ಸ್ನೇಹ… ಪ್ರೀತಿ… ಅತ್ಯಾಚಾರ… ದೋಖಾ…ಆರೋಪ! ಲೈಂಗಿಕ ಸಂಪರ್ಕಕ್ಕೆ ಅಡ್ಡಿಯಾಗದ ಜಾತಿ, ಮದುವೆಗೆ ಅಡ್ಡಿ: ಅತ್ಯಾಚಾರ ಹಾಗೂ ಜಾತಿ ನಿಂದನೆ ದೂರು ನೀಡಿ, ನ್ಯಾಯ ಕೊಡಿಸಿ ಎಂದು ಪೊಲೀಸರ ಮೊರೆ ಹೋದ ಯುವತಿ

ಮೊಬೈಲ್ ಬಳಸುವ ಯುವತಿಯರೇ ಎಚ್ಚರ… ಎಚ್ಚರ… ಅದರಲ್ಲೂ ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಯುವಕರ ಸ್ನೇಹ ಬೆಳೆಸುವ ಮುನ್ನ ‘ಬಿ ಕೇರ್ ಫುಲ್’ ಏಕೆಂದರೆ, ಹೀಗೆ… ಯುವತಿಗೆ ಇಂಸ್ಟ್ರಾಗ್ರಾಮ್ ನಲ್ಲಿ ಯುವಕನೋರ್ವ ಪರಿಚಯವಾಗುತ್ತಾನೆ.. ನಂತರ ಸೊಂಡೆಕೊಪ್ಪದಲ್ಲಿ ಯುವತಿ ದಿನಸಿ ಸಾಮಗ್ರಿ ತರಲು ಬಂದಿರುತ್ತಾಳೆ. ಅದೇ ಸಮಯದಲ್ಲಿ ಈ ಯುವಕನೂ ಬಂದು ಯುವತಿ ಬಳಿ ಮೊಬೈಲ್ ನಂಬರ್ ಪಡೆದು ಫೋನ್ ಕಾಲ್, ಮೆಸೇಜ್ ಮಾಡಲು ಶುರು ಮಾಡುತ್ತಾನೆ. ಚಿನ್ನಾ, ರನ್ನ, ಬಂಗಾರದ ಮಾತಿಗೆ ಮರುಳಾದ ಯುವತಿಗೆ ನಿರಂತರ  ಅತ್ಯಾಚಾರವೆಸಗಿ ಜಾತಿ ನೆಪವೊಡ್ಡಿ ಮದುವೆಯಾಗದೇ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ…

ಯುವತಿಗೆ ವಂಚನೆ ಮಾಡಿರುವ ಯುವನ ಹೆಸರು ಶ್ರೀಕಾಂತ್.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾವರೆಕೆರೆ ಸಮೀಪದ ಹೊಸಪಾಳ್ಯ ಗ್ರಾಮದವನು. ಚಿನ್ನ ರನ್ನ, ಮುದ್ದು ಎಂದು ಮಾತಾಡಿ, ಯುವತಿಗೆ ಮದುವೆ ಆಗುತ್ತೇನೆ ಎಂದು ನಂಬಿಸಿ, ಆಗಾಗ ಲಾಡ್ಜ್ ಗಳಿಗೆ ಕರೆದುಕೊಂಡು ಬಂದು ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಆದರೆ, ಇದೀಗ ದೈಹಿಕ ಸಂಕರ್ಪಕಕ್ಕೆ ಅಡ್ಡಿಬಾರದ ಜಾತಿ, ಮದುವೆ ಆಗಲು ಅಡ್ಡಿ ಬಂದಿದೆ. ನೀನು ಕೆಳ ಜಾತಿಯವಳು, ನಾನು ಮದುವೆ ಆಗಲ್ಲ ಎಂದು ನಿರಾಕರಿಸಿದ್ದಾನೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ…

ಇನ್ನೂ, ಯುವತಿ ನ್ಯಾಯ ಬೇಡಿ ನೆಲಮಂಗಲ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಈ ವೇಳೆ ಯುವತಿ ಪೋಷಕರು, ಪೊಲೀಸ್ ಅಧಿಕಾರಿಗಳು ಯುವತಿಯನ್ನು ಮದುವೆ ಆಗುವಂತೆ ಯುವಕನಿಗೆ ಹೇಳಿದ್ದಾರೆ. ಆದರೆ, ಯುವಕ ನಾನು ಜೈಲಿಗೆ ಹೋದರೂ ಪರವಾಗಿಲ್ಲ ಮದುವೆ ಆಗುವುದಿಲ್ಲ ಎಂದು ಪಟ್ಟು ಹಿಡಿದ್ದಾನೆ ಎನ್ನಲಾಗಿದೆ.

ಅನೇಕ ಬಾರಿ ಯುವತಿಯನ್ನು ಬಳಕೆ ಮಾಡಿಕೊಂಡು, ಗರ್ಭಪಾತ ಕೂಡ ಮಾಡಿಸಿದ್ದಾನೆ ಎಂದು ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಕೊನೆಗೆ ಮದುವೆ ಆಗಲು ಯುವಕ ಒಪ್ಪದ ಕಾರಣ ಯುವತಿ ಅತ್ಯಾಚಾರ ಮತ್ತು ಜಾತಿ ನಿಂದನೆಯ ದೂರು ನೀಡಿದ್ದಾಳೆ. ಹಾಗಾಗಿ ನೆಲಮಂಗಲ ನಗರ ಪೊಲೀಸರು ಯುವಕನ್ನು ವಶಕ್ಕೆ ಪಡೆದು, ಯುವಕ  ಹೋಗಿ ಬರುತ್ತಿದ್ದ ಲಾಡ್ಜ್ ಗಳ ಸ್ಥಳ ಮಹಜರು ಮಾಡಿದ್ದಾರೆ.

ಒಟ್ಟಾರೆ ಯುವಕನನ್ನ ನಂಬಿ ಮೋಸ ಹೋದ ಯುವತಿ ದಿಕ್ಕು ತೋಚದಂತೆ ಆಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಆಗಿ ಪ್ರೀತಿ ಪ್ರೇಮ ಎಂದು ಜೀವನ ಹಾಳು ಮಾಡಿಕೊಳ್ಳುವ ಮೊದಲು ಎಚ್ಚರಿಕೆಯಿಂದ ಇರಬೇಕಾಗಿದ ಅನಿವಾರ್ಯತೆ ಯುವತಿಯರಿಗೆ ಇದೆ.

Ramesh Babu

Journalist

View Comments

  • ಇಂತಹ ಕಚಡಾ *** ಮಕ್ಕಳು ಇರುವ ತನಕ ಜಾತಿ ವ್ಯವಸ್ಥೆ ದೂರವಾಗಲ್ಲ
    ಇವನಿಗೆ ತಕ್ಕ ಶಿಕ್ಷೆ ಆಗಬೇಕು.
    ಹೆಣ್ಣುಮಕ್ಕಳು ಅಷ್ಟೇ ಬೇಗ ಏಕೆ ಧ್ಯಹಿಕ ಸಂಪರ್ಕ ಬೆಳಸಬೇಕು ಇವರುದು ತಪ್ಪಿದೆ ಅದಕ್ಕೆ ಅನುಭವಿಸಲಿ

Recent Posts

ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…

57 minutes ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ- ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

15 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

16 hours ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

18 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

22 hours ago