ಸ್ಕೌಟ್ಸ್ & ಗೈಡ್ಸ್ ನ ಮೊದಲ ಮುಖ್ಯ ಆಯುಕ್ತ, ಜಸ್ಟಿಸ್ ಕೆ‌. ಶಂಕರ ನಾರಾಯಣ್ ರಾವ್ ಅವರ 146ನೇ ಹುಟ್ಟುಹಬ್ಬ ಆಚರಣೆ

ದೊಡ್ಡಬಳ್ಳಾಪುರ : ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ದೇಶದ ಉಳಿವಿಗಾಗಿ ನೀವು ಪಡೆದ ತರಬೇತಿ ಸಹಕಾರಿಯಾಗಲಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ನಿಮ್ಮೆಲ್ಲರ ನಿಸ್ವಾರ್ಥ ಸೇವೆ ಸಲ್ಲಿಸುವಂತಗಲಿ ಎಂದು ಕರ್ನಾಟಕ ರಾಜ್ಯ ಸ್ಕೌಟ್ಸ್ ಅಂಡ್ ಗೈಡ್ಸ್ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಹೊರವಲಯದ ಅನಿಬಿಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಯುವ ಅಪಾಯ ಮಿತ್ರ ಯೋಜನೆ ಅಡಿಯಲ್ಲಿ ಆಯೋಜನೆ ಮಾಡಲಾಗಿದ್ದ ಯುವ ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣಾ ಶಿಬಿರದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ನ ಮೊದಲ ಮುಖ್ಯ ಆಯುಕ್ತ, ಜಸ್ಟಿಸ್ ಕೆ‌. ಶಂಕರನಾರಾಯಣ್ ರಾವ್ ಅವರ 146ನೇ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿವಿಧ ನೈಸರ್ಗಿಕ ವಿಕೋಪಗಳಿಂದ ಭಾರತವು ಹಾನಿಗೊಳಗಾದ ಸಮಯದಲ್ಲಿ ವಿಪತ್ತು ನಿರ್ವಹಣಾ ತಂಡವು ತಕ್ಷಣ ನೆರವಿಗೆ ಬರುತ್ತದೆ. 7 ದಿನಗಳಿಂದ ನಡೆದ ಈ ತರಬೇತಿಯಲ್ಲಿ ಪ್ರತಿನಿತ್ಯ ಸಹಕಾರಿಯಾಗುವ ವಿಪತ್ತು ನಿರ್ವಹಣೆಯಿಂದ ಭೂಕಂಪ, ಅಗ್ನಿ ಅನಾಹುತ, ಪ್ರವಾಹಗಳಲ್ಲಿ ಜನರನ್ನು ರಕ್ಷಣೆ ಮಾಡುವ ವಿಧಾನ ತಿಳಿಸಲಾಗಿದೆ. ಅಲ್ಲದೇ ಮಕ್ಕಳಲ್ಲಿ ದೇಶಭಿಮಾನ, ರಾಷ್ಟ್ರೀಯತೆ ಜೊತೆಗೆ ರಾಷ್ಟ್ರ ನಿರ್ಮಾಣದ ಪರಿಕಲ್ಪನೆ ಬೆಳೆಸಲಾಗಿದೆ ಎಂದರು.

ಇಂತಹ ತರಬೇತಿ ಶಿಬಿರದಲ್ಲಿ ಭಾಗವಹಿಸುವುದರಿಂದ ಶಿಸ್ತು, ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ. ಈ ತರಬೇತಿಯಲ್ಲಿ ಬಹುದೂರದಿಂದ ಬಂದಿರುವ    ನೂರಾರು ವಿದ್ಯಾರ್ಥಿಗಳು ಭಾಗವಹಿಸಿರುವುದು ವಿಶೇಷವಾಗಿದ್ದು. ಉತ್ತಮ ಜೀವನಶೈಲಿಗೆ ಇಂತಹ ತರಬೇತಿಗಳು ಅವಶ್ಯಕ ಎಂದರು.

ಸ್ಥಳೀಯವಾಗಿ ಯಾವುದೇ ನೈಸರ್ಗಿಕ ವಿಪತ್ತುಗಳ ಸಮಸ್ಯೆ ಇಲ್ಲದೆ ನಾವು ನೀವು ಸುರಕ್ಷಿತವಾಗಿ ಇದ್ದೇವೆ  ಆದರೆ ಜಮ್ಮು ಕಾಶ್ಮೀರ, ಉತ್ತಾರಾಂಚಲ್ ಹೆಚ್ಚು ವಿಪತ್ತು ಸಂಭವಿಸುತ್ತದೆ. ನಮ್ಮ ರಾಜ್ಯದ ಕೋಸ್ಟಲ್ ಏರಿಯಾಗಳಲ್ಲಿ ಆಪತ್ತು ಸಂಭಾವಿಸುವ ಪ್ರಮಾಣ ಹೆಚ್ಚಾಗಿದ್ದು ವಿಪತ್ತು ನಿರ್ವಹಣಾ ತಂಡಗಳ ಸಹಾಯದ ಅವಶ್ಯಕತೆ ಹೆಚ್ಚಿರುತ್ತದೆ ಎಂದರು.

7 ದಿನಗಳ ಕಾಲದ ತರಬೇತಿಯಲ್ಲಿ ಸುಮಾರು 400ಕ್ಕೂ ಅಧಿಕ  ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಷಯ, ನೈಸರ್ಗಿಕ ವಿಪತ್ತು ನಿರ್ವಹಣೆ ಸಂದರ್ಭಗಳಲ್ಲಿ ಯುವ ಸಮುದಾಯದ ಪಾತ್ರ ಮುಖ್ಯವಾದದ್ದು, ಪ್ರತಿನಿತ್ಯ ಅವಶ್ಯಕವಿರುವ ತರಬೇತಿಯನ್ನು ಈ ಶಿಬಿರ ನೀಡಲಿದೆ. ಈ ತರಬೇತಿ ಪಡೆದ ಪ್ರತಿ ಮಗುವಿಗೂ ಜೀವ ವಿಮೆ ಹಾಗೂ ಉಪಯುಕ್ತ ವಿಪತ್ತು ನಿರ್ವಹಣಾ ಕಿಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ಸ್ಕೌಟ್ಸ್ ಅಂಡ್ ಗೈಡ್ಸ್ ನ  ಪ್ರಮುಖರು ಹಾಜರಿದ್ದರು.

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

10 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

20 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

23 hours ago

Instant Play Casino

Instant play casinos allow you to play casino games online without installing any software. These…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago