ಸ್ನೇಹ… ಪ್ರೀತಿ… ಅತ್ಯಾಚಾರ… ದೋಖಾ…ಆರೋಪ! ಲೈಂಗಿಕ ಸಂಪರ್ಕಕ್ಕೆ ಅಡ್ಡಿಯಾಗದ ಜಾತಿ, ಮದುವೆಗೆ ಅಡ್ಡಿ: ಅತ್ಯಾಚಾರ ಹಾಗೂ ಜಾತಿ ನಿಂದನೆ ದೂರು ನೀಡಿ, ನ್ಯಾಯ ಕೊಡಿಸಿ ಎಂದು ಪೊಲೀಸರ ಮೊರೆ ಹೋದ ಯುವತಿ

ಮೊಬೈಲ್ ಬಳಸುವ ಯುವತಿಯರೇ ಎಚ್ಚರ… ಎಚ್ಚರ… ಅದರಲ್ಲೂ ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಯುವಕರ ಸ್ನೇಹ ಬೆಳೆಸುವ ಮುನ್ನ ‘ಬಿ ಕೇರ್ ಫುಲ್’ ಏಕೆಂದರೆ, ಹೀಗೆ… ಯುವತಿಗೆ ಇಂಸ್ಟ್ರಾಗ್ರಾಮ್ ನಲ್ಲಿ ಯುವಕನೋರ್ವ ಪರಿಚಯವಾಗುತ್ತಾನೆ.. ನಂತರ ಸೊಂಡೆಕೊಪ್ಪದಲ್ಲಿ ಯುವತಿ ದಿನಸಿ ಸಾಮಗ್ರಿ ತರಲು ಬಂದಿರುತ್ತಾಳೆ. ಅದೇ ಸಮಯದಲ್ಲಿ ಈ ಯುವಕನೂ ಬಂದು ಯುವತಿ ಬಳಿ ಮೊಬೈಲ್ ನಂಬರ್ ಪಡೆದು ಫೋನ್ ಕಾಲ್, ಮೆಸೇಜ್ ಮಾಡಲು ಶುರು ಮಾಡುತ್ತಾನೆ. ಚಿನ್ನಾ, ರನ್ನ, ಬಂಗಾರದ ಮಾತಿಗೆ ಮರುಳಾದ ಯುವತಿಗೆ ನಿರಂತರ  ಅತ್ಯಾಚಾರವೆಸಗಿ ಜಾತಿ ನೆಪವೊಡ್ಡಿ ಮದುವೆಯಾಗದೇ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ…

ಯುವತಿಗೆ ವಂಚನೆ ಮಾಡಿರುವ ಯುವನ ಹೆಸರು ಶ್ರೀಕಾಂತ್.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾವರೆಕೆರೆ ಸಮೀಪದ ಹೊಸಪಾಳ್ಯ ಗ್ರಾಮದವನು. ಚಿನ್ನ ರನ್ನ, ಮುದ್ದು ಎಂದು ಮಾತಾಡಿ, ಯುವತಿಗೆ ಮದುವೆ ಆಗುತ್ತೇನೆ ಎಂದು ನಂಬಿಸಿ, ಆಗಾಗ ಲಾಡ್ಜ್ ಗಳಿಗೆ ಕರೆದುಕೊಂಡು ಬಂದು ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಆದರೆ, ಇದೀಗ ದೈಹಿಕ ಸಂಕರ್ಪಕಕ್ಕೆ ಅಡ್ಡಿಬಾರದ ಜಾತಿ, ಮದುವೆ ಆಗಲು ಅಡ್ಡಿ ಬಂದಿದೆ. ನೀನು ಕೆಳ ಜಾತಿಯವಳು, ನಾನು ಮದುವೆ ಆಗಲ್ಲ ಎಂದು ನಿರಾಕರಿಸಿದ್ದಾನೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ…

ಇನ್ನೂ, ಯುವತಿ ನ್ಯಾಯ ಬೇಡಿ ನೆಲಮಂಗಲ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಈ ವೇಳೆ ಯುವತಿ ಪೋಷಕರು, ಪೊಲೀಸ್ ಅಧಿಕಾರಿಗಳು ಯುವತಿಯನ್ನು ಮದುವೆ ಆಗುವಂತೆ ಯುವಕನಿಗೆ ಹೇಳಿದ್ದಾರೆ. ಆದರೆ, ಯುವಕ ನಾನು ಜೈಲಿಗೆ ಹೋದರೂ ಪರವಾಗಿಲ್ಲ ಮದುವೆ ಆಗುವುದಿಲ್ಲ ಎಂದು ಪಟ್ಟು ಹಿಡಿದ್ದಾನೆ ಎನ್ನಲಾಗಿದೆ.

ಅನೇಕ ಬಾರಿ ಯುವತಿಯನ್ನು ಬಳಕೆ ಮಾಡಿಕೊಂಡು, ಗರ್ಭಪಾತ ಕೂಡ ಮಾಡಿಸಿದ್ದಾನೆ ಎಂದು ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಕೊನೆಗೆ ಮದುವೆ ಆಗಲು ಯುವಕ ಒಪ್ಪದ ಕಾರಣ ಯುವತಿ ಅತ್ಯಾಚಾರ ಮತ್ತು ಜಾತಿ ನಿಂದನೆಯ ದೂರು ನೀಡಿದ್ದಾಳೆ. ಹಾಗಾಗಿ ನೆಲಮಂಗಲ ನಗರ ಪೊಲೀಸರು ಯುವಕನ್ನು ವಶಕ್ಕೆ ಪಡೆದು, ಯುವಕ  ಹೋಗಿ ಬರುತ್ತಿದ್ದ ಲಾಡ್ಜ್ ಗಳ ಸ್ಥಳ ಮಹಜರು ಮಾಡಿದ್ದಾರೆ.

ಒಟ್ಟಾರೆ ಯುವಕನನ್ನ ನಂಬಿ ಮೋಸ ಹೋದ ಯುವತಿ ದಿಕ್ಕು ತೋಚದಂತೆ ಆಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಆಗಿ ಪ್ರೀತಿ ಪ್ರೇಮ ಎಂದು ಜೀವನ ಹಾಳು ಮಾಡಿಕೊಳ್ಳುವ ಮೊದಲು ಎಚ್ಚರಿಕೆಯಿಂದ ಇರಬೇಕಾಗಿದ ಅನಿವಾರ್ಯತೆ ಯುವತಿಯರಿಗೆ ಇದೆ.

Ramesh Babu

Journalist

View Comments

  • ಇಂತಹ ಕಚಡಾ *** ಮಕ್ಕಳು ಇರುವ ತನಕ ಜಾತಿ ವ್ಯವಸ್ಥೆ ದೂರವಾಗಲ್ಲ
    ಇವನಿಗೆ ತಕ್ಕ ಶಿಕ್ಷೆ ಆಗಬೇಕು.
    ಹೆಣ್ಣುಮಕ್ಕಳು ಅಷ್ಟೇ ಬೇಗ ಏಕೆ ಧ್ಯಹಿಕ ಸಂಪರ್ಕ ಬೆಳಸಬೇಕು ಇವರುದು ತಪ್ಪಿದೆ ಅದಕ್ಕೆ ಅನುಭವಿಸಲಿ

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

11 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

18 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

19 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago