ಸ್ಕೌಟ್ಸ್ & ಗೈಡ್ಸ್ ನ ಮೊದಲ ಮುಖ್ಯ ಆಯುಕ್ತ, ಜಸ್ಟಿಸ್ ಕೆ‌. ಶಂಕರ ನಾರಾಯಣ್ ರಾವ್ ಅವರ 146ನೇ ಹುಟ್ಟುಹಬ್ಬ ಆಚರಣೆ

ದೊಡ್ಡಬಳ್ಳಾಪುರ : ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ದೇಶದ ಉಳಿವಿಗಾಗಿ ನೀವು ಪಡೆದ ತರಬೇತಿ ಸಹಕಾರಿಯಾಗಲಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ನಿಮ್ಮೆಲ್ಲರ ನಿಸ್ವಾರ್ಥ ಸೇವೆ ಸಲ್ಲಿಸುವಂತಗಲಿ ಎಂದು ಕರ್ನಾಟಕ ರಾಜ್ಯ ಸ್ಕೌಟ್ಸ್ ಅಂಡ್ ಗೈಡ್ಸ್ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಹೊರವಲಯದ ಅನಿಬಿಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಯುವ ಅಪಾಯ ಮಿತ್ರ ಯೋಜನೆ ಅಡಿಯಲ್ಲಿ ಆಯೋಜನೆ ಮಾಡಲಾಗಿದ್ದ ಯುವ ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣಾ ಶಿಬಿರದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ನ ಮೊದಲ ಮುಖ್ಯ ಆಯುಕ್ತ, ಜಸ್ಟಿಸ್ ಕೆ‌. ಶಂಕರನಾರಾಯಣ್ ರಾವ್ ಅವರ 146ನೇ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿವಿಧ ನೈಸರ್ಗಿಕ ವಿಕೋಪಗಳಿಂದ ಭಾರತವು ಹಾನಿಗೊಳಗಾದ ಸಮಯದಲ್ಲಿ ವಿಪತ್ತು ನಿರ್ವಹಣಾ ತಂಡವು ತಕ್ಷಣ ನೆರವಿಗೆ ಬರುತ್ತದೆ. 7 ದಿನಗಳಿಂದ ನಡೆದ ಈ ತರಬೇತಿಯಲ್ಲಿ ಪ್ರತಿನಿತ್ಯ ಸಹಕಾರಿಯಾಗುವ ವಿಪತ್ತು ನಿರ್ವಹಣೆಯಿಂದ ಭೂಕಂಪ, ಅಗ್ನಿ ಅನಾಹುತ, ಪ್ರವಾಹಗಳಲ್ಲಿ ಜನರನ್ನು ರಕ್ಷಣೆ ಮಾಡುವ ವಿಧಾನ ತಿಳಿಸಲಾಗಿದೆ. ಅಲ್ಲದೇ ಮಕ್ಕಳಲ್ಲಿ ದೇಶಭಿಮಾನ, ರಾಷ್ಟ್ರೀಯತೆ ಜೊತೆಗೆ ರಾಷ್ಟ್ರ ನಿರ್ಮಾಣದ ಪರಿಕಲ್ಪನೆ ಬೆಳೆಸಲಾಗಿದೆ ಎಂದರು.

ಇಂತಹ ತರಬೇತಿ ಶಿಬಿರದಲ್ಲಿ ಭಾಗವಹಿಸುವುದರಿಂದ ಶಿಸ್ತು, ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ. ಈ ತರಬೇತಿಯಲ್ಲಿ ಬಹುದೂರದಿಂದ ಬಂದಿರುವ    ನೂರಾರು ವಿದ್ಯಾರ್ಥಿಗಳು ಭಾಗವಹಿಸಿರುವುದು ವಿಶೇಷವಾಗಿದ್ದು. ಉತ್ತಮ ಜೀವನಶೈಲಿಗೆ ಇಂತಹ ತರಬೇತಿಗಳು ಅವಶ್ಯಕ ಎಂದರು.

ಸ್ಥಳೀಯವಾಗಿ ಯಾವುದೇ ನೈಸರ್ಗಿಕ ವಿಪತ್ತುಗಳ ಸಮಸ್ಯೆ ಇಲ್ಲದೆ ನಾವು ನೀವು ಸುರಕ್ಷಿತವಾಗಿ ಇದ್ದೇವೆ  ಆದರೆ ಜಮ್ಮು ಕಾಶ್ಮೀರ, ಉತ್ತಾರಾಂಚಲ್ ಹೆಚ್ಚು ವಿಪತ್ತು ಸಂಭವಿಸುತ್ತದೆ. ನಮ್ಮ ರಾಜ್ಯದ ಕೋಸ್ಟಲ್ ಏರಿಯಾಗಳಲ್ಲಿ ಆಪತ್ತು ಸಂಭಾವಿಸುವ ಪ್ರಮಾಣ ಹೆಚ್ಚಾಗಿದ್ದು ವಿಪತ್ತು ನಿರ್ವಹಣಾ ತಂಡಗಳ ಸಹಾಯದ ಅವಶ್ಯಕತೆ ಹೆಚ್ಚಿರುತ್ತದೆ ಎಂದರು.

7 ದಿನಗಳ ಕಾಲದ ತರಬೇತಿಯಲ್ಲಿ ಸುಮಾರು 400ಕ್ಕೂ ಅಧಿಕ  ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಷಯ, ನೈಸರ್ಗಿಕ ವಿಪತ್ತು ನಿರ್ವಹಣೆ ಸಂದರ್ಭಗಳಲ್ಲಿ ಯುವ ಸಮುದಾಯದ ಪಾತ್ರ ಮುಖ್ಯವಾದದ್ದು, ಪ್ರತಿನಿತ್ಯ ಅವಶ್ಯಕವಿರುವ ತರಬೇತಿಯನ್ನು ಈ ಶಿಬಿರ ನೀಡಲಿದೆ. ಈ ತರಬೇತಿ ಪಡೆದ ಪ್ರತಿ ಮಗುವಿಗೂ ಜೀವ ವಿಮೆ ಹಾಗೂ ಉಪಯುಕ್ತ ವಿಪತ್ತು ನಿರ್ವಹಣಾ ಕಿಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ಸ್ಕೌಟ್ಸ್ ಅಂಡ್ ಗೈಡ್ಸ್ ನ  ಪ್ರಮುಖರು ಹಾಜರಿದ್ದರು.

Ramesh Babu

Journalist

Recent Posts

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

3 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

5 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

9 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

10 hours ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

11 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

20 hours ago