ಸ್ಟೋನಿಸ್, ಪೂರನ್ ಭರ್ಜರಿ ಬ್ಯಾಟಿಂಗ್ : ಲಕ್ನೋಗೆ ಗೆಲುವಿನ ಲಕ್!

 

ಬೆಂಗಳೂರು : ಉದ್ಯಾನ ನಗರಿ ಕ್ರಿಕೆಟ್ ಪ್ರೇಮಿಗಳಿಗೆ ಎರಡೂ ತಂಡಗಳು ರನ್‌ಗಳ ರಸದೌತಣ ಉಣಬಡಿಸಿದರು, ಪ್ರತೀ ಎಸೆತಕ್ಕೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಕೊನೆಗೂ ವಿಜಯಲಕ್ಷ್ಮಿ ಕನ್ನಡಿಗ ಕೆ. ಎಲ್. ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೆಂಟ್ಸ್ ಪಾಲಾಯಿತು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ಕೆ. ಎಲ್. ರಾಹುಲ್ ಅವರ ನಿರ್ಧಾರ ಕೈಗೂಡಲಿಲ್ಲ ಕೇವಲ ಎರಡು ವಿಕೆಟ್ ನಷ್ಟಕ್ಕೆ ಆರ್ ಸಿಬಿ ಬರೋಬ್ಬರಿ 213 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿ ಎದುರಾಳಿಗಳನ್ನು ಆಹ್ವಾನಿಸಲಾಯಿತು.

ಬೃಹತ್ ಮೊತ್ತ ಬೆನ್ನಟ್ಟಿದ ಲಕ್ನೋಗೆ ಆರಂಭಿಕ ಲಕ್ ಸಿಗಲಿಲ್ಲ ಆರಂಭಿಕ ಬ್ಯಾಟ್ಸ್‌ಮನ್ ಕೈಲ್ ಮೇಯರ್ಸ್ (0) ಸಿರಾಜ್ ಎಸೆದ ಬಾಲ್ ಕೆಣಕಲು ಹೋಗಿ ಕ್ಲೀನ್ ವಿಕೆಟ್ ಆದರು, ನಂತರ ಬಂದ ಆಲ್ ರೌಂಡರ್ ದೀಪಕ್ ಹೂಡ (9) ಹಾಗೂ ಕೃನಾಲ್ ಪಾಂಡ್ಯ (0) ಪ್ಯಾರಲಲ್ ಎಸೆತದಲ್ಲಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರಿಗೆ ವಿಕೆಟ್ ಒಪ್ಪಿಸಿದರು.

ನಂತರ ಜೊತೆಯಾದ ಮಾರ್ಕ್ ಸ್ಟೋನಿಸ್ ಆರು ಬೌಂಡರಿ ಹಾಗೂ ಐದು ಸಿಕ್ಸರ್ ಸಮೇತ (65) ರನ್ ಪೇರಿಸುವ ಮೂಲಕ ತಂಡವನ್ನು ಸೋಲಿನಿಂದ ಪಾರು ಮಾಡಲು ಪ್ರಯತ್ನಿಸಿದರು, ನಂತರ ಬಂದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ 19 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಏಳು ಸಿಕ್ಸರ್ ಸಿಡಿಸಿ ಬರೋಬ್ಬರಿ (62) ರನ್ ಗಳಿಸಿ ತಂಡವನ್ನು ಗೆಲುವಿನ ದಡಕ್ಕೆ ಕೊಂಡೊಯ್ದರು.

ಇಂಪ್ಯಾಕ್ಟ್ ಪ್ಲೇಯರ್ ಯುವ ಬ್ಯಾಟ್ಸ್‌ಮನ್ ಆಯಷ್ ಬದೋನಿ ನಾಲ್ಕು ಬೌಂಡರಿ ಸಮೇತ (30) ರನ್ ಹಾಗೂ ಜಯದೇವ್ ಉನ್ನಾದ್ಕತ್ (9) ಗೆಲುವಿನ ದಡ ಸೇರಿಸಿದರು. ಆರ್ ಸಿಬಿ ಪರವಾಗಿ ಮೊಹಮ್ಮದ್ ಸಿರಾಜ್ ಹಾಗೂ ಪ್ಯಾರಲಲ್ ಮೂರು ವಿಕೆಟ್ ಪಡೆದರೆ ಹಷ೯ಲ್ ಪಟೇಲ್ ಎರಡು ವಿಕೆಟ್ ಪಡೆದು ಮಿಂಚಿದರು.

ಕೋಹ್ಲಿ- ಪಾಫ್ – ಮ್ಯಾಕ್ಸಿ ಬ್ಯಾಟಿಂಗ್ ಅಬ್ಬರ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರೀಕ್ಷೆಯಂತೆ ರನ್ ಹೊಳೆ ಹರಿಸಿದರು ಆರಂಭಿಕ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (61) ನಾಲ್ಕು ಸಿಕ್ಸರ್ ಹಾಗೂ ನಾಲ್ಕು ಬೌಂಡರಿ ಬಾರಿಸಿದರೆ, ನಾಯಕ ಪಾಫ್ ಡುಪ್ಲೆಸಿ ಔಟಾಗದೆ ಐದು ಬೌಂಡರಿ ಹಾಗೂ ಐದು ಸಿಕ್ಸರ್ ಸಮೇತ 79 ರನ್ ಗಳಿಸಿದರು.

ಅಮಿತ್ ಮಿಶ್ರಾ ಬೌಲಿಂಗ್ ನಲ್ಲಿ ಸ್ಟೋನಿಸ್ ಹಿಡಿದ ಕ್ಯಾಚ್ ಗೆ ಬಲಿಯಾದ ವಿರಾಟ್ ಕೊಹ್ಲಿ ತಂಡಕ್ಕೆ ಭದ್ರ ಬುನಾದಿ ಹಾಕಿದರು, ನಂತರ ಬಂದ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸವೆಲ್ ನಾಯಕ ಜೊತೆಗೆ ಬಿರುಸಿನ ಬ್ಯಾಟಿಂಗ್ ಗೆ ಮುಂದಾದರು, ಇನ್ನಿಂಗ್ಸ್ ನ ಕೊನೆಯ ಎಸೆತದವರೆಗೂ ಕ್ರಿನ್ ಲ್ಲಿದ್ದ ಮ್ಯಾಕ್ಸವೆಲ್ ಮೂರು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸುವ ಮೂಲಕ 59 ರನ್ ಗಳಿಸಿ ತಂಡದ ಮೊತ್ತವನ್ನು 210 ರ ವರೆಗೆ ಕೊಂಡೊಯ್ದುರು.

ಬ್ಯಾಟಿಂಗ್ ನಲ್ಲಿ ಮಿಂಚಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ನಿಕೊಲಾಸ್ ಪೂರನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

3 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

5 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

8 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

22 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago