ಕೋಲಾರ:ಗ್ರಾಮೀಣ ಭಾಗದಲ್ಲಿ ಕಲೆಗೆ ಕೊರತೆಯಿಲ್ಲ ಅವರನ್ನು ಗುರುತಿಸಿ ಪ್ರೋತ್ಸಾಹ ಮಾಡುವ ಮೂಲಕ ಸ್ಥಳೀಯ ಕಲಾವಿದರಿಗೆ ಮೊದಲ ಅಧ್ಯತೆ ನೀಡಿದಾಗ ಸಮಾಜದಲ್ಲಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ತಿಳಿಸಿದರು.
ತಾಲೂಕಿನ ಸುಗಟೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಶ್ರೀ ವೀರಬ್ರಹ್ಮೇಂದ್ರಸ್ವಾಮಿ ಸೇವಾ ಸಮಿತಿ ಮತ್ತು ಸವಿತಾ ಸಮಾಜ ವತಿಯಿಂದ ನಾಲ್ಕನೇ ವರ್ಷದ ಗುರು ಪೂರ್ಣಿಮ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮಲ್ಲಿ ಕಲಾವಿದರ ಕೊರತೆ ಇಲ್ಲ ಆದರೆ ಇಲ್ಲಿ ಅವರಿಗೆ ಅವಕಾಶದ ಕೊರತೆ ಇದೆ, ಅವರನ್ನು ಗುರುತಿಸಿ ಕಲೆಗೆ ಪ್ರೋತ್ಸಾಹ ನೀಡುವ ಮನಸ್ಸುಗಳು ನಮ್ಮಲ್ಲಿಯೇ ಹೆಚ್ಚಾಗಬೇಕು ಕಲೆಯೆಂಬುದು ಒಬ್ಬರ ಸ್ವತ್ತಲ್ಲ, ಕಲೆಯು ಜಾತಿ, ಮತ, ಪ್ರಾದೇಶಿಕತೆ, ಗಡಿಯನ್ನು ಮೀರಿದಂತಹದ್ದು ಎಂದರು.
ಸವಿತಾ ಸಮಾಜದ ಬಂಧುಗಳು ಸಮಾಜದಲ್ಲಿ ಯಾರಿಗೂ ತೊಂದರೆ ಕೊಡದೇ ತಮ್ಮ ಕೆಲಸವನ್ನು ಮಾಡಿಕೊಂಡು ಗೌರವಯುತವಾದ ಬದುಕು ಕಂಡುಕೊಂಡಿದ್ದಾರೆ ಅ ಸಮದಾಯದ ಅಭಿವೃದ್ಧಿಗಾಗಿ ವಯಕ್ತಿಕವಾಗಿ ಹಾಗೂ ಸರಕಾರದಿಂದ ಸಹಾಯ ಮಾಡಲು ಸಿದ್ದನಿದ್ದೇನೆ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಜೊತೆಗೆ ಕ್ಷೇತ್ರದಲ್ಲಿನ ನಿರುದ್ಯೋಗ ಯುವಕರಿಗೆ ಉದ್ಯೋಗಕ್ಕಾಗಿ ಐದು ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಗಳು ಸ್ಥಾಪನೆಗೆ ಈಗಾಗಲೇ ಸರಕಾರದ ಮಟ್ಟದಲ್ಲಿ ಅನುಮೋದನೆ ಮಾಡಿಸಲಾಗಿದೆ ಗ್ರಾಮೀಣ ರಸ್ತೆಗಳು ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಾ ಇದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು
ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಸನ್ಮಾನ ಸ್ವೀಕರಿಸಿ ಮಾತನಾಡಿ ಸುಗಟೂರಿಗೆ ಐತಿಹಾಸಿಕ ಪರಂಪರೆ ಇದೆ ಈ ಗ್ರಾಮವನ್ನು ಮಾದರಿಯಾಗಿ ಗುರುತಿಸಿಕೊಳ್ಳುವಂತೆ ಮಾಡಬೇಕಾಗಿದೆ ಈ ಗ್ರಾಮದಿಂದ ಪೋತ್ಸಾಹಿಸಿದ್ದರಿಂದಾಗಿ ನಿಮ್ಮ ಹುಡುಗ ಇವತ್ತು ಅಕ್ಕ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಬಂದಿದೆ ಕಲೆಯನ್ನು ನಾವು ಪ್ರೀತಿ ಗೌರವದಿಂದ ಕಂಡಾಗ ಕಲೆ ನಮ್ಮ ಬದುಕು ಕಟ್ಟಿಕೊಡುತ್ತದೆ ಪ್ರತಿ ಗ್ರಾಮದಲ್ಲಿ ಕಲಾವಿದರು ಇದ್ದು ಅವರನ್ನು ಪೋತ್ಸಾಹಿಸವ ಕೆಲಸವನ್ನು ಗ್ರಾಮ ಮಟ್ಟದಿಂದಲ್ಲೇ ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಸುಗಟೂರು ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಸದಸ್ಯ ಎಸ್.ವಿ ನಾರಾಯಣಗೌಡ, ಮುಖಂಡರಾದ ಕಿಟ್ಟೇಗೌಡ, ಗೋಪಾಲಗೌಡ, ಉರಗಲಿ ನಾರಾಯಣಸ್ವಾಮಿ, ಸುಬ್ರಮಣಿ, ಮಂಜುನಾಥ್ ಮುಂತಾದವರು ಇದ್ದರು ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರನ್ನು ಸನ್ಮಾನಿಸಲಾಯಿತು ರಾತ್ರಿಯಿಡೀ ವಿವಿಧ ತಂಡಗಳಿಂದ ನಾದಸ್ವರ, ವಾದ್ಯ, ಭಜನೆ, ಪ್ರವಚನ ಕಾರ್ಯಕ್ರಮಗಳನ್ನು ಸೋಮವಾರ ಬೆಳಗ್ಗಿನ ತನಕ ಹಮ್ಮಿಕೊಳ್ಳಲಾಗಿತ್ತು,
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…