ಸ್ಕೌಟ್ಸ್ & ಗೈಡ್ಸ್ ನ ಮೊದಲ ಮುಖ್ಯ ಆಯುಕ್ತ, ಜಸ್ಟಿಸ್ ಕೆ‌. ಶಂಕರ ನಾರಾಯಣ್ ರಾವ್ ಅವರ 146ನೇ ಹುಟ್ಟುಹಬ್ಬ ಆಚರಣೆ

ದೊಡ್ಡಬಳ್ಳಾಪುರ : ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ದೇಶದ ಉಳಿವಿಗಾಗಿ ನೀವು ಪಡೆದ ತರಬೇತಿ ಸಹಕಾರಿಯಾಗಲಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ನಿಮ್ಮೆಲ್ಲರ ನಿಸ್ವಾರ್ಥ ಸೇವೆ ಸಲ್ಲಿಸುವಂತಗಲಿ ಎಂದು ಕರ್ನಾಟಕ ರಾಜ್ಯ ಸ್ಕೌಟ್ಸ್ ಅಂಡ್ ಗೈಡ್ಸ್ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಹೊರವಲಯದ ಅನಿಬಿಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಯುವ ಅಪಾಯ ಮಿತ್ರ ಯೋಜನೆ ಅಡಿಯಲ್ಲಿ ಆಯೋಜನೆ ಮಾಡಲಾಗಿದ್ದ ಯುವ ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣಾ ಶಿಬಿರದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ನ ಮೊದಲ ಮುಖ್ಯ ಆಯುಕ್ತ, ಜಸ್ಟಿಸ್ ಕೆ‌. ಶಂಕರನಾರಾಯಣ್ ರಾವ್ ಅವರ 146ನೇ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿವಿಧ ನೈಸರ್ಗಿಕ ವಿಕೋಪಗಳಿಂದ ಭಾರತವು ಹಾನಿಗೊಳಗಾದ ಸಮಯದಲ್ಲಿ ವಿಪತ್ತು ನಿರ್ವಹಣಾ ತಂಡವು ತಕ್ಷಣ ನೆರವಿಗೆ ಬರುತ್ತದೆ. 7 ದಿನಗಳಿಂದ ನಡೆದ ಈ ತರಬೇತಿಯಲ್ಲಿ ಪ್ರತಿನಿತ್ಯ ಸಹಕಾರಿಯಾಗುವ ವಿಪತ್ತು ನಿರ್ವಹಣೆಯಿಂದ ಭೂಕಂಪ, ಅಗ್ನಿ ಅನಾಹುತ, ಪ್ರವಾಹಗಳಲ್ಲಿ ಜನರನ್ನು ರಕ್ಷಣೆ ಮಾಡುವ ವಿಧಾನ ತಿಳಿಸಲಾಗಿದೆ. ಅಲ್ಲದೇ ಮಕ್ಕಳಲ್ಲಿ ದೇಶಭಿಮಾನ, ರಾಷ್ಟ್ರೀಯತೆ ಜೊತೆಗೆ ರಾಷ್ಟ್ರ ನಿರ್ಮಾಣದ ಪರಿಕಲ್ಪನೆ ಬೆಳೆಸಲಾಗಿದೆ ಎಂದರು.

ಇಂತಹ ತರಬೇತಿ ಶಿಬಿರದಲ್ಲಿ ಭಾಗವಹಿಸುವುದರಿಂದ ಶಿಸ್ತು, ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ. ಈ ತರಬೇತಿಯಲ್ಲಿ ಬಹುದೂರದಿಂದ ಬಂದಿರುವ    ನೂರಾರು ವಿದ್ಯಾರ್ಥಿಗಳು ಭಾಗವಹಿಸಿರುವುದು ವಿಶೇಷವಾಗಿದ್ದು. ಉತ್ತಮ ಜೀವನಶೈಲಿಗೆ ಇಂತಹ ತರಬೇತಿಗಳು ಅವಶ್ಯಕ ಎಂದರು.

ಸ್ಥಳೀಯವಾಗಿ ಯಾವುದೇ ನೈಸರ್ಗಿಕ ವಿಪತ್ತುಗಳ ಸಮಸ್ಯೆ ಇಲ್ಲದೆ ನಾವು ನೀವು ಸುರಕ್ಷಿತವಾಗಿ ಇದ್ದೇವೆ  ಆದರೆ ಜಮ್ಮು ಕಾಶ್ಮೀರ, ಉತ್ತಾರಾಂಚಲ್ ಹೆಚ್ಚು ವಿಪತ್ತು ಸಂಭವಿಸುತ್ತದೆ. ನಮ್ಮ ರಾಜ್ಯದ ಕೋಸ್ಟಲ್ ಏರಿಯಾಗಳಲ್ಲಿ ಆಪತ್ತು ಸಂಭಾವಿಸುವ ಪ್ರಮಾಣ ಹೆಚ್ಚಾಗಿದ್ದು ವಿಪತ್ತು ನಿರ್ವಹಣಾ ತಂಡಗಳ ಸಹಾಯದ ಅವಶ್ಯಕತೆ ಹೆಚ್ಚಿರುತ್ತದೆ ಎಂದರು.

7 ದಿನಗಳ ಕಾಲದ ತರಬೇತಿಯಲ್ಲಿ ಸುಮಾರು 400ಕ್ಕೂ ಅಧಿಕ  ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಷಯ, ನೈಸರ್ಗಿಕ ವಿಪತ್ತು ನಿರ್ವಹಣೆ ಸಂದರ್ಭಗಳಲ್ಲಿ ಯುವ ಸಮುದಾಯದ ಪಾತ್ರ ಮುಖ್ಯವಾದದ್ದು, ಪ್ರತಿನಿತ್ಯ ಅವಶ್ಯಕವಿರುವ ತರಬೇತಿಯನ್ನು ಈ ಶಿಬಿರ ನೀಡಲಿದೆ. ಈ ತರಬೇತಿ ಪಡೆದ ಪ್ರತಿ ಮಗುವಿಗೂ ಜೀವ ವಿಮೆ ಹಾಗೂ ಉಪಯುಕ್ತ ವಿಪತ್ತು ನಿರ್ವಹಣಾ ಕಿಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ಸ್ಕೌಟ್ಸ್ ಅಂಡ್ ಗೈಡ್ಸ್ ನ  ಪ್ರಮುಖರು ಹಾಜರಿದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

14 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago