ಕೋಲಾರ:ಗ್ರಾಮೀಣ ಭಾಗದಲ್ಲಿ ಕಲೆಗೆ ಕೊರತೆಯಿಲ್ಲ ಅವರನ್ನು ಗುರುತಿಸಿ ಪ್ರೋತ್ಸಾಹ ಮಾಡುವ ಮೂಲಕ ಸ್ಥಳೀಯ ಕಲಾವಿದರಿಗೆ ಮೊದಲ ಅಧ್ಯತೆ ನೀಡಿದಾಗ ಸಮಾಜದಲ್ಲಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ತಿಳಿಸಿದರು.
ತಾಲೂಕಿನ ಸುಗಟೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಶ್ರೀ ವೀರಬ್ರಹ್ಮೇಂದ್ರಸ್ವಾಮಿ ಸೇವಾ ಸಮಿತಿ ಮತ್ತು ಸವಿತಾ ಸಮಾಜ ವತಿಯಿಂದ ನಾಲ್ಕನೇ ವರ್ಷದ ಗುರು ಪೂರ್ಣಿಮ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮಲ್ಲಿ ಕಲಾವಿದರ ಕೊರತೆ ಇಲ್ಲ ಆದರೆ ಇಲ್ಲಿ ಅವರಿಗೆ ಅವಕಾಶದ ಕೊರತೆ ಇದೆ, ಅವರನ್ನು ಗುರುತಿಸಿ ಕಲೆಗೆ ಪ್ರೋತ್ಸಾಹ ನೀಡುವ ಮನಸ್ಸುಗಳು ನಮ್ಮಲ್ಲಿಯೇ ಹೆಚ್ಚಾಗಬೇಕು ಕಲೆಯೆಂಬುದು ಒಬ್ಬರ ಸ್ವತ್ತಲ್ಲ, ಕಲೆಯು ಜಾತಿ, ಮತ, ಪ್ರಾದೇಶಿಕತೆ, ಗಡಿಯನ್ನು ಮೀರಿದಂತಹದ್ದು ಎಂದರು.
ಸವಿತಾ ಸಮಾಜದ ಬಂಧುಗಳು ಸಮಾಜದಲ್ಲಿ ಯಾರಿಗೂ ತೊಂದರೆ ಕೊಡದೇ ತಮ್ಮ ಕೆಲಸವನ್ನು ಮಾಡಿಕೊಂಡು ಗೌರವಯುತವಾದ ಬದುಕು ಕಂಡುಕೊಂಡಿದ್ದಾರೆ ಅ ಸಮದಾಯದ ಅಭಿವೃದ್ಧಿಗಾಗಿ ವಯಕ್ತಿಕವಾಗಿ ಹಾಗೂ ಸರಕಾರದಿಂದ ಸಹಾಯ ಮಾಡಲು ಸಿದ್ದನಿದ್ದೇನೆ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಜೊತೆಗೆ ಕ್ಷೇತ್ರದಲ್ಲಿನ ನಿರುದ್ಯೋಗ ಯುವಕರಿಗೆ ಉದ್ಯೋಗಕ್ಕಾಗಿ ಐದು ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಗಳು ಸ್ಥಾಪನೆಗೆ ಈಗಾಗಲೇ ಸರಕಾರದ ಮಟ್ಟದಲ್ಲಿ ಅನುಮೋದನೆ ಮಾಡಿಸಲಾಗಿದೆ ಗ್ರಾಮೀಣ ರಸ್ತೆಗಳು ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಾ ಇದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು
ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಸನ್ಮಾನ ಸ್ವೀಕರಿಸಿ ಮಾತನಾಡಿ ಸುಗಟೂರಿಗೆ ಐತಿಹಾಸಿಕ ಪರಂಪರೆ ಇದೆ ಈ ಗ್ರಾಮವನ್ನು ಮಾದರಿಯಾಗಿ ಗುರುತಿಸಿಕೊಳ್ಳುವಂತೆ ಮಾಡಬೇಕಾಗಿದೆ ಈ ಗ್ರಾಮದಿಂದ ಪೋತ್ಸಾಹಿಸಿದ್ದರಿಂದಾಗಿ ನಿಮ್ಮ ಹುಡುಗ ಇವತ್ತು ಅಕ್ಕ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಬಂದಿದೆ ಕಲೆಯನ್ನು ನಾವು ಪ್ರೀತಿ ಗೌರವದಿಂದ ಕಂಡಾಗ ಕಲೆ ನಮ್ಮ ಬದುಕು ಕಟ್ಟಿಕೊಡುತ್ತದೆ ಪ್ರತಿ ಗ್ರಾಮದಲ್ಲಿ ಕಲಾವಿದರು ಇದ್ದು ಅವರನ್ನು ಪೋತ್ಸಾಹಿಸವ ಕೆಲಸವನ್ನು ಗ್ರಾಮ ಮಟ್ಟದಿಂದಲ್ಲೇ ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಸುಗಟೂರು ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಸದಸ್ಯ ಎಸ್.ವಿ ನಾರಾಯಣಗೌಡ, ಮುಖಂಡರಾದ ಕಿಟ್ಟೇಗೌಡ, ಗೋಪಾಲಗೌಡ, ಉರಗಲಿ ನಾರಾಯಣಸ್ವಾಮಿ, ಸುಬ್ರಮಣಿ, ಮಂಜುನಾಥ್ ಮುಂತಾದವರು ಇದ್ದರು ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರನ್ನು ಸನ್ಮಾನಿಸಲಾಯಿತು ರಾತ್ರಿಯಿಡೀ ವಿವಿಧ ತಂಡಗಳಿಂದ ನಾದಸ್ವರ, ವಾದ್ಯ, ಭಜನೆ, ಪ್ರವಚನ ಕಾರ್ಯಕ್ರಮಗಳನ್ನು ಸೋಮವಾರ ಬೆಳಗ್ಗಿನ ತನಕ ಹಮ್ಮಿಕೊಳ್ಳಲಾಗಿತ್ತು,
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…