ಸ್ನೇಹ… ಪ್ರೀತಿ… ಅತ್ಯಾಚಾರ… ದೋಖಾ…ಆರೋಪ! ಲೈಂಗಿಕ ಸಂಪರ್ಕಕ್ಕೆ ಅಡ್ಡಿಯಾಗದ ಜಾತಿ, ಮದುವೆಗೆ ಅಡ್ಡಿ: ಅತ್ಯಾಚಾರ ಹಾಗೂ ಜಾತಿ ನಿಂದನೆ ದೂರು ನೀಡಿ, ನ್ಯಾಯ ಕೊಡಿಸಿ ಎಂದು ಪೊಲೀಸರ ಮೊರೆ ಹೋದ ಯುವತಿ

ಮೊಬೈಲ್ ಬಳಸುವ ಯುವತಿಯರೇ ಎಚ್ಚರ… ಎಚ್ಚರ… ಅದರಲ್ಲೂ ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಯುವಕರ ಸ್ನೇಹ ಬೆಳೆಸುವ ಮುನ್ನ ‘ಬಿ ಕೇರ್ ಫುಲ್’ ಏಕೆಂದರೆ, ಹೀಗೆ… ಯುವತಿಗೆ ಇಂಸ್ಟ್ರಾಗ್ರಾಮ್ ನಲ್ಲಿ ಯುವಕನೋರ್ವ ಪರಿಚಯವಾಗುತ್ತಾನೆ.. ನಂತರ ಸೊಂಡೆಕೊಪ್ಪದಲ್ಲಿ ಯುವತಿ ದಿನಸಿ ಸಾಮಗ್ರಿ ತರಲು ಬಂದಿರುತ್ತಾಳೆ. ಅದೇ ಸಮಯದಲ್ಲಿ ಈ ಯುವಕನೂ ಬಂದು ಯುವತಿ ಬಳಿ ಮೊಬೈಲ್ ನಂಬರ್ ಪಡೆದು ಫೋನ್ ಕಾಲ್, ಮೆಸೇಜ್ ಮಾಡಲು ಶುರು ಮಾಡುತ್ತಾನೆ. ಚಿನ್ನಾ, ರನ್ನ, ಬಂಗಾರದ ಮಾತಿಗೆ ಮರುಳಾದ ಯುವತಿಗೆ ನಿರಂತರ  ಅತ್ಯಾಚಾರವೆಸಗಿ ಜಾತಿ ನೆಪವೊಡ್ಡಿ ಮದುವೆಯಾಗದೇ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ…

ಯುವತಿಗೆ ವಂಚನೆ ಮಾಡಿರುವ ಯುವನ ಹೆಸರು ಶ್ರೀಕಾಂತ್.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾವರೆಕೆರೆ ಸಮೀಪದ ಹೊಸಪಾಳ್ಯ ಗ್ರಾಮದವನು. ಚಿನ್ನ ರನ್ನ, ಮುದ್ದು ಎಂದು ಮಾತಾಡಿ, ಯುವತಿಗೆ ಮದುವೆ ಆಗುತ್ತೇನೆ ಎಂದು ನಂಬಿಸಿ, ಆಗಾಗ ಲಾಡ್ಜ್ ಗಳಿಗೆ ಕರೆದುಕೊಂಡು ಬಂದು ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಆದರೆ, ಇದೀಗ ದೈಹಿಕ ಸಂಕರ್ಪಕಕ್ಕೆ ಅಡ್ಡಿಬಾರದ ಜಾತಿ, ಮದುವೆ ಆಗಲು ಅಡ್ಡಿ ಬಂದಿದೆ. ನೀನು ಕೆಳ ಜಾತಿಯವಳು, ನಾನು ಮದುವೆ ಆಗಲ್ಲ ಎಂದು ನಿರಾಕರಿಸಿದ್ದಾನೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ…

ಇನ್ನೂ, ಯುವತಿ ನ್ಯಾಯ ಬೇಡಿ ನೆಲಮಂಗಲ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಈ ವೇಳೆ ಯುವತಿ ಪೋಷಕರು, ಪೊಲೀಸ್ ಅಧಿಕಾರಿಗಳು ಯುವತಿಯನ್ನು ಮದುವೆ ಆಗುವಂತೆ ಯುವಕನಿಗೆ ಹೇಳಿದ್ದಾರೆ. ಆದರೆ, ಯುವಕ ನಾನು ಜೈಲಿಗೆ ಹೋದರೂ ಪರವಾಗಿಲ್ಲ ಮದುವೆ ಆಗುವುದಿಲ್ಲ ಎಂದು ಪಟ್ಟು ಹಿಡಿದ್ದಾನೆ ಎನ್ನಲಾಗಿದೆ.

ಅನೇಕ ಬಾರಿ ಯುವತಿಯನ್ನು ಬಳಕೆ ಮಾಡಿಕೊಂಡು, ಗರ್ಭಪಾತ ಕೂಡ ಮಾಡಿಸಿದ್ದಾನೆ ಎಂದು ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಕೊನೆಗೆ ಮದುವೆ ಆಗಲು ಯುವಕ ಒಪ್ಪದ ಕಾರಣ ಯುವತಿ ಅತ್ಯಾಚಾರ ಮತ್ತು ಜಾತಿ ನಿಂದನೆಯ ದೂರು ನೀಡಿದ್ದಾಳೆ. ಹಾಗಾಗಿ ನೆಲಮಂಗಲ ನಗರ ಪೊಲೀಸರು ಯುವಕನ್ನು ವಶಕ್ಕೆ ಪಡೆದು, ಯುವಕ  ಹೋಗಿ ಬರುತ್ತಿದ್ದ ಲಾಡ್ಜ್ ಗಳ ಸ್ಥಳ ಮಹಜರು ಮಾಡಿದ್ದಾರೆ.

ಒಟ್ಟಾರೆ ಯುವಕನನ್ನ ನಂಬಿ ಮೋಸ ಹೋದ ಯುವತಿ ದಿಕ್ಕು ತೋಚದಂತೆ ಆಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಆಗಿ ಪ್ರೀತಿ ಪ್ರೇಮ ಎಂದು ಜೀವನ ಹಾಳು ಮಾಡಿಕೊಳ್ಳುವ ಮೊದಲು ಎಚ್ಚರಿಕೆಯಿಂದ ಇರಬೇಕಾಗಿದ ಅನಿವಾರ್ಯತೆ ಯುವತಿಯರಿಗೆ ಇದೆ.

Ramesh Babu

Journalist

View Comments

  • ಇಂತಹ ಕಚಡಾ *** ಮಕ್ಕಳು ಇರುವ ತನಕ ಜಾತಿ ವ್ಯವಸ್ಥೆ ದೂರವಾಗಲ್ಲ
    ಇವನಿಗೆ ತಕ್ಕ ಶಿಕ್ಷೆ ಆಗಬೇಕು.
    ಹೆಣ್ಣುಮಕ್ಕಳು ಅಷ್ಟೇ ಬೇಗ ಏಕೆ ಧ್ಯಹಿಕ ಸಂಪರ್ಕ ಬೆಳಸಬೇಕು ಇವರುದು ತಪ್ಪಿದೆ ಅದಕ್ಕೆ ಅನುಭವಿಸಲಿ

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

6 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

12 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

13 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago