Categories: Home

ಸ್ನಾನ ಗೃಹದಲ್ಲಿ ಮಹಿಳೆ ಅನುಮಾನಾಸ್ಪದ ಸಾವು: ತೆಲುಗಿನ ಅವುನು ಹಾರರ್ ಫಿಲ್ಮ್ ರೀತಿಯಲ್ಲಿ ಮಹಿಳೆ ಡೆತ್

ಆಕೆ ಗಂಡನ ಜೊತೆಯಲ್ಲಿ ಶುಭ ಕಾರ್ಯಕ್ಕೆ ಎಂದು ತಮಿಳುನಾಡಿನಿಂದ ಬಂದಿದ್ದಾಳೆ. ಗಂಡನ ಸ್ನೇಹಿತರ ಮನೆಗೆ ಹೋಗಿ ರೆಡಿ ಹಾಗಿ ಶುಭ ಕಾರ್ಯಕ್ಕೆ ಹೋಗಬೇಕು ಎಂದು ಸ್ನಾನದ ಗೃಹಕ್ಕೆ ಹೋದವಳು ಈಚೆ ಬಂದಿದ್ದು ಮಾತ್ರ ಹೆಣವಾಗಿ.‌ ಅಷ್ಟಕ್ಕೂ ಆ ಮಹಿಳೆ ಸಾವನಪ್ಪಿದ್ದು ಯಾಕೆ ಅಂತಿರಾ ಈ ಸ್ಟೋರಿ ನೋಡಿ……

ಸಾವನ್ನಪ್ಪಿರುವ ಮಹಿಳೆಯ ಹೆಸರು ಲಕ್ಷ್ಮೀ.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಡೇಪೇಟೆಯಲ್ಲಿ ನಿನ್ನೆ ಸಾವನಪ್ಪಿದ್ದಾಳೆ. ತಿರುಪತಿಯಿಂದ ಮಲ್ಲೇಶ್ವರಂ ನಲ್ಲಿ ಕಾರ್ಯಕ್ರಮ ನಿಮಿತ್ತ ಸಂಬಂಧಿಕರ ಮನೆಗೆ ಬಂದಿದ್ದಾಳೆ. ಈ ವೇಳೆಯಲ್ಲಿ ಸ್ನಾನಕ್ಕೆ ಎಂದು ಸ್ನಾನಗೃಹದಲ್ಲಿ ಹೆಣವಾಗಿ ಬಿದ್ದಿದ್ದಾಳೆ. ಆದರೆ, ಸ್ನಾನಕ್ಕೆ ಹೋಗುವ ವೇಳೆ ಆಕೆಯ ಮುಖದಲ್ಲಿ ಯಾವುದೇ ರೀತಿಯ ಗಾಯಗಳು ಇರುವುದಿಲ್ಲ. ಆದರೆ ಸ್ನಾನ ಗೃಹದಲ್ಲಿ ಬಿದ್ದಿದಾಗ ಆಕೆಯ ಮುಖದ ಮೇಲೆ  ಗಾಯಗಳಾಗಿದ್ದವು. ಆಕೆಯ ಮುಖದ ಮೇಲೆ ಗಾಯಗಳು ಹೇಗಾದವು ಎಂಬುದೇ ಗಂಡನ ಅನುಮಾನವಾಗಿದೆ.

ಇನ್ನೂ ಸ್ಥಳಕ್ಕೆ ನೆಲಮಂಗಲ ನಗರ ಪೊಲೀಸರು ಭೇಟಿ ನೀಡಿ, ಪ್ರಾಥಮಿಕ ತನಿಖೆಯನ್ನು ಮಾಡುತ್ತಿದ್ದಾರೆ.  ತನಿಖೆಯ ವೇಳೆ ಗೀಸರ್ ಆನ್ ಆಗಿಲ್ಲ, ಬಕೆಟ್ ನಲ್ಲಿ ನೀರು ಇರಲಿಲ್ಲ ಎಂದು ಮೃತ ಲಕ್ಷ್ಮೀಯ ಗಂಡ ಪೊಲೀಸರಿಗೆ ಮಾಹಿತಿ ನೀಡಿದ ಎನ್ನಲಾಗಿದೆ.

ಹೀಗಾಗಿ ಮನೆಯ ಮಾಲೀಕರ ಜೊತೆಗೆ ಗಂಡನ ಹೇಳಿಕೆಯನ್ನು ಪಡೆದು ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದಾರೆ.

ಇನ್ನೂ ನೆಲಮಂಗಲದ ಶವಾಗಾರದಲ್ಲಿ ಶವಪರೀಕ್ಷೆ ಆಗಿದ್ದು, ಮೃತಳ ಗಂಡನ ಸ್ವಗ್ರಾಮದಲ್ಲಿ ಮಹಿಳೆ ಅಂತಿಮ ಶವಸಂಸ್ಕಾರ ಮಾಡಲಾಗಿದೆ.

ಒಟ್ಟಾರೆ, ಶುಭ ಕಾರ್ಯಕ್ಕೆ ಹೋಗಬೇಕು ಎಂದು ಬಂದವಳು ಹೆಣವಾಗಿ ಸ್ವಾಗ್ರಾಮಕ್ಕೆ ವಾಪಸ್ ಆಗಿದ್ದಾಳೆ. ಆದರೆ, ಆಕೆಯ ಸಾವು ಮಾತ್ರ ನಿಗೂಢವಾಗಿದೆ. ಮಹಿಳೆಯ ಸಾವಿಗೆ ಸೂಕ್ತ ಕಾರಣ ಪೊಲೀಸರ ತನಿಖೆಯಿಂದಲೇ ಹೊರಬರಬೇಕಿದೆ…

Ramesh Babu

Journalist

Recent Posts

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

3 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

3 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

3 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

12 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

14 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

1 day ago