Categories: ಕೋಲಾರ

ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕ ಪಟ್ಟಿ ವಿತರಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಒತ್ತಾಯ

ಇಂದು ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಶ್ರೀನಿವಾಸಪುರ ತಾಲ್ಲೂಕು ಸಮಿತಿ ವತಿಯಿಂದ 2020ರಲ್ಲಿ NEP ಜಾರಿಯಾದ ನಂತರ ಇಲ್ಲಿಯವರೆಗೂ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕ ಪಟ್ಟಿಗಳನ್ನು ವಿತರಿಸಿರುವುದಿಲ್ಲ. ಕೂಡಲೇ ಅಂಕ ಪಟ್ಟಿಗಳನ್ನು ವಿತರಿಸುವಂತೆ ಒತ್ತಾಯಿಸಿ ಶ್ರೀನಿವಾಸಪುರ

ತಾಲ್ಲೂಕು ದಂಡಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿಯಾದ ಸುರೇಶ್ ಬಾಬು ಮಾತಾಡಿ,
ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್.ಎಫ್.ಐ) ಜಿಲ್ಲಾ ಸಮಿತಿ ಈ ಮೂಲಕ ತಮ್ಮಲ್ಲಿ ಒತ್ತಾಯಿಸುವುದೇನಂದರೆ ,
ರಾಜ್ಯದಲ್ಲಿ NEP 2020 ಜಾರಿಯಾದ ನಂತರ ಸುಮಾರು 22 ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳು ಸುಮಾರು 51 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಂಕಪಟ್ಟಿ ವಿತರಣೆ ಮಾಡಿರುವುದಿಲ್ಲ. ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯದಲ್ಲಿ NEP ರದ್ದುಗೊಳಿಸಿ SEP ಜಾರಿಗೋಳಿಸಿದೆ. ಆದರೆ, SEP ವಿದ್ಯಾರ್ಥಿಗಳಿಗೂ ಸಹ ಅಂಕಪಟ್ಟಿ ಸಿಗುತ್ತಿಲ್ಲ. ಉನ್ನತ ವಿದ್ಯಾಭ್ಯಾಸಕ್ಕೆ ಅಂಕ ಪಟ್ಟಿ ಬೇಕಾಗಿರುವ ಕಾರಣ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳ ಹತ್ತಿರ ಹೋಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ವಿಶ್ವವಿದ್ಯಾನಿಲಯದ ಬಳಿ ವಿದ್ಯಾರ್ಥಿಗಳು ಅಂಕಪಟ್ಟಿ ಕೇಳಿಕೊಂಡು ಹೋದರೆ ಡಿಜಿ ಲಾಕರ್ ( Digi Locker ) ನಲ್ಲಿ ಅಂಕಪಟ್ಟಿ ತೆಗೆದುಕೊಳ್ಳಿ ಎಂದು ತಿಳಿಸುತ್ತಿದ್ದಾರೆ‌. ಆದರೆ, ಡಿಜಿಲಾಕರ್ ನಲ್ಲಿಯೂ ಸಹ ಅಂಕಪಟ್ಟಿ ಸಿಗುತ್ತಿಲ್ಲ. ವಿದ್ಯಾರ್ಥಿಗಳು ಕೇಳಿದರೆ ತಾಂತ್ರಿಕ ಸಮಸ್ಯೆ ಇದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸುತ್ತಾರೆ. ಈ ಸಮಸ್ಯೆ UCCMS ಜಾರಿಗೆ ಬಂದ ದಿನದಿಂದ ಇದೆ ಸಮಸ್ಯೆ ಉಂಟಾಗುತ್ತಿದೆ ಇದರಿಂದ ಉನ್ನತ ವಿದ್ಯಾಭ್ಯಾಸಕ್ಕೆ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಸ್ಯೆ ಉಂಟಾಗುತ್ತಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತು ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಸಹ ತೊಂದರೆ ಉಂಟಾಗುತ್ತಿದೆ ಎಂದರು.

ನಂತರ ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷರಾದ ಉದಯ್ ಕುಮಾರ್ ಮಾತಾಡಿ. NEP ಯಲ್ಲಿ ಆನ್ಲೈನ್ ಅಂಕಪಟ್ಟಿ ಜೊತೆಗೆ ಮುದ್ರಿತಾ ಅಂಕಪಟ್ಟಿ ನೀಡಬೇಕೆಂದು ಇದೆ. ಅದಲ್ಲದೆ ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು 22-12-2022 ರಂದು ಎಲ್ಲಾ ವಿಶ್ವವಿದ್ಯಾನಿಲಯಗಳು ಮುದ್ರಿತಾ ಅಂಕಪಟ್ಟಿ ವಿತರಿಸಬೇಕೆಂದು ಆದೇಶ ನೀಡಿದ್ದರು ಸಹ ವಿಶ್ವವಿದ್ಯಾನಿಲಯಗಳು ಪಾಲಿಸುತ್ತಿಲ್ಲ. ಆದರಿಂದ, ತಕ್ಷಣ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ಅಂಕಪಟ್ಟಿ ವಿತರಣೆ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಈ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡುತ್ತೇವೆ. ಜೊತೆಗೆ ಅಂಕಪಟ್ಟಿ ವಿತರಣೆಯಲ್ಲಿ ಸುಮಾರು 200 ಕೋಟಿ ಹಣ ದುರ್ಬಳಕೆ ಆಗಿರುವುದು ಮೇಲ್ನೋಟಕ್ಕೆ ಕಾಣುತ್ತದೆ. ಆದರಿಂದ ಅಂಕ ಪಟ್ಟಿ ವಿತರಣೆಗೆ ಸಂಬಂದಿಸಿದಂತೆ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ( SFI) ಒತ್ತಾಯ ಮಾಡುತ್ತದೆ ಎಂದರು.

ಹಾಕ್ಕೋತ್ತಾಯ

1) 51 ಲಕ್ಷ ವಿದ್ಯಾರ್ಥಿಗಳಿಗೆ ತಕ್ಷಣ ಮುದ್ರಿತಾ ಅಂಕಪಟ್ಟಿ ವಿತರಿಸಬೇಕು.
2) ಯು ಸಿ ಸಿ ಎಂ ಎಸ್ ( UCCMS) ರದ್ದುಗೊಳಿಸಬೇಕು.
3) ಅಂಕಪಟ್ಟಿ ವಿತರಣೆಯಲ್ಲಿ ಹಣ ದುರ್ಬಳಕೆ ಆಗಿದೆ ಆದರಿಂದ ಉನ್ನತ ಮಟ್ಟದ ತನಿಖೆಯಾಗಬೇಕು.
4) ನಿಗದಿತ ಸಮಯದಲ್ಲಿ ಫಲಿತಾಂಶ ಕೊಡಬೇಕು.
5) ಪದವಿ ಮುಗಿಸಿ ಮುಂದಿನ ಬಿ ಎಡ್ ವಿದ್ಯಾಭ್ಯಾಸ ಕ್ಕೆ ಅಂಕಪಟ್ಟಿ ಮೇಲೆ ಕುಲ ಸಚಿವರ ಸಹಿ ಮತ್ತು ಮೊಹರು ಅವಶ್ಯ ಅದಕ್ಕೆ ವಿಜಾಪುರ ವಿವಿ ಅವರು ವಿದ್ಯಾರ್ಥಿಗಳಿಗೆ ಸರಿಯಾಗಿ ಸ್ಪಂದನೆ ಮಾಡವುದಿಲ್ಲ. ಬೆಳೆಗ್ಗೆ ರಾತ್ರಿ ವರೆಗೂ ಕಾಯುವ ಸ್ಥಿತಿ ಇದೆ. ಕೊಡಲೇ ವಿದ್ಯಾರ್ಥಿಗಳಿಗೆ ಸಹಿ ಕಲಳಿಸಬೇಕು.

ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲ್ಲೂಕು ಕಾರ್ಯದರ್ಶಿ ಶ್ರೀಹರಿ, ತಾಲ್ಲೂಕು ಸಹ ಕಾರ್ಯದರ್ಶಿ ನವೀನ್,
ರಾಜು, ಪ್ರವೀಣ್, ಗಗನ ಶ್ರೀ, ಪುನೀತ್, ಅಧಿಕೇಶವ, ಭಾರ್ಗವ್, ಅರ್ಚನಾ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

4 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

4 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

4 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

9 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

15 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

15 hours ago