Categories: ಕೋಲಾರ

ಸ್ನಾತಕೋತ್ತರ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಎಸ್ಎಫ್ಐ ನಿಂದ ಪ್ರತಿಭಟನೆ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ವಿಧ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ಎಫ್ಐ ಸಂಘಟನೆ ಹಾಗೂ ವಿಧ್ಯಾರ್ಥಿಗಳು ಮಂಗಸಂದ್ರ ಸ್ನಾತಕೋತ್ತರ ಕೇಂದ್ರದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು

ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಎನ್ ಶಿವಪ್ಪ ಮಾತನಾಡಿ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ಮೌಲ್ಯಮಾಪನ, ಇಂಟರ್‌ನೆಟ್ ಸಮಸ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡ ವಿಧ್ಯಾರ್ಥಿಗಳಿಗೆ ಹೆಚ್ಚಿನ ಶುಲ್ಕ ಪಾವತಿ ಸೇರಿದಂತೆ ಸಾಕಷ್ಟು ಸಮಸ್ಯೆಗಳ ಪಟ್ಟಿಯನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸಮಸ್ಯೆ ಬಗೆಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ದಾಖಲಾತಿ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನ ಬಂದಿಲ್ಲ ಹಿಂದುಳಿದ ವರ್ಗಗಳ ಬುಡಕಟ್ಟು ಭೇಟಿಯ ಹಣವನ್ನು ನೀಡದೇ ವಿಳಂಬ ಮಾಡಿದ್ದಾರೆ ವಿದ್ಯಾರ್ಥಿಗಳ ಸ್ವಂತ ಹಣದಿಂದ ಖರ್ಚು ಮಾಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಕ್ಕೆ ಬಿಲ್ಲುಗಳನ್ನು ನೀಡಿ ವರ್ಷವಾದರೂ ಯಾವುದೇ ಕ್ರಮ ವಹಿಸಿಲ್ಲ ಕೇಂದ್ರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ಗಳನ್ನು ವಿತರಣೆ ಮಾಡಬೇಕು ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಪ್ರತ್ಯೇಕವಾಗಿ ಪ್ರಯೋಗಾಲಯದ ಶುಲ್ಕವನ್ನು ವಸೂಲಿ ಮಾಡಬಾರದು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಎಸ್ಎಫ್ಐ ಸಂಘಟನೆಯ ಮಾಜಿ ರಾಜ್ಯ ಅಧ್ಯಕ್ಷ ವಿ.ಅಂಬರೀಷ್ ಮಾತನಾಡಿ ವಿಶ್ವವಿದ್ಯಾಲಯವು ಕೆಲವು ಬ್ರೋಕರ್ ಗಳಿಂದ ಕೂಡಿದ್ದು ಶೈಕ್ಷಣಿಕ ವ್ಯವಸ್ಥೆಯನ್ನು ನಾಶ ಮಾಡಿದ್ದಾರೆ ಇದಕ್ಕೆ ಜನಪ್ರತಿನಿಧಿಗಳ ಅಧಿಕಾರಿ ವರ್ಗ ಶಾಮೀಲಾಗಿದ್ದಾರೆ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಬೆಳವಣಿಗೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡದೇ ಶಿಕ್ಷಣದಿಂದ ವಂಚಿತರಾಗಿ ಮಾಡಿದ್ದಾರೆ ಎಂದು ಆರೋಪಿಸಿದರು

ಪ್ರತಿಭಟನೆಯ ನೇತೃತ್ವವನ್ನು ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ವಿ.ಸುರೇಶ್‌ಬಾಬು ಜಿಲ್ಲಾ ಉಪಾಧ್ಯಕ್ಷರಾದ ಶಶಿಕುಮಾ‌ರ್, ಸುದರ್ಶನ್, ಲಾವಣ್ಯ, ಜಿಲ್ಲಾ ಸಹ ಕಾರ್ಯದರ್ಶಿ ಹರ್ಷಿತ ಮುಖಂಡರಾದ ತಿಮ್ಮರಾಜು, ಅಮೃತ, ಬಾಷ, ಪವಣ್, ಪ್ರಿಯಾಂಕ ಸೇರಿದಂತೆ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ವಹಿಸಿದ್ದರು

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

8 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

8 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

9 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

14 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

20 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago