ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತ- ಎಲ್ಲಾ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತಗೊಳಿಸುವ ಭಾಗವಾಗಿ ಬೆoಗಳೂರು ಗ್ರಾಮಾoತರ ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ ಎoದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ತಿಳಿಸಿದ್ದಾರೆ.

2011ರಲ್ಲಿ ಬೆಂಗಳೂರು ನಗರ ಜಿಲ್ಲೆ ಮತ್ತು 2024 ರಲ್ಲಿ ಮಾರ್ಚ್‌ನಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.
ಇದು ಆ ಜಿಲ್ಲೆಯಲ್ಲಿ ಯಶಸ್ವಿಯಾಗುತ್ತಿರುವ ಕಾರಣ ರಾಜ್ಯಾದ್ಯಂತ ಇದನ್ನು ವಿಸ್ತರಿಸಲಾಗಿದೆ. ಅದರಂತೆ ಜಿಲ್ಲೆಯ ಉಪನೋಂದಣಿ ಕಚೇರಿಯಲ್ಲೂ ನೋಂದಣಿಗ ಅವಕಾಶ ಕಲ್ಪಿಸಲಾಗಿದೆ. ಎಲ್ಲಿಯಾದರು (Any Where) ನೋಂದಣಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎಲ್ಲಿಯಾದರು ನೋಂದಣಿಯಲ್ಲಿ ದಸ್ತಾವೇಜಿನ ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರು ಉಪನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಈ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು.

ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ.

ಇದರಿoದ ಉಪನೋಂದಣಿ ಕಛೇರಿಯಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಆದುದರಿಂದ ಸಾರ್ವಜನಿಕರು ಎಲ್ಲಿಯಾದರು (Any Where) ನೋಂದಣಿಯ ಸೌಲಭ್ಯದ ಸದುಪಯೋಗ ಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಪಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳ ಬಹುದಾಗಿದೆ. ಉದಾಹರಣೆಗೆ ನೆಲಮಂಗಲ ಉಪನೋಂದಣಿ ಕಚೇರಿ, ವ್ಯಾಪ್ತಿಗೆ ಬರುವ ಸ್ವತ್ತುಗಳನ್ನು ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಯಾವುದಾದರು ಒಂದು ಉಪನೋಂದಣಿ ಕಚೇರಿಯಲ್ಲಿ ಆಯ್ಕೆ ಮಾಡಿಕೊಂಡು ನೋಂದಣಿ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿರುತ್ತದೆ]

ಈ ಸೌಲಭ್ಯವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಪಟ್ಟ ತಾಲ್ಲೂಕುಗಳಾದ ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಮತ್ತು ದೊಡ್ಡಬಳ್ಳಾಪುರ, ಉಪನೋಂದಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಒಳಪಡುವ ಆಸ್ತಿಗಳನ್ನು ಜಿಲ್ಲೆಯ ಯಾವುದೇ ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ
ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago