ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳವನ್ನು ವಿರೋಧಿಸುವುದರ ಜೊತೆಗೆ ಕೂಡಲೇ ಶುಲ್ಕ ಹೆಚ್ಚಳ ಆದೇಶವನ್ನು ವಾಪಸ್ ಪಡೆಯುವಂತೆ ಎಸ್ಎಫ್ಐ ಸಂಘಟನೆಯಿಂದ ವಿವಿ ಪ್ರಭಾರಿ ಕುಲಪತಿ ಪ್ರೊ. ಕುಮದಾ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಅಂಬ್ಲಿಕಲ್ ಶಿವಪ್ಪ ಮಾತನಾಡಿ, ಕಳೆದ ವರ್ಷ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕವು ಎಸ್ಸಿ ಎಸ್ಟಿಗೆ 335 ರೂ., ಒಬಿಸಿ ಹಾಗೂ ಪ್ರವರ್ಗ 1ಕ್ಕೆ 13000, ಸಾಮಾನ್ಯ ವರ್ಗಕ್ಕೆ 18000 ಮತ್ತು ಪೇಮೆಂಟ್ ಶುಲ್ಕ18000 ಇತ್ತು. ಆದರೆ, ಈ ವರ್ಷ ಏಕಾಏಕಿ ವಿಶ್ವವಿದ್ಯಾಲಯವು ಎಸ್ಸಿ, ಎಸ್ಟಿ, ಒಬಿಸಿ ಪ್ರವರ್ಗ ಒಂದಕ್ಕೆ 19050 ರೂ. ಮತ್ತು ಪೇಮೆಂಟ್ ಶುಲ್ಕ ಎಸ್ಸಿ, ಎಸ್ಟಿಗೆ 39930, ಸಾಮಾನ್ಯ ವರ್ಗಕ್ಕೆ 58980 ರೂ. ಏರಿಕೆ ಮಾಡಿ ಕಳೆದ ಬಾರಿಗಿಂತ ಮೂರರಷ್ಟು ಏರಿಕೆ ಮಾಡಿದ್ದು ಸರ್ಕಾರ ಮತ್ತು ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಆಸೆಗೆ ಕೊಳ್ಳಿ ಹಿಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕೊರೋನ ಸಂಕಷ್ಟದ ಆರ್ಥಿಕ ಬಿಕ್ಕಟ್ಟಿನಲ್ಲಿ ಇರುವ ಸಂದರ್ಭದಲ್ಲಿಯೇ ರೈತರ ಮಕ್ಕಳು ಇಷ್ಟು ಹಣ ಕಟ್ಟಲು ತುಂಬಾ ಕಷ್ಟವಾಗುತ್ತದೆ. ಕೂಡಲೇ ಸರ್ಕಾರ ಮತ್ತು ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಮಧ್ಯಪ್ರವೇಶ ಮಾಡಿ ಶುಲ್ಕವನ್ನು ಕಡಿಮೆ ಮಾಡಬೇಕು. ವಿಶ್ವವಿದ್ಯಾಲಯವು ಕಡಿಮೆ ಮಾಡದೇ ಹೋದರೆ ಎಸ್ಎಫ್ಐ ಸಂಘಟನೆ ವತಿಯಿಂದ ವಿಶ್ವವಿದ್ಯಾಲಯದ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷೆ ಅಂಕಿತ, ಮುಖಂಡರಾದ ರಾಜೇಶ್, ಚೈತ್ರ, ಭರತ್, ಅನುಷಾ, ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…