ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ RDPR ದೊಡ್ಡಬಳ್ಳಾಪುರ ವತಿಯಿಂದ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ರಣರೋಚಕ ಫೈನಲ್ ಪಂದ್ಯದಲ್ಲಿ ಪೊಲೀಸ್ ಇಲಾಖೆ ಕಡೆಯ ಓವರ್ ನಲ್ಲಿ ಆರ್ ಡಿಪಿಆರ್ ಎದುರು ವಿಜಯ ಸಾಧಿಸಿ 2023-24ನೇ ಸಾಲಿನ ಸೌಹಾರ್ದ ಕ್ರಿಕೆಟ್ ಕಪ್ ಗೆಲ್ಲುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ(RDPR) ತಂಡ ರನ್ನರ್ಸ್ ಪ್ರಶಸ್ತಿ ಪಡೆಯಿತು. ಕಂದಾಯ ಇಲಾಖೆ ತಂಡ ಹಾಗೂ ಮಾಧ್ಯಮ ಬಳಗ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವು.
ದ್ವಿತೀಯ ಪಂದ್ಯ ಕಂದಾಯ ಇಲಾಖೆ ಹಾಗೂ ಆರ್ ಡಿಪಿಆರ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್ ಡಿಪಿಆರ್ ವಿಜಯ ಸಾಧಿಸಿತು. ಮೂರನೇ ಸ್ಥಾನಕ್ಕಾಗಿ ನಡೆದ ಪೈಫೋಟಿಯಲ್ಲಿ ಕಂದಾಯ ಇಲಾಖೆಯ ಆಟಗಾರರು ಮಾಧ್ಯಮ ಬಳಗಕ್ಕೆ ಸೋಲುಣಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಕ್ರೀಡಾಂಗಣಕ್ಕೆ ಆಗಮಿಸಿ ಎಲ್ಲ ತಂಡದ ಅಟಗಾರರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಮುನಿಕೃಷ್ಣ ನಗರ ಠಾಣೆ ಪಿಐ ಅಮರೇಶ್ ಗೌಡ, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಪಿಐ ಎಂ.ಆರ್.ಹರೀಶ್, ಹೊಸಹಳ್ಳಿ ಠಾಣೆ ಪಿಐ ರಾವ್ ಗಣೇಶ್ ಇತರರು ಇದ್ದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…