Categories: ಕೋಲಾರ

ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಫೈರೋಜ್ ಖಾನ್ ಅವಿರೋಧ ಆಯ್ಕೆ

ಕೋಲಾರ: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 16ನೇ ವಾರ್ಡ್‌ನ ಸದಸ್ಯ ಎ.ಫೈರೋಜ್ ಖಾನ್ ಅವಿರೋಧವಾಗಿ ಆಯ್ಕೆಯಾದರು

ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವಿರೋಧ ಆಯ್ಕೆ ನಡೆಯದೇ ಚುನಾವಣೆ ನಡೆಸುವಂತೆ ಕೆಲ ಸದಸ್ಯರು ಒತ್ತಾಯಿಸಿದರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕೇವಲ ಏಳು ಮಂದಿ ಮಾತ್ರವೇ ಸಲ್ಲಿಸಿದ್ದರಿಂದ ಸದಸ್ಯರು ಅವಿರೋಧ ಆಯ್ಕೆಯಾದರು ಸದಸ್ಯರೆಲ್ಲಾ ಸೇರಿ ಎ.ಫೈರೋಜ್ ಖಾನ್ ಅವರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಮಾಡಿದರು.

ಈ ಹಿಂದೆ ಖಾಲಿಯಾಗಿದ್ದ ಸ್ಥಾಯಿ ಸಮಿತಿ ಅಧ್ಯಕ್ಷಗಾದಿಗೆ ಶಾಸಕ ಕೊತ್ತೂರು ಮಂಜುನಾಥ್ ಬಣ ಮತ್ತು ಮಾಜಿ‌ ಅಧ್ಯಕ್ಷ ಮುಬಾರಕ್ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಚುನಾವಣೆ ಘೋಷಣೆ ಮಾಡಿದ ನಂತರ ಫೈರೋಜ್ ಖಾನ್ ಅವರಿಗೆ ಅಧ್ಯಕ್ಷಗಾದಿಯ ಪಟ್ಟ ಒಲಿಯಿತು.

ನಂತರ ಮಾತನಾಡಿದ ನೂತನ ಅಧ್ಯಕ್ಷ ಫೈರೋಜ್ ಖಾನ್‌ ನನ್ನ ಆಯ್ಕೆಗೆ ಸಹಕರಿಸಿದ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್‌ ಸದಸ್ಯರಾದ ನಜೀರ್ ಆಹಮ್ಮದ್, ಅನಿಲ್‌ಕುಮಾರ್ ಹಾಗೂ ನಗರಸಭೆ ಅಧ್ಯಕ್ಷರು, ಸದಸ್ಯರು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ನಗರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತೇನೆ ನಗರಕ್ಕೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ, ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಸೇರಿದಂತೆ ನಗರದ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಎಲ್ಲಾ ಸದಸ್ಯರನ್ನು ವಿ‌ಶ್ವಾಸಕ್ಕೆ ತೆಗೆದುಕೊಂಡು ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಉಪಾಧ್ಯಕ್ಷೆ ಸಂಗೀತಾ, ನೂತನ ಸ್ಥಾಯಿ ಸಮಿತಿ ಸದಸ್ಯರಾಗಿ ಷಮಾತಾಜ್, ಎನ್ ಅಂಬರೀಶ್, ನಗ್ಮಭಾನು, ಸುರೇಶ್ ಬಾಬು, ಪ್ರವೀಣ್ ಗೌಡ ಸೇರಿದಂತೆ ನಗರಸಭೆ ಸದಸ್ಯರು ಮುಖಂಡರು ಇದ್ದರು.

Ramesh Babu

Journalist

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

4 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

6 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

11 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

12 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 day ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

1 day ago