Categories: ಕೋಲಾರ

ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಎಸ್‌ಎಫ್‌ಐ ವಿರೋಧ: ಕೂಡಲೇ ಶುಲ್ಕ ಹೆಚ್ಚಳ ಆದೇಶವನ್ನು ವಾಪಸ್ ಪಡೆಯುವಂತೆ ಮನವಿ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳವನ್ನು ವಿರೋಧಿಸುವುದರ ಜೊತೆಗೆ ಕೂಡಲೇ ಶುಲ್ಕ ಹೆಚ್ಚಳ ಆದೇಶವನ್ನು ವಾಪಸ್ ಪಡೆಯುವಂತೆ ಎಸ್‌ಎಫ್‌ಐ ಸಂಘಟನೆಯಿಂದ ವಿವಿ ಪ್ರಭಾರಿ ಕುಲಪತಿ ಪ್ರೊ. ಕುಮದಾ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಅಂಬ್ಲಿಕಲ್ ಶಿವಪ್ಪ ಮಾತನಾಡಿ, ಕಳೆದ ವರ್ಷ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕವು ಎಸ್ಸಿ ಎಸ್ಟಿಗೆ 335 ರೂ., ಒಬಿಸಿ ಹಾಗೂ ಪ್ರವರ್ಗ 1ಕ್ಕೆ 13000, ಸಾಮಾನ್ಯ ವರ್ಗಕ್ಕೆ 18000 ಮತ್ತು ಪೇಮೆಂಟ್ ಶುಲ್ಕ18000 ಇತ್ತು. ಆದರೆ, ಈ ವರ್ಷ ಏಕಾಏಕಿ ವಿಶ್ವವಿದ್ಯಾಲಯವು ಎಸ್ಸಿ, ಎಸ್ಟಿ, ಒಬಿಸಿ ಪ್ರವರ್ಗ ಒಂದಕ್ಕೆ 19050 ರೂ. ಮತ್ತು ಪೇಮೆಂಟ್ ಶುಲ್ಕ ಎಸ್ಸಿ, ಎಸ್ಟಿಗೆ 39930, ಸಾಮಾನ್ಯ ವರ್ಗಕ್ಕೆ 58980 ರೂ. ಏರಿಕೆ ಮಾಡಿ ಕಳೆದ ಬಾರಿಗಿಂತ ಮೂರರಷ್ಟು ಏರಿಕೆ ಮಾಡಿದ್ದು ಸರ್ಕಾರ ಮತ್ತು ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಆಸೆಗೆ ಕೊಳ್ಳಿ ಹಿಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕೊರೋನ ಸಂಕಷ್ಟದ ಆರ್ಥಿಕ ಬಿಕ್ಕಟ್ಟಿನಲ್ಲಿ ಇರುವ ಸಂದರ್ಭದಲ್ಲಿಯೇ ರೈತರ ಮಕ್ಕಳು ಇಷ್ಟು ಹಣ ಕಟ್ಟಲು ತುಂಬಾ ಕಷ್ಟವಾಗುತ್ತದೆ. ಕೂಡಲೇ ಸರ್ಕಾರ ಮತ್ತು ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಮಧ್ಯಪ್ರವೇಶ ಮಾಡಿ ಶುಲ್ಕವನ್ನು ಕಡಿಮೆ ಮಾಡಬೇಕು. ವಿಶ್ವವಿದ್ಯಾಲಯವು ಕಡಿಮೆ ಮಾಡದೇ ಹೋದರೆ ಎಸ್‌ಎಫ್‌ಐ ಸಂಘಟನೆ ವತಿಯಿಂದ ವಿಶ್ವವಿದ್ಯಾಲಯದ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷೆ ಅಂಕಿತ, ಮುಖಂಡರಾದ ರಾಜೇಶ್, ಚೈತ್ರ, ಭರತ್, ಅನುಷಾ, ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

4 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

5 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

13 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

18 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago