ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ವಿಧ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ಎಫ್ಐ ಸಂಘಟನೆ ಹಾಗೂ ವಿಧ್ಯಾರ್ಥಿಗಳು ಮಂಗಸಂದ್ರ ಸ್ನಾತಕೋತ್ತರ ಕೇಂದ್ರದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು
ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಎನ್ ಶಿವಪ್ಪ ಮಾತನಾಡಿ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ಮೌಲ್ಯಮಾಪನ, ಇಂಟರ್ನೆಟ್ ಸಮಸ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡ ವಿಧ್ಯಾರ್ಥಿಗಳಿಗೆ ಹೆಚ್ಚಿನ ಶುಲ್ಕ ಪಾವತಿ ಸೇರಿದಂತೆ ಸಾಕಷ್ಟು ಸಮಸ್ಯೆಗಳ ಪಟ್ಟಿಯನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸಮಸ್ಯೆ ಬಗೆಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು
ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ದಾಖಲಾತಿ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನ ಬಂದಿಲ್ಲ ಹಿಂದುಳಿದ ವರ್ಗಗಳ ಬುಡಕಟ್ಟು ಭೇಟಿಯ ಹಣವನ್ನು ನೀಡದೇ ವಿಳಂಬ ಮಾಡಿದ್ದಾರೆ ವಿದ್ಯಾರ್ಥಿಗಳ ಸ್ವಂತ ಹಣದಿಂದ ಖರ್ಚು ಮಾಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಕ್ಕೆ ಬಿಲ್ಲುಗಳನ್ನು ನೀಡಿ ವರ್ಷವಾದರೂ ಯಾವುದೇ ಕ್ರಮ ವಹಿಸಿಲ್ಲ ಕೇಂದ್ರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ಗಳನ್ನು ವಿತರಣೆ ಮಾಡಬೇಕು ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಪ್ರತ್ಯೇಕವಾಗಿ ಪ್ರಯೋಗಾಲಯದ ಶುಲ್ಕವನ್ನು ವಸೂಲಿ ಮಾಡಬಾರದು ಎಂದು ಒತ್ತಾಯಿಸಿದರು
ಈ ಸಂದರ್ಭದಲ್ಲಿ ಎಸ್ಎಫ್ಐ ಸಂಘಟನೆಯ ಮಾಜಿ ರಾಜ್ಯ ಅಧ್ಯಕ್ಷ ವಿ.ಅಂಬರೀಷ್ ಮಾತನಾಡಿ ವಿಶ್ವವಿದ್ಯಾಲಯವು ಕೆಲವು ಬ್ರೋಕರ್ ಗಳಿಂದ ಕೂಡಿದ್ದು ಶೈಕ್ಷಣಿಕ ವ್ಯವಸ್ಥೆಯನ್ನು ನಾಶ ಮಾಡಿದ್ದಾರೆ ಇದಕ್ಕೆ ಜನಪ್ರತಿನಿಧಿಗಳ ಅಧಿಕಾರಿ ವರ್ಗ ಶಾಮೀಲಾಗಿದ್ದಾರೆ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಬೆಳವಣಿಗೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡದೇ ಶಿಕ್ಷಣದಿಂದ ವಂಚಿತರಾಗಿ ಮಾಡಿದ್ದಾರೆ ಎಂದು ಆರೋಪಿಸಿದರು
ಪ್ರತಿಭಟನೆಯ ನೇತೃತ್ವವನ್ನು ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ವಿ.ಸುರೇಶ್ಬಾಬು ಜಿಲ್ಲಾ ಉಪಾಧ್ಯಕ್ಷರಾದ ಶಶಿಕುಮಾರ್, ಸುದರ್ಶನ್, ಲಾವಣ್ಯ, ಜಿಲ್ಲಾ ಸಹ ಕಾರ್ಯದರ್ಶಿ ಹರ್ಷಿತ ಮುಖಂಡರಾದ ತಿಮ್ಮರಾಜು, ಅಮೃತ, ಬಾಷ, ಪವಣ್, ಪ್ರಿಯಾಂಕ ಸೇರಿದಂತೆ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ವಹಿಸಿದ್ದರು
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…