ಸ್ನೇಹ… ಪ್ರೀತಿ… ಅತ್ಯಾಚಾರ… ದೋಖಾ…ಆರೋಪ! ಲೈಂಗಿಕ ಸಂಪರ್ಕಕ್ಕೆ ಅಡ್ಡಿಯಾಗದ ಜಾತಿ, ಮದುವೆಗೆ ಅಡ್ಡಿ: ಅತ್ಯಾಚಾರ ಹಾಗೂ ಜಾತಿ ನಿಂದನೆ ದೂರು ನೀಡಿ, ನ್ಯಾಯ ಕೊಡಿಸಿ ಎಂದು ಪೊಲೀಸರ ಮೊರೆ ಹೋದ ಯುವತಿ

ಮೊಬೈಲ್ ಬಳಸುವ ಯುವತಿಯರೇ ಎಚ್ಚರ… ಎಚ್ಚರ… ಅದರಲ್ಲೂ ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಯುವಕರ ಸ್ನೇಹ ಬೆಳೆಸುವ ಮುನ್ನ ‘ಬಿ ಕೇರ್ ಫುಲ್’ ಏಕೆಂದರೆ, ಹೀಗೆ… ಯುವತಿಗೆ ಇಂಸ್ಟ್ರಾಗ್ರಾಮ್ ನಲ್ಲಿ ಯುವಕನೋರ್ವ ಪರಿಚಯವಾಗುತ್ತಾನೆ.. ನಂತರ ಸೊಂಡೆಕೊಪ್ಪದಲ್ಲಿ ಯುವತಿ ದಿನಸಿ ಸಾಮಗ್ರಿ ತರಲು ಬಂದಿರುತ್ತಾಳೆ. ಅದೇ ಸಮಯದಲ್ಲಿ ಈ ಯುವಕನೂ ಬಂದು ಯುವತಿ ಬಳಿ ಮೊಬೈಲ್ ನಂಬರ್ ಪಡೆದು ಫೋನ್ ಕಾಲ್, ಮೆಸೇಜ್ ಮಾಡಲು ಶುರು ಮಾಡುತ್ತಾನೆ. ಚಿನ್ನಾ, ರನ್ನ, ಬಂಗಾರದ ಮಾತಿಗೆ ಮರುಳಾದ ಯುವತಿಗೆ ನಿರಂತರ  ಅತ್ಯಾಚಾರವೆಸಗಿ ಜಾತಿ ನೆಪವೊಡ್ಡಿ ಮದುವೆಯಾಗದೇ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ…

ಯುವತಿಗೆ ವಂಚನೆ ಮಾಡಿರುವ ಯುವನ ಹೆಸರು ಶ್ರೀಕಾಂತ್.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾವರೆಕೆರೆ ಸಮೀಪದ ಹೊಸಪಾಳ್ಯ ಗ್ರಾಮದವನು. ಚಿನ್ನ ರನ್ನ, ಮುದ್ದು ಎಂದು ಮಾತಾಡಿ, ಯುವತಿಗೆ ಮದುವೆ ಆಗುತ್ತೇನೆ ಎಂದು ನಂಬಿಸಿ, ಆಗಾಗ ಲಾಡ್ಜ್ ಗಳಿಗೆ ಕರೆದುಕೊಂಡು ಬಂದು ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಆದರೆ, ಇದೀಗ ದೈಹಿಕ ಸಂಕರ್ಪಕಕ್ಕೆ ಅಡ್ಡಿಬಾರದ ಜಾತಿ, ಮದುವೆ ಆಗಲು ಅಡ್ಡಿ ಬಂದಿದೆ. ನೀನು ಕೆಳ ಜಾತಿಯವಳು, ನಾನು ಮದುವೆ ಆಗಲ್ಲ ಎಂದು ನಿರಾಕರಿಸಿದ್ದಾನೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ…

ಇನ್ನೂ, ಯುವತಿ ನ್ಯಾಯ ಬೇಡಿ ನೆಲಮಂಗಲ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಈ ವೇಳೆ ಯುವತಿ ಪೋಷಕರು, ಪೊಲೀಸ್ ಅಧಿಕಾರಿಗಳು ಯುವತಿಯನ್ನು ಮದುವೆ ಆಗುವಂತೆ ಯುವಕನಿಗೆ ಹೇಳಿದ್ದಾರೆ. ಆದರೆ, ಯುವಕ ನಾನು ಜೈಲಿಗೆ ಹೋದರೂ ಪರವಾಗಿಲ್ಲ ಮದುವೆ ಆಗುವುದಿಲ್ಲ ಎಂದು ಪಟ್ಟು ಹಿಡಿದ್ದಾನೆ ಎನ್ನಲಾಗಿದೆ.

ಅನೇಕ ಬಾರಿ ಯುವತಿಯನ್ನು ಬಳಕೆ ಮಾಡಿಕೊಂಡು, ಗರ್ಭಪಾತ ಕೂಡ ಮಾಡಿಸಿದ್ದಾನೆ ಎಂದು ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಕೊನೆಗೆ ಮದುವೆ ಆಗಲು ಯುವಕ ಒಪ್ಪದ ಕಾರಣ ಯುವತಿ ಅತ್ಯಾಚಾರ ಮತ್ತು ಜಾತಿ ನಿಂದನೆಯ ದೂರು ನೀಡಿದ್ದಾಳೆ. ಹಾಗಾಗಿ ನೆಲಮಂಗಲ ನಗರ ಪೊಲೀಸರು ಯುವಕನ್ನು ವಶಕ್ಕೆ ಪಡೆದು, ಯುವಕ  ಹೋಗಿ ಬರುತ್ತಿದ್ದ ಲಾಡ್ಜ್ ಗಳ ಸ್ಥಳ ಮಹಜರು ಮಾಡಿದ್ದಾರೆ.

ಒಟ್ಟಾರೆ ಯುವಕನನ್ನ ನಂಬಿ ಮೋಸ ಹೋದ ಯುವತಿ ದಿಕ್ಕು ತೋಚದಂತೆ ಆಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಆಗಿ ಪ್ರೀತಿ ಪ್ರೇಮ ಎಂದು ಜೀವನ ಹಾಳು ಮಾಡಿಕೊಳ್ಳುವ ಮೊದಲು ಎಚ್ಚರಿಕೆಯಿಂದ ಇರಬೇಕಾಗಿದ ಅನಿವಾರ್ಯತೆ ಯುವತಿಯರಿಗೆ ಇದೆ.

Ramesh Babu

Journalist

View Comments

  • ಇಂತಹ ಕಚಡಾ *** ಮಕ್ಕಳು ಇರುವ ತನಕ ಜಾತಿ ವ್ಯವಸ್ಥೆ ದೂರವಾಗಲ್ಲ
    ಇವನಿಗೆ ತಕ್ಕ ಶಿಕ್ಷೆ ಆಗಬೇಕು.
    ಹೆಣ್ಣುಮಕ್ಕಳು ಅಷ್ಟೇ ಬೇಗ ಏಕೆ ಧ್ಯಹಿಕ ಸಂಪರ್ಕ ಬೆಳಸಬೇಕು ಇವರುದು ತಪ್ಪಿದೆ ಅದಕ್ಕೆ ಅನುಭವಿಸಲಿ

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

5 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

5 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

8 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago