Categories: ಕೋಲಾರ

ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಎಸ್‌ಎಫ್‌ಐ ವಿರೋಧ: ಕೂಡಲೇ ಶುಲ್ಕ ಹೆಚ್ಚಳ ಆದೇಶವನ್ನು ವಾಪಸ್ ಪಡೆಯುವಂತೆ ಮನವಿ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳವನ್ನು ವಿರೋಧಿಸುವುದರ ಜೊತೆಗೆ ಕೂಡಲೇ ಶುಲ್ಕ ಹೆಚ್ಚಳ ಆದೇಶವನ್ನು ವಾಪಸ್ ಪಡೆಯುವಂತೆ ಎಸ್‌ಎಫ್‌ಐ ಸಂಘಟನೆಯಿಂದ ವಿವಿ ಪ್ರಭಾರಿ ಕುಲಪತಿ ಪ್ರೊ. ಕುಮದಾ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಅಂಬ್ಲಿಕಲ್ ಶಿವಪ್ಪ ಮಾತನಾಡಿ, ಕಳೆದ ವರ್ಷ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕವು ಎಸ್ಸಿ ಎಸ್ಟಿಗೆ 335 ರೂ., ಒಬಿಸಿ ಹಾಗೂ ಪ್ರವರ್ಗ 1ಕ್ಕೆ 13000, ಸಾಮಾನ್ಯ ವರ್ಗಕ್ಕೆ 18000 ಮತ್ತು ಪೇಮೆಂಟ್ ಶುಲ್ಕ18000 ಇತ್ತು. ಆದರೆ, ಈ ವರ್ಷ ಏಕಾಏಕಿ ವಿಶ್ವವಿದ್ಯಾಲಯವು ಎಸ್ಸಿ, ಎಸ್ಟಿ, ಒಬಿಸಿ ಪ್ರವರ್ಗ ಒಂದಕ್ಕೆ 19050 ರೂ. ಮತ್ತು ಪೇಮೆಂಟ್ ಶುಲ್ಕ ಎಸ್ಸಿ, ಎಸ್ಟಿಗೆ 39930, ಸಾಮಾನ್ಯ ವರ್ಗಕ್ಕೆ 58980 ರೂ. ಏರಿಕೆ ಮಾಡಿ ಕಳೆದ ಬಾರಿಗಿಂತ ಮೂರರಷ್ಟು ಏರಿಕೆ ಮಾಡಿದ್ದು ಸರ್ಕಾರ ಮತ್ತು ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಆಸೆಗೆ ಕೊಳ್ಳಿ ಹಿಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕೊರೋನ ಸಂಕಷ್ಟದ ಆರ್ಥಿಕ ಬಿಕ್ಕಟ್ಟಿನಲ್ಲಿ ಇರುವ ಸಂದರ್ಭದಲ್ಲಿಯೇ ರೈತರ ಮಕ್ಕಳು ಇಷ್ಟು ಹಣ ಕಟ್ಟಲು ತುಂಬಾ ಕಷ್ಟವಾಗುತ್ತದೆ. ಕೂಡಲೇ ಸರ್ಕಾರ ಮತ್ತು ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಮಧ್ಯಪ್ರವೇಶ ಮಾಡಿ ಶುಲ್ಕವನ್ನು ಕಡಿಮೆ ಮಾಡಬೇಕು. ವಿಶ್ವವಿದ್ಯಾಲಯವು ಕಡಿಮೆ ಮಾಡದೇ ಹೋದರೆ ಎಸ್‌ಎಫ್‌ಐ ಸಂಘಟನೆ ವತಿಯಿಂದ ವಿಶ್ವವಿದ್ಯಾಲಯದ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷೆ ಅಂಕಿತ, ಮುಖಂಡರಾದ ರಾಜೇಶ್, ಚೈತ್ರ, ಭರತ್, ಅನುಷಾ, ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

1 hour ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

3 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

3 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

4 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

8 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

9 hours ago