ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ RDPR ದೊಡ್ಡಬಳ್ಳಾಪುರ ವತಿಯಿಂದ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ರಣರೋಚಕ ಫೈನಲ್ ಪಂದ್ಯದಲ್ಲಿ ಪೊಲೀಸ್ ಇಲಾಖೆ ಕಡೆಯ ಓವರ್ ನಲ್ಲಿ ಆರ್ ಡಿಪಿಆರ್ ಎದುರು ವಿಜಯ ಸಾಧಿಸಿ 2023-24ನೇ ಸಾಲಿನ ಸೌಹಾರ್ದ ಕ್ರಿಕೆಟ್ ಕಪ್ ಗೆಲ್ಲುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ(RDPR) ತಂಡ ರನ್ನರ್ಸ್ ಪ್ರಶಸ್ತಿ ಪಡೆಯಿತು. ಕಂದಾಯ ಇಲಾಖೆ ತಂಡ ಹಾಗೂ ಮಾಧ್ಯಮ ಬಳಗ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವು.
ದ್ವಿತೀಯ ಪಂದ್ಯ ಕಂದಾಯ ಇಲಾಖೆ ಹಾಗೂ ಆರ್ ಡಿಪಿಆರ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್ ಡಿಪಿಆರ್ ವಿಜಯ ಸಾಧಿಸಿತು. ಮೂರನೇ ಸ್ಥಾನಕ್ಕಾಗಿ ನಡೆದ ಪೈಫೋಟಿಯಲ್ಲಿ ಕಂದಾಯ ಇಲಾಖೆಯ ಆಟಗಾರರು ಮಾಧ್ಯಮ ಬಳಗಕ್ಕೆ ಸೋಲುಣಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಕ್ರೀಡಾಂಗಣಕ್ಕೆ ಆಗಮಿಸಿ ಎಲ್ಲ ತಂಡದ ಅಟಗಾರರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಮುನಿಕೃಷ್ಣ ನಗರ ಠಾಣೆ ಪಿಐ ಅಮರೇಶ್ ಗೌಡ, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಪಿಐ ಎಂ.ಆರ್.ಹರೀಶ್, ಹೊಸಹಳ್ಳಿ ಠಾಣೆ ಪಿಐ ರಾವ್ ಗಣೇಶ್ ಇತರರು ಇದ್ದರು.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…