ಸೌಹಾರ್ದ ಕ್ರಿಕೆಟ್ ಕಪ್ ಗೆದ್ದ ಪೊಲೀಸ್ ತಂಡ: ರನ್ನರ್ಸ್ ಅಪ್ ಪ್ರಶಸ್ತಿ ಪಡೆದ RDPR ತಂಡ

ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ RDPR ದೊಡ್ಡಬಳ್ಳಾಪುರ ವತಿಯಿಂದ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ರಣರೋಚಕ‌ ಫೈನಲ್ ಪಂದ್ಯದಲ್ಲಿ ಪೊಲೀಸ್ ಇಲಾಖೆ ಕಡೆಯ ಓವರ್ ನಲ್ಲಿ ಆರ್ ಡಿಪಿಆರ್ ಎದುರು ವಿಜಯ ಸಾಧಿಸಿ 2023-24ನೇ ಸಾಲಿನ ಸೌಹಾರ್ದ ಕ್ರಿಕೆಟ್ ಕಪ್ ಗೆಲ್ಲುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ(RDPR) ತಂಡ ರನ್ನರ್ಸ್ ಪ್ರಶಸ್ತಿ ಪಡೆಯಿತು. ಕಂದಾಯ ಇಲಾಖೆ ತಂಡ‌ ಹಾಗೂ ಮಾಧ್ಯಮ ಬಳಗ ಕ್ರಮವಾಗಿ ಮೂರು‌ ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವು.

ಮಾಧ್ಯಮ ಬಳಗ ಹಾಗೂ ಪೊಲೀಸ್ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಮಾಧ್ಯಮ ತಂಡ ಪರಾಭವಗೊಂಡಿತು. ಪೊಲೀಸ್ ತಂಡದ ಆಟಗಾರ ಶಿವಾನಂದ್ ಅವರ ಅದ್ಭುತ ಬ್ಯಾಟಿಂಗ್ ಫಲವಾಗಿ ಪೊಲೀಸ್ ಇಲಾಖೆ ವಿಜಯ ಸಾಧಿಸಿತು.

ದ್ವಿತೀಯ ಪಂದ್ಯ ಕಂದಾಯ ಇಲಾಖೆ ಹಾಗೂ ಆರ್ ಡಿಪಿಆರ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್ ಡಿಪಿಆರ್ ವಿಜಯ ಸಾಧಿಸಿತು. ಮೂರನೇ ಸ್ಥಾನಕ್ಕಾಗಿ ನಡೆದ ಪೈಫೋಟಿಯಲ್ಲಿ ಕಂದಾಯ ಇಲಾಖೆಯ ಆಟಗಾರರು ಮಾಧ್ಯಮ ಬಳಗಕ್ಕೆ ಸೋಲುಣಿಸಿದರು.

ಟೂರ್ನಿಯ ಆರಂಭಕ್ಕೂ ಮುನ್ನ ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಡಿವೈಎಸ್ಪಿ ರವಿ ಪಿ., ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ತಾ.ಪಂ.ಇಒ ಮುನಿರಾಜು, ವಕೀಲ ಪ್ರತಾಪ್ ಸೇರಿದಂತೆ ಹಲವು ಗಣ್ಯರು ಪಂದ್ಯಾವಳಿಗೆ ಚಾಲನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ‌ ಬಾಲದಂಡಿ ಅವರು ಕ್ರೀಡಾಂಗಣಕ್ಕೆ ಆಗಮಿಸಿ ಎಲ್ಲ ತಂಡದ ಅಟಗಾರರಿಗೆ ಶುಭ ಹಾರೈಸಿದರು.

ವಿಜೇತ ತಂಡಗಳಿಗೆ ಡಿವೈಎಸ್ಪಿ ರವಿ ಪಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಸೌಹಾರ್ದಯುತವಾಗಿ ಕ್ರಿಕೆಟ್ ಸೇರಿದಂತೆ ಇನ್ನಿತರೆ ಚಟುವಟಿಕೆಗಳು ಹೆಚ್ಚು ಅಗತ್ಯವಾಗಿವೆ. ಆಟಗಳಲ್ಲಿ ಸೋಲು-ಗೆಲುವು ಸಹಜ. ದಿನನಿತ್ಯದ ಕರ್ತವ್ಯದಲ್ಲಿ ರಿಲ್ಯಾಕ್ಸ್‌ ಇರುವುದಿಲ್ಲ. ಈ ರೀತಯ ಕ್ರೀಡೆಗಳನ್ನು ಆಯೋಜನೆ ಮಾಡುವುದರಿಂದ ಮನಸ್ಸಿಗೆ ಕೊಂಚ ನೆಮ್ಮದಿ ಸಿಗಲಿದೆ. ಜೊತೆಗೆ ಎಲ್ಲರೂ ಒಂದೆಡೆ ಸೇರಿದಾಗ ಪರಸ್ಪರ ಅರ್ಥ ಮಾಡಿಕೊಳ್ಳಬಹುದು ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಹೆಚ್ಚು ಹೆಚ್ಚು ಕ್ರೀಡೆಗಳನ್ನು ಆಯೋಜನೆ ಮಾಡಿದರೆ ಇಲಾಖೆಯ ಸಹಕಾರ ಸದಾ ಇರಲಿದೆ. ಕ್ರೀಡೆಗಳಿಗೆ ಸಾರ್ವಜನಿಕರನ್ನೂ ಒಳಗೊಂಡಂತೆ ಆಯೋಜನೆ ಮಾಡಿದರೆ ಆಡಳಿತ ವರ್ಗ- ಸಾರ್ವಜನಿಕರ ಮಧ್ಯೆ ಸಂಬಂಧ ವೃದ್ಧಿಸಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಮುನಿಕೃಷ್ಣ ನಗರ ಠಾಣೆ ಪಿಐ ಅಮರೇಶ್ ಗೌಡ, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಪಿಐ ಎಂ.ಆ‌ರ್.ಹರೀಶ್‌, ಹೊಸಹಳ್ಳಿ ಠಾಣೆ ಪಿಐ ರಾವ್ ಗಣೇಶ್ ಇತರರು ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

12 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

13 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago