ಯಾರೆಂದು….

Shampoo – Soap – Perfume ಗಳ ಘಮಲುಗಳಲ್ಲಿ ಮುಳುಗೇಳುವ ರಾಜಕುಮಾರ ರಾಜಕುಮಾರಿಯರೇ,

ನಮ್ಮ ಹಳ್ಳಿಯ ಅಜ್ಜಿಯ ಹೇನು ಬಿದ್ದ ತಲೆಯ ಕೆರೆತ ಕಡಿಮೆಯಾಗಲು ಏನು ಮಾಡಬೇಕೆಂದು ಸ್ವಲ್ಪ ಹೇಳಿ‌.
ಅದಕ್ಕೂ ಪ್ರಚಾರ ರಾಯಭಾರಿಗಳಾಗುವಿರೇ ….

ಚಿನ್ನ ವಜ್ರ ಒಡವೆಗಳ ರಾಯಭಾರಿಗಳೇ,
ಅಪ್ಸರೆಯರೇ,

ವಿಧವೆಯರಿಗೆ ಮಾಸಾಶನ ಅರ್ಜಿ ಎಲ್ಲಿ ಸಿಗುತ್ತದೆ , ಅದನ್ನು ಭರ್ತಿ ಮಾಡುವುದು ಹೇಗೆ ಸ್ವಲ್ಪ ತಿಳಿಸಿಕೊಡಿ.
ಅವರಿಗಾರು Brand ambassador ಗಳು…..

ಏಕೆಂದರೆ ಅವರೂ ಇದೇ ನೆಲದಲ್ಲಿ ಹುಟ್ಟಿದ್ದಾರೆ. ನಿಮ್ಮಂತೆಯೇ ಗಂಡು ಹೆಣ್ಣಿನ ಮಿಲನದ ಕೂಸುಗಳು . ನಿಮ್ಮ ಹತ್ತುಪಟ್ಟು ಶಕ್ತಿ ಸಾಮರ್ಥ್ಯ ಶ್ರಮ ಪ್ರಾಮಾಣಿಕತೆ ಅವರಿಗಿದೆ.

ಆದರೆ….

ನಿಮ್ಮಂತ ಮುಖವಾಡಗಳಿಲ್ಲ.
ಅವರು ಕೇವಲ ಮನುಷ್ಯ ಜೀವಿಗಳು.
ಕಪಟ ಅರಿಯದ ಸೃಷ್ಟಿಯ ಕೂಸುಗಳು.
ಶ್ರೀಮಂತರ ಅವಶ್ಯಕತೆಗಳನ್ನು ಪೂರೈಸಲು ಎಲ್ಲಾ ವ್ಯವಸ್ಥೆಗಳು ಇವೆ.
ಆದರೆ ಸಂಕಷ್ಟದ ಜನರ ನೋವುಗಳನ್ನು ಆಲಿಸಲು ಇರುವುದಾದರೂ ಯಾರು…. ?

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

3 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

14 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

15 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

20 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

22 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago