ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ.
ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು.
ಖಾಸಗಿ ಶಾಲೆಗೆ ಸೇರಿದ ಬಸ್ ಬೈಕ್ಗೆ ಡಿಕ್ಕಿ ಹೊಡೆದು ಮಕ್ಕಳು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ ಮೂಲದ ನಾಗನಗೌಡ ಅವರು ಸಿಎಆರ್ನಲ್ಲಿ ಕಾನ್ಸ್ಟೇಬಲ್ ಆಗಿದ್ದಾರೆ. ತಮ್ಮ ಮಗಳು ವರ್ಷ ಮತ್ತು ಅಣ್ಣನ ಮಗಳಾದ ಭಾನು ಅನ್ನು ಬೈಕ್ನಲ್ಲಿ ಕೂರಿಸಿಕೊಂಡು ಹಾಲು ತರಲು ಹೋಗುತ್ತಿದ್ದರು. ಇದೇ ವೇಳೆ ಸ್ಕೂಲ್ ಟೈಮ್ ಆಗಿದ್ದರಿಂದ ಬಸ್ ಮಕ್ಕಳ ಪಿಕಪ್ಗೆ ತೆರಳುತ್ತಿತ್ತು. ಬಸ್ ಬರುವುದನ್ನು ಕಂಡು ನಾಗನಗೌಡ ಅವರು ಬೈಕ್ ನಿಲ್ಲಿಸಿದ್ದರು.
ಹೆಣ್ಣೂರು ಸಂಚಾರಿ ಠಾಣೆ ವ್ಯಾಪ್ತಿಯ ಥಣಿಸಂದ್ರ ಬಳಿ ಶಾಲಾ ಬಸ್ ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ನಿಂದ ಕೆಳಗೆ ಬಿದ್ದ ಇಬ್ಬರು ಮಕ್ಕಳ ಮೇಲೆ ಬಸ್ ಹಿಂಬದಿ ಚಕ್ರ ಹರಿದಿದೆ. ಕೂಡಲೇ ಮಕ್ಕಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕಾನ್ಸ್ಟೇಬಲ್ ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇನ್ನು ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರು ಜಮಾಯಿಸಿದ್ದು, ಮಕ್ಕಳನ್ನ ಕಳೆದುಕೊಂಡ ಹಿನ್ನಲೆ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಹೆಣ್ಣೂರು ಸಂಚಾರ ಪೊಲೀಸರು ಶಾಲಾ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…