Categories: ಕೋಲಾರ

ಸ್ಥಳೀಯ ಕಲಾವಿದರಿಗೆ ಪೋತ್ಸಾಹ ಅಗತ್ಯವಾಗಿದೆ- ಶಾಸಕ ಜಿ‌.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯ

ಕೋಲಾರ:ಗ್ರಾಮೀಣ ಭಾಗದಲ್ಲಿ ಕಲೆಗೆ ಕೊರತೆಯಿಲ್ಲ ಅವರನ್ನು ಗುರುತಿಸಿ ಪ್ರೋತ್ಸಾಹ ಮಾಡುವ ಮೂಲಕ ಸ್ಥಳೀಯ ಕಲಾವಿದರಿಗೆ ಮೊದಲ ಅಧ್ಯತೆ ನೀಡಿದಾಗ ಸಮಾಜದಲ್ಲಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ತಿಳಿಸಿದರು.

ತಾಲೂಕಿನ ಸುಗಟೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಶ್ರೀ ವೀರಬ್ರಹ್ಮೇಂದ್ರಸ್ವಾಮಿ ಸೇವಾ ಸಮಿತಿ ಮತ್ತು ಸವಿತಾ ಸಮಾಜ ವತಿಯಿಂದ ನಾಲ್ಕನೇ ವರ್ಷದ ಗುರು ಪೂರ್ಣಿಮ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮಲ್ಲಿ ಕಲಾವಿದರ ಕೊರತೆ ಇಲ್ಲ ಆದರೆ ಇಲ್ಲಿ ಅವರಿಗೆ ಅವಕಾಶದ ಕೊರತೆ ಇದೆ, ಅವರನ್ನು ಗುರುತಿಸಿ ಕಲೆಗೆ ಪ್ರೋತ್ಸಾಹ ನೀಡುವ ಮನಸ್ಸುಗಳು ನಮ್ಮಲ್ಲಿಯೇ ಹೆಚ್ಚಾಗಬೇಕು ಕಲೆಯೆಂಬುದು ಒಬ್ಬರ ಸ್ವತ್ತಲ್ಲ, ಕಲೆಯು ಜಾತಿ, ಮತ, ಪ್ರಾದೇಶಿಕತೆ, ಗಡಿಯನ್ನು ಮೀರಿದಂತಹದ್ದು ಎಂದರು.

ಸವಿತಾ ಸಮಾಜದ ಬಂಧುಗಳು ಸಮಾಜದಲ್ಲಿ ಯಾರಿಗೂ ತೊಂದರೆ ಕೊಡದೇ ತಮ್ಮ ಕೆಲಸವನ್ನು ಮಾಡಿಕೊಂಡು ಗೌರವಯುತವಾದ ಬದುಕು ಕಂಡುಕೊಂಡಿದ್ದಾರೆ ಅ ಸಮದಾಯದ ಅಭಿವೃದ್ಧಿಗಾಗಿ ವಯಕ್ತಿಕವಾಗಿ ಹಾಗೂ ಸರಕಾರದಿಂದ ಸಹಾಯ ಮಾಡಲು ಸಿದ್ದನಿದ್ದೇನೆ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಜೊತೆಗೆ ಕ್ಷೇತ್ರದಲ್ಲಿನ ನಿರುದ್ಯೋಗ ಯುವಕರಿಗೆ ಉದ್ಯೋಗಕ್ಕಾಗಿ ಐದು ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಗಳು ಸ್ಥಾಪನೆಗೆ ಈಗಾಗಲೇ ಸರಕಾರದ ಮಟ್ಟದಲ್ಲಿ ಅನುಮೋದನೆ ಮಾಡಿಸಲಾಗಿದೆ ಗ್ರಾಮೀಣ ರಸ್ತೆಗಳು ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಾ ಇದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು

ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಸನ್ಮಾನ ಸ್ವೀಕರಿಸಿ ಮಾತನಾಡಿ ಸುಗಟೂರಿಗೆ ಐತಿಹಾಸಿಕ ಪರಂಪರೆ ಇದೆ ಈ ಗ್ರಾಮವನ್ನು ಮಾದರಿಯಾಗಿ ಗುರುತಿಸಿಕೊಳ್ಳುವಂತೆ ಮಾಡಬೇಕಾಗಿದೆ ಈ ಗ್ರಾಮದಿಂದ ಪೋತ್ಸಾಹಿಸಿದ್ದರಿಂದಾಗಿ ನಿಮ್ಮ ಹುಡುಗ ಇವತ್ತು ಅಕ್ಕ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಬಂದಿದೆ ಕಲೆಯನ್ನು ನಾವು ಪ್ರೀತಿ ಗೌರವದಿಂದ ಕಂಡಾಗ ಕಲೆ ನಮ್ಮ ಬದುಕು ಕಟ್ಟಿಕೊಡುತ್ತದೆ ಪ್ರತಿ ಗ್ರಾಮದಲ್ಲಿ ಕಲಾವಿದರು ಇದ್ದು ಅವರನ್ನು ಪೋತ್ಸಾಹಿಸವ ಕೆಲಸವನ್ನು ಗ್ರಾಮ ಮಟ್ಟದಿಂದಲ್ಲೇ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಸುಗಟೂರು ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಸದಸ್ಯ ಎಸ್.ವಿ ನಾರಾಯಣಗೌಡ, ಮುಖಂಡರಾದ ಕಿಟ್ಟೇಗೌಡ, ಗೋಪಾಲಗೌಡ, ಉರಗಲಿ ನಾರಾಯಣಸ್ವಾಮಿ, ಸುಬ್ರಮಣಿ, ಮಂಜುನಾಥ್ ಮುಂತಾದವರು ಇದ್ದರು ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರನ್ನು ಸನ್ಮಾನಿಸಲಾಯಿತು ರಾತ್ರಿಯಿಡೀ ವಿವಿಧ ತಂಡಗಳಿಂದ ನಾದಸ್ವರ, ವಾದ್ಯ, ಭಜನೆ, ಪ್ರವಚನ ಕಾರ್ಯಕ್ರಮಗಳನ್ನು ಸೋಮವಾರ ಬೆಳಗ್ಗಿನ ತನಕ ಹಮ್ಮಿಕೊಳ್ಳಲಾಗಿತ್ತು,

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

12 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

12 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

16 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

23 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

1 day ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

2 days ago