ಸ್ಟೋನಿಸ್, ಪೂರನ್ ಭರ್ಜರಿ ಬ್ಯಾಟಿಂಗ್ : ಲಕ್ನೋಗೆ ಗೆಲುವಿನ ಲಕ್!

 

ಬೆಂಗಳೂರು : ಉದ್ಯಾನ ನಗರಿ ಕ್ರಿಕೆಟ್ ಪ್ರೇಮಿಗಳಿಗೆ ಎರಡೂ ತಂಡಗಳು ರನ್‌ಗಳ ರಸದೌತಣ ಉಣಬಡಿಸಿದರು, ಪ್ರತೀ ಎಸೆತಕ್ಕೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಕೊನೆಗೂ ವಿಜಯಲಕ್ಷ್ಮಿ ಕನ್ನಡಿಗ ಕೆ. ಎಲ್. ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೆಂಟ್ಸ್ ಪಾಲಾಯಿತು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ಕೆ. ಎಲ್. ರಾಹುಲ್ ಅವರ ನಿರ್ಧಾರ ಕೈಗೂಡಲಿಲ್ಲ ಕೇವಲ ಎರಡು ವಿಕೆಟ್ ನಷ್ಟಕ್ಕೆ ಆರ್ ಸಿಬಿ ಬರೋಬ್ಬರಿ 213 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿ ಎದುರಾಳಿಗಳನ್ನು ಆಹ್ವಾನಿಸಲಾಯಿತು.

ಬೃಹತ್ ಮೊತ್ತ ಬೆನ್ನಟ್ಟಿದ ಲಕ್ನೋಗೆ ಆರಂಭಿಕ ಲಕ್ ಸಿಗಲಿಲ್ಲ ಆರಂಭಿಕ ಬ್ಯಾಟ್ಸ್‌ಮನ್ ಕೈಲ್ ಮೇಯರ್ಸ್ (0) ಸಿರಾಜ್ ಎಸೆದ ಬಾಲ್ ಕೆಣಕಲು ಹೋಗಿ ಕ್ಲೀನ್ ವಿಕೆಟ್ ಆದರು, ನಂತರ ಬಂದ ಆಲ್ ರೌಂಡರ್ ದೀಪಕ್ ಹೂಡ (9) ಹಾಗೂ ಕೃನಾಲ್ ಪಾಂಡ್ಯ (0) ಪ್ಯಾರಲಲ್ ಎಸೆತದಲ್ಲಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರಿಗೆ ವಿಕೆಟ್ ಒಪ್ಪಿಸಿದರು.

ನಂತರ ಜೊತೆಯಾದ ಮಾರ್ಕ್ ಸ್ಟೋನಿಸ್ ಆರು ಬೌಂಡರಿ ಹಾಗೂ ಐದು ಸಿಕ್ಸರ್ ಸಮೇತ (65) ರನ್ ಪೇರಿಸುವ ಮೂಲಕ ತಂಡವನ್ನು ಸೋಲಿನಿಂದ ಪಾರು ಮಾಡಲು ಪ್ರಯತ್ನಿಸಿದರು, ನಂತರ ಬಂದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ 19 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಏಳು ಸಿಕ್ಸರ್ ಸಿಡಿಸಿ ಬರೋಬ್ಬರಿ (62) ರನ್ ಗಳಿಸಿ ತಂಡವನ್ನು ಗೆಲುವಿನ ದಡಕ್ಕೆ ಕೊಂಡೊಯ್ದರು.

ಇಂಪ್ಯಾಕ್ಟ್ ಪ್ಲೇಯರ್ ಯುವ ಬ್ಯಾಟ್ಸ್‌ಮನ್ ಆಯಷ್ ಬದೋನಿ ನಾಲ್ಕು ಬೌಂಡರಿ ಸಮೇತ (30) ರನ್ ಹಾಗೂ ಜಯದೇವ್ ಉನ್ನಾದ್ಕತ್ (9) ಗೆಲುವಿನ ದಡ ಸೇರಿಸಿದರು. ಆರ್ ಸಿಬಿ ಪರವಾಗಿ ಮೊಹಮ್ಮದ್ ಸಿರಾಜ್ ಹಾಗೂ ಪ್ಯಾರಲಲ್ ಮೂರು ವಿಕೆಟ್ ಪಡೆದರೆ ಹಷ೯ಲ್ ಪಟೇಲ್ ಎರಡು ವಿಕೆಟ್ ಪಡೆದು ಮಿಂಚಿದರು.

ಕೋಹ್ಲಿ- ಪಾಫ್ – ಮ್ಯಾಕ್ಸಿ ಬ್ಯಾಟಿಂಗ್ ಅಬ್ಬರ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರೀಕ್ಷೆಯಂತೆ ರನ್ ಹೊಳೆ ಹರಿಸಿದರು ಆರಂಭಿಕ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (61) ನಾಲ್ಕು ಸಿಕ್ಸರ್ ಹಾಗೂ ನಾಲ್ಕು ಬೌಂಡರಿ ಬಾರಿಸಿದರೆ, ನಾಯಕ ಪಾಫ್ ಡುಪ್ಲೆಸಿ ಔಟಾಗದೆ ಐದು ಬೌಂಡರಿ ಹಾಗೂ ಐದು ಸಿಕ್ಸರ್ ಸಮೇತ 79 ರನ್ ಗಳಿಸಿದರು.

ಅಮಿತ್ ಮಿಶ್ರಾ ಬೌಲಿಂಗ್ ನಲ್ಲಿ ಸ್ಟೋನಿಸ್ ಹಿಡಿದ ಕ್ಯಾಚ್ ಗೆ ಬಲಿಯಾದ ವಿರಾಟ್ ಕೊಹ್ಲಿ ತಂಡಕ್ಕೆ ಭದ್ರ ಬುನಾದಿ ಹಾಕಿದರು, ನಂತರ ಬಂದ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸವೆಲ್ ನಾಯಕ ಜೊತೆಗೆ ಬಿರುಸಿನ ಬ್ಯಾಟಿಂಗ್ ಗೆ ಮುಂದಾದರು, ಇನ್ನಿಂಗ್ಸ್ ನ ಕೊನೆಯ ಎಸೆತದವರೆಗೂ ಕ್ರಿನ್ ಲ್ಲಿದ್ದ ಮ್ಯಾಕ್ಸವೆಲ್ ಮೂರು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸುವ ಮೂಲಕ 59 ರನ್ ಗಳಿಸಿ ತಂಡದ ಮೊತ್ತವನ್ನು 210 ರ ವರೆಗೆ ಕೊಂಡೊಯ್ದುರು.

ಬ್ಯಾಟಿಂಗ್ ನಲ್ಲಿ ಮಿಂಚಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ನಿಕೊಲಾಸ್ ಪೂರನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

4 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

4 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

17 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

18 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

20 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago