ಸೌಹಾರ್ದ ಕ್ರಿಕೆಟ್ ಕಪ್ ಗೆದ್ದ ಪೊಲೀಸ್ ತಂಡ: ರನ್ನರ್ಸ್ ಅಪ್ ಪ್ರಶಸ್ತಿ ಪಡೆದ RDPR ತಂಡ

ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ RDPR ದೊಡ್ಡಬಳ್ಳಾಪುರ ವತಿಯಿಂದ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ರಣರೋಚಕ‌ ಫೈನಲ್ ಪಂದ್ಯದಲ್ಲಿ ಪೊಲೀಸ್ ಇಲಾಖೆ ಕಡೆಯ ಓವರ್ ನಲ್ಲಿ ಆರ್ ಡಿಪಿಆರ್ ಎದುರು ವಿಜಯ ಸಾಧಿಸಿ 2023-24ನೇ ಸಾಲಿನ ಸೌಹಾರ್ದ ಕ್ರಿಕೆಟ್ ಕಪ್ ಗೆಲ್ಲುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ(RDPR) ತಂಡ ರನ್ನರ್ಸ್ ಪ್ರಶಸ್ತಿ ಪಡೆಯಿತು. ಕಂದಾಯ ಇಲಾಖೆ ತಂಡ‌ ಹಾಗೂ ಮಾಧ್ಯಮ ಬಳಗ ಕ್ರಮವಾಗಿ ಮೂರು‌ ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವು.

ಮಾಧ್ಯಮ ಬಳಗ ಹಾಗೂ ಪೊಲೀಸ್ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಮಾಧ್ಯಮ ತಂಡ ಪರಾಭವಗೊಂಡಿತು. ಪೊಲೀಸ್ ತಂಡದ ಆಟಗಾರ ಶಿವಾನಂದ್ ಅವರ ಅದ್ಭುತ ಬ್ಯಾಟಿಂಗ್ ಫಲವಾಗಿ ಪೊಲೀಸ್ ಇಲಾಖೆ ವಿಜಯ ಸಾಧಿಸಿತು.

ದ್ವಿತೀಯ ಪಂದ್ಯ ಕಂದಾಯ ಇಲಾಖೆ ಹಾಗೂ ಆರ್ ಡಿಪಿಆರ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್ ಡಿಪಿಆರ್ ವಿಜಯ ಸಾಧಿಸಿತು. ಮೂರನೇ ಸ್ಥಾನಕ್ಕಾಗಿ ನಡೆದ ಪೈಫೋಟಿಯಲ್ಲಿ ಕಂದಾಯ ಇಲಾಖೆಯ ಆಟಗಾರರು ಮಾಧ್ಯಮ ಬಳಗಕ್ಕೆ ಸೋಲುಣಿಸಿದರು.

ಟೂರ್ನಿಯ ಆರಂಭಕ್ಕೂ ಮುನ್ನ ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಡಿವೈಎಸ್ಪಿ ರವಿ ಪಿ., ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ತಾ.ಪಂ.ಇಒ ಮುನಿರಾಜು, ವಕೀಲ ಪ್ರತಾಪ್ ಸೇರಿದಂತೆ ಹಲವು ಗಣ್ಯರು ಪಂದ್ಯಾವಳಿಗೆ ಚಾಲನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ‌ ಬಾಲದಂಡಿ ಅವರು ಕ್ರೀಡಾಂಗಣಕ್ಕೆ ಆಗಮಿಸಿ ಎಲ್ಲ ತಂಡದ ಅಟಗಾರರಿಗೆ ಶುಭ ಹಾರೈಸಿದರು.

ವಿಜೇತ ತಂಡಗಳಿಗೆ ಡಿವೈಎಸ್ಪಿ ರವಿ ಪಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಸೌಹಾರ್ದಯುತವಾಗಿ ಕ್ರಿಕೆಟ್ ಸೇರಿದಂತೆ ಇನ್ನಿತರೆ ಚಟುವಟಿಕೆಗಳು ಹೆಚ್ಚು ಅಗತ್ಯವಾಗಿವೆ. ಆಟಗಳಲ್ಲಿ ಸೋಲು-ಗೆಲುವು ಸಹಜ. ದಿನನಿತ್ಯದ ಕರ್ತವ್ಯದಲ್ಲಿ ರಿಲ್ಯಾಕ್ಸ್‌ ಇರುವುದಿಲ್ಲ. ಈ ರೀತಯ ಕ್ರೀಡೆಗಳನ್ನು ಆಯೋಜನೆ ಮಾಡುವುದರಿಂದ ಮನಸ್ಸಿಗೆ ಕೊಂಚ ನೆಮ್ಮದಿ ಸಿಗಲಿದೆ. ಜೊತೆಗೆ ಎಲ್ಲರೂ ಒಂದೆಡೆ ಸೇರಿದಾಗ ಪರಸ್ಪರ ಅರ್ಥ ಮಾಡಿಕೊಳ್ಳಬಹುದು ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಹೆಚ್ಚು ಹೆಚ್ಚು ಕ್ರೀಡೆಗಳನ್ನು ಆಯೋಜನೆ ಮಾಡಿದರೆ ಇಲಾಖೆಯ ಸಹಕಾರ ಸದಾ ಇರಲಿದೆ. ಕ್ರೀಡೆಗಳಿಗೆ ಸಾರ್ವಜನಿಕರನ್ನೂ ಒಳಗೊಂಡಂತೆ ಆಯೋಜನೆ ಮಾಡಿದರೆ ಆಡಳಿತ ವರ್ಗ- ಸಾರ್ವಜನಿಕರ ಮಧ್ಯೆ ಸಂಬಂಧ ವೃದ್ಧಿಸಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಮುನಿಕೃಷ್ಣ ನಗರ ಠಾಣೆ ಪಿಐ ಅಮರೇಶ್ ಗೌಡ, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಪಿಐ ಎಂ.ಆ‌ರ್.ಹರೀಶ್‌, ಹೊಸಹಳ್ಳಿ ಠಾಣೆ ಪಿಐ ರಾವ್ ಗಣೇಶ್ ಇತರರು ಇದ್ದರು.

Ramesh Babu

Journalist

Recent Posts

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

26 minutes ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

7 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

7 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

20 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

20 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

23 hours ago