Categories: ಕೋಲಾರ

ಸ್ನಾತಕೋತ್ತರ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಎಸ್ಎಫ್ಐ ನಿಂದ ಪ್ರತಿಭಟನೆ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ವಿಧ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ಎಫ್ಐ ಸಂಘಟನೆ ಹಾಗೂ ವಿಧ್ಯಾರ್ಥಿಗಳು ಮಂಗಸಂದ್ರ ಸ್ನಾತಕೋತ್ತರ ಕೇಂದ್ರದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು

ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಎನ್ ಶಿವಪ್ಪ ಮಾತನಾಡಿ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ಮೌಲ್ಯಮಾಪನ, ಇಂಟರ್‌ನೆಟ್ ಸಮಸ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡ ವಿಧ್ಯಾರ್ಥಿಗಳಿಗೆ ಹೆಚ್ಚಿನ ಶುಲ್ಕ ಪಾವತಿ ಸೇರಿದಂತೆ ಸಾಕಷ್ಟು ಸಮಸ್ಯೆಗಳ ಪಟ್ಟಿಯನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸಮಸ್ಯೆ ಬಗೆಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ದಾಖಲಾತಿ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನ ಬಂದಿಲ್ಲ ಹಿಂದುಳಿದ ವರ್ಗಗಳ ಬುಡಕಟ್ಟು ಭೇಟಿಯ ಹಣವನ್ನು ನೀಡದೇ ವಿಳಂಬ ಮಾಡಿದ್ದಾರೆ ವಿದ್ಯಾರ್ಥಿಗಳ ಸ್ವಂತ ಹಣದಿಂದ ಖರ್ಚು ಮಾಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಕ್ಕೆ ಬಿಲ್ಲುಗಳನ್ನು ನೀಡಿ ವರ್ಷವಾದರೂ ಯಾವುದೇ ಕ್ರಮ ವಹಿಸಿಲ್ಲ ಕೇಂದ್ರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ಗಳನ್ನು ವಿತರಣೆ ಮಾಡಬೇಕು ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಪ್ರತ್ಯೇಕವಾಗಿ ಪ್ರಯೋಗಾಲಯದ ಶುಲ್ಕವನ್ನು ವಸೂಲಿ ಮಾಡಬಾರದು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಎಸ್ಎಫ್ಐ ಸಂಘಟನೆಯ ಮಾಜಿ ರಾಜ್ಯ ಅಧ್ಯಕ್ಷ ವಿ.ಅಂಬರೀಷ್ ಮಾತನಾಡಿ ವಿಶ್ವವಿದ್ಯಾಲಯವು ಕೆಲವು ಬ್ರೋಕರ್ ಗಳಿಂದ ಕೂಡಿದ್ದು ಶೈಕ್ಷಣಿಕ ವ್ಯವಸ್ಥೆಯನ್ನು ನಾಶ ಮಾಡಿದ್ದಾರೆ ಇದಕ್ಕೆ ಜನಪ್ರತಿನಿಧಿಗಳ ಅಧಿಕಾರಿ ವರ್ಗ ಶಾಮೀಲಾಗಿದ್ದಾರೆ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಬೆಳವಣಿಗೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡದೇ ಶಿಕ್ಷಣದಿಂದ ವಂಚಿತರಾಗಿ ಮಾಡಿದ್ದಾರೆ ಎಂದು ಆರೋಪಿಸಿದರು

ಪ್ರತಿಭಟನೆಯ ನೇತೃತ್ವವನ್ನು ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ವಿ.ಸುರೇಶ್‌ಬಾಬು ಜಿಲ್ಲಾ ಉಪಾಧ್ಯಕ್ಷರಾದ ಶಶಿಕುಮಾ‌ರ್, ಸುದರ್ಶನ್, ಲಾವಣ್ಯ, ಜಿಲ್ಲಾ ಸಹ ಕಾರ್ಯದರ್ಶಿ ಹರ್ಷಿತ ಮುಖಂಡರಾದ ತಿಮ್ಮರಾಜು, ಅಮೃತ, ಬಾಷ, ಪವಣ್, ಪ್ರಿಯಾಂಕ ಸೇರಿದಂತೆ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ವಹಿಸಿದ್ದರು

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

53 minutes ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

2 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

5 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

11 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

22 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago