ಆಕೆ ಗಂಡನ ಜೊತೆಯಲ್ಲಿ ಶುಭ ಕಾರ್ಯಕ್ಕೆ ಎಂದು ತಮಿಳುನಾಡಿನಿಂದ ಬಂದಿದ್ದಾಳೆ. ಗಂಡನ ಸ್ನೇಹಿತರ ಮನೆಗೆ ಹೋಗಿ ರೆಡಿ ಹಾಗಿ ಶುಭ ಕಾರ್ಯಕ್ಕೆ ಹೋಗಬೇಕು ಎಂದು ಸ್ನಾನದ ಗೃಹಕ್ಕೆ ಹೋದವಳು ಈಚೆ ಬಂದಿದ್ದು ಮಾತ್ರ ಹೆಣವಾಗಿ. ಅಷ್ಟಕ್ಕೂ ಆ ಮಹಿಳೆ ಸಾವನಪ್ಪಿದ್ದು ಯಾಕೆ ಅಂತಿರಾ ಈ ಸ್ಟೋರಿ ನೋಡಿ……
ಸಾವನ್ನಪ್ಪಿರುವ ಮಹಿಳೆಯ ಹೆಸರು ಲಕ್ಷ್ಮೀ.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಡೇಪೇಟೆಯಲ್ಲಿ ನಿನ್ನೆ ಸಾವನಪ್ಪಿದ್ದಾಳೆ. ತಿರುಪತಿಯಿಂದ ಮಲ್ಲೇಶ್ವರಂ ನಲ್ಲಿ ಕಾರ್ಯಕ್ರಮ ನಿಮಿತ್ತ ಸಂಬಂಧಿಕರ ಮನೆಗೆ ಬಂದಿದ್ದಾಳೆ. ಈ ವೇಳೆಯಲ್ಲಿ ಸ್ನಾನಕ್ಕೆ ಎಂದು ಸ್ನಾನಗೃಹದಲ್ಲಿ ಹೆಣವಾಗಿ ಬಿದ್ದಿದ್ದಾಳೆ. ಆದರೆ, ಸ್ನಾನಕ್ಕೆ ಹೋಗುವ ವೇಳೆ ಆಕೆಯ ಮುಖದಲ್ಲಿ ಯಾವುದೇ ರೀತಿಯ ಗಾಯಗಳು ಇರುವುದಿಲ್ಲ. ಆದರೆ ಸ್ನಾನ ಗೃಹದಲ್ಲಿ ಬಿದ್ದಿದಾಗ ಆಕೆಯ ಮುಖದ ಮೇಲೆ ಗಾಯಗಳಾಗಿದ್ದವು. ಆಕೆಯ ಮುಖದ ಮೇಲೆ ಗಾಯಗಳು ಹೇಗಾದವು ಎಂಬುದೇ ಗಂಡನ ಅನುಮಾನವಾಗಿದೆ.
ಇನ್ನೂ ಸ್ಥಳಕ್ಕೆ ನೆಲಮಂಗಲ ನಗರ ಪೊಲೀಸರು ಭೇಟಿ ನೀಡಿ, ಪ್ರಾಥಮಿಕ ತನಿಖೆಯನ್ನು ಮಾಡುತ್ತಿದ್ದಾರೆ. ತನಿಖೆಯ ವೇಳೆ ಗೀಸರ್ ಆನ್ ಆಗಿಲ್ಲ, ಬಕೆಟ್ ನಲ್ಲಿ ನೀರು ಇರಲಿಲ್ಲ ಎಂದು ಮೃತ ಲಕ್ಷ್ಮೀಯ ಗಂಡ ಪೊಲೀಸರಿಗೆ ಮಾಹಿತಿ ನೀಡಿದ ಎನ್ನಲಾಗಿದೆ.
ಹೀಗಾಗಿ ಮನೆಯ ಮಾಲೀಕರ ಜೊತೆಗೆ ಗಂಡನ ಹೇಳಿಕೆಯನ್ನು ಪಡೆದು ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದಾರೆ.
ಇನ್ನೂ ನೆಲಮಂಗಲದ ಶವಾಗಾರದಲ್ಲಿ ಶವಪರೀಕ್ಷೆ ಆಗಿದ್ದು, ಮೃತಳ ಗಂಡನ ಸ್ವಗ್ರಾಮದಲ್ಲಿ ಮಹಿಳೆ ಅಂತಿಮ ಶವಸಂಸ್ಕಾರ ಮಾಡಲಾಗಿದೆ.
ಒಟ್ಟಾರೆ, ಶುಭ ಕಾರ್ಯಕ್ಕೆ ಹೋಗಬೇಕು ಎಂದು ಬಂದವಳು ಹೆಣವಾಗಿ ಸ್ವಾಗ್ರಾಮಕ್ಕೆ ವಾಪಸ್ ಆಗಿದ್ದಾಳೆ. ಆದರೆ, ಆಕೆಯ ಸಾವು ಮಾತ್ರ ನಿಗೂಢವಾಗಿದೆ. ಮಹಿಳೆಯ ಸಾವಿಗೆ ಸೂಕ್ತ ಕಾರಣ ಪೊಲೀಸರ ತನಿಖೆಯಿಂದಲೇ ಹೊರಬರಬೇಕಿದೆ…
ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…
ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…
ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…
ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ,…
ಇಂದು ಬೆಂಗಳೂರಿನ ಎಸ್ಪಿ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ವಹಿಸಿಕೊಂಡಿದ್ದಾರೆ.... ಬೆಂಗಳೂರು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಶವ ಪತ್ತೆಯಾಗಿದೆ... ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ....…