ಸೌಹಾರ್ದ ಕ್ರಿಕೆಟ್ ಕಪ್ ಗೆದ್ದ ಪೊಲೀಸ್ ತಂಡ: ರನ್ನರ್ಸ್ ಅಪ್ ಪ್ರಶಸ್ತಿ ಪಡೆದ RDPR ತಂಡ

ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ RDPR ದೊಡ್ಡಬಳ್ಳಾಪುರ ವತಿಯಿಂದ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ರಣರೋಚಕ‌ ಫೈನಲ್ ಪಂದ್ಯದಲ್ಲಿ ಪೊಲೀಸ್ ಇಲಾಖೆ ಕಡೆಯ ಓವರ್ ನಲ್ಲಿ ಆರ್ ಡಿಪಿಆರ್ ಎದುರು ವಿಜಯ ಸಾಧಿಸಿ 2023-24ನೇ ಸಾಲಿನ ಸೌಹಾರ್ದ ಕ್ರಿಕೆಟ್ ಕಪ್ ಗೆಲ್ಲುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ(RDPR) ತಂಡ ರನ್ನರ್ಸ್ ಪ್ರಶಸ್ತಿ ಪಡೆಯಿತು. ಕಂದಾಯ ಇಲಾಖೆ ತಂಡ‌ ಹಾಗೂ ಮಾಧ್ಯಮ ಬಳಗ ಕ್ರಮವಾಗಿ ಮೂರು‌ ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವು.

ಮಾಧ್ಯಮ ಬಳಗ ಹಾಗೂ ಪೊಲೀಸ್ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಮಾಧ್ಯಮ ತಂಡ ಪರಾಭವಗೊಂಡಿತು. ಪೊಲೀಸ್ ತಂಡದ ಆಟಗಾರ ಶಿವಾನಂದ್ ಅವರ ಅದ್ಭುತ ಬ್ಯಾಟಿಂಗ್ ಫಲವಾಗಿ ಪೊಲೀಸ್ ಇಲಾಖೆ ವಿಜಯ ಸಾಧಿಸಿತು.

ದ್ವಿತೀಯ ಪಂದ್ಯ ಕಂದಾಯ ಇಲಾಖೆ ಹಾಗೂ ಆರ್ ಡಿಪಿಆರ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್ ಡಿಪಿಆರ್ ವಿಜಯ ಸಾಧಿಸಿತು. ಮೂರನೇ ಸ್ಥಾನಕ್ಕಾಗಿ ನಡೆದ ಪೈಫೋಟಿಯಲ್ಲಿ ಕಂದಾಯ ಇಲಾಖೆಯ ಆಟಗಾರರು ಮಾಧ್ಯಮ ಬಳಗಕ್ಕೆ ಸೋಲುಣಿಸಿದರು.

ಟೂರ್ನಿಯ ಆರಂಭಕ್ಕೂ ಮುನ್ನ ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಡಿವೈಎಸ್ಪಿ ರವಿ ಪಿ., ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ತಾ.ಪಂ.ಇಒ ಮುನಿರಾಜು, ವಕೀಲ ಪ್ರತಾಪ್ ಸೇರಿದಂತೆ ಹಲವು ಗಣ್ಯರು ಪಂದ್ಯಾವಳಿಗೆ ಚಾಲನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ‌ ಬಾಲದಂಡಿ ಅವರು ಕ್ರೀಡಾಂಗಣಕ್ಕೆ ಆಗಮಿಸಿ ಎಲ್ಲ ತಂಡದ ಅಟಗಾರರಿಗೆ ಶುಭ ಹಾರೈಸಿದರು.

ವಿಜೇತ ತಂಡಗಳಿಗೆ ಡಿವೈಎಸ್ಪಿ ರವಿ ಪಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಸೌಹಾರ್ದಯುತವಾಗಿ ಕ್ರಿಕೆಟ್ ಸೇರಿದಂತೆ ಇನ್ನಿತರೆ ಚಟುವಟಿಕೆಗಳು ಹೆಚ್ಚು ಅಗತ್ಯವಾಗಿವೆ. ಆಟಗಳಲ್ಲಿ ಸೋಲು-ಗೆಲುವು ಸಹಜ. ದಿನನಿತ್ಯದ ಕರ್ತವ್ಯದಲ್ಲಿ ರಿಲ್ಯಾಕ್ಸ್‌ ಇರುವುದಿಲ್ಲ. ಈ ರೀತಯ ಕ್ರೀಡೆಗಳನ್ನು ಆಯೋಜನೆ ಮಾಡುವುದರಿಂದ ಮನಸ್ಸಿಗೆ ಕೊಂಚ ನೆಮ್ಮದಿ ಸಿಗಲಿದೆ. ಜೊತೆಗೆ ಎಲ್ಲರೂ ಒಂದೆಡೆ ಸೇರಿದಾಗ ಪರಸ್ಪರ ಅರ್ಥ ಮಾಡಿಕೊಳ್ಳಬಹುದು ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಹೆಚ್ಚು ಹೆಚ್ಚು ಕ್ರೀಡೆಗಳನ್ನು ಆಯೋಜನೆ ಮಾಡಿದರೆ ಇಲಾಖೆಯ ಸಹಕಾರ ಸದಾ ಇರಲಿದೆ. ಕ್ರೀಡೆಗಳಿಗೆ ಸಾರ್ವಜನಿಕರನ್ನೂ ಒಳಗೊಂಡಂತೆ ಆಯೋಜನೆ ಮಾಡಿದರೆ ಆಡಳಿತ ವರ್ಗ- ಸಾರ್ವಜನಿಕರ ಮಧ್ಯೆ ಸಂಬಂಧ ವೃದ್ಧಿಸಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಮುನಿಕೃಷ್ಣ ನಗರ ಠಾಣೆ ಪಿಐ ಅಮರೇಶ್ ಗೌಡ, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಪಿಐ ಎಂ.ಆ‌ರ್.ಹರೀಶ್‌, ಹೊಸಹಳ್ಳಿ ಠಾಣೆ ಪಿಐ ರಾವ್ ಗಣೇಶ್ ಇತರರು ಇದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

4 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

5 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

11 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

12 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

17 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago