ಸ್ನೇಹ… ಪ್ರೀತಿ… ಅತ್ಯಾಚಾರ… ದೋಖಾ…ಆರೋಪ! ಲೈಂಗಿಕ ಸಂಪರ್ಕಕ್ಕೆ ಅಡ್ಡಿಯಾಗದ ಜಾತಿ, ಮದುವೆಗೆ ಅಡ್ಡಿ: ಅತ್ಯಾಚಾರ ಹಾಗೂ ಜಾತಿ ನಿಂದನೆ ದೂರು ನೀಡಿ, ನ್ಯಾಯ ಕೊಡಿಸಿ ಎಂದು ಪೊಲೀಸರ ಮೊರೆ ಹೋದ ಯುವತಿ

ಮೊಬೈಲ್ ಬಳಸುವ ಯುವತಿಯರೇ ಎಚ್ಚರ… ಎಚ್ಚರ… ಅದರಲ್ಲೂ ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಯುವಕರ ಸ್ನೇಹ ಬೆಳೆಸುವ ಮುನ್ನ ‘ಬಿ ಕೇರ್ ಫುಲ್’ ಏಕೆಂದರೆ, ಹೀಗೆ… ಯುವತಿಗೆ ಇಂಸ್ಟ್ರಾಗ್ರಾಮ್ ನಲ್ಲಿ ಯುವಕನೋರ್ವ ಪರಿಚಯವಾಗುತ್ತಾನೆ.. ನಂತರ ಸೊಂಡೆಕೊಪ್ಪದಲ್ಲಿ ಯುವತಿ ದಿನಸಿ ಸಾಮಗ್ರಿ ತರಲು ಬಂದಿರುತ್ತಾಳೆ. ಅದೇ ಸಮಯದಲ್ಲಿ ಈ ಯುವಕನೂ ಬಂದು ಯುವತಿ ಬಳಿ ಮೊಬೈಲ್ ನಂಬರ್ ಪಡೆದು ಫೋನ್ ಕಾಲ್, ಮೆಸೇಜ್ ಮಾಡಲು ಶುರು ಮಾಡುತ್ತಾನೆ. ಚಿನ್ನಾ, ರನ್ನ, ಬಂಗಾರದ ಮಾತಿಗೆ ಮರುಳಾದ ಯುವತಿಗೆ ನಿರಂತರ  ಅತ್ಯಾಚಾರವೆಸಗಿ ಜಾತಿ ನೆಪವೊಡ್ಡಿ ಮದುವೆಯಾಗದೇ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ…

ಯುವತಿಗೆ ವಂಚನೆ ಮಾಡಿರುವ ಯುವನ ಹೆಸರು ಶ್ರೀಕಾಂತ್.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾವರೆಕೆರೆ ಸಮೀಪದ ಹೊಸಪಾಳ್ಯ ಗ್ರಾಮದವನು. ಚಿನ್ನ ರನ್ನ, ಮುದ್ದು ಎಂದು ಮಾತಾಡಿ, ಯುವತಿಗೆ ಮದುವೆ ಆಗುತ್ತೇನೆ ಎಂದು ನಂಬಿಸಿ, ಆಗಾಗ ಲಾಡ್ಜ್ ಗಳಿಗೆ ಕರೆದುಕೊಂಡು ಬಂದು ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಆದರೆ, ಇದೀಗ ದೈಹಿಕ ಸಂಕರ್ಪಕಕ್ಕೆ ಅಡ್ಡಿಬಾರದ ಜಾತಿ, ಮದುವೆ ಆಗಲು ಅಡ್ಡಿ ಬಂದಿದೆ. ನೀನು ಕೆಳ ಜಾತಿಯವಳು, ನಾನು ಮದುವೆ ಆಗಲ್ಲ ಎಂದು ನಿರಾಕರಿಸಿದ್ದಾನೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ…

ಇನ್ನೂ, ಯುವತಿ ನ್ಯಾಯ ಬೇಡಿ ನೆಲಮಂಗಲ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಈ ವೇಳೆ ಯುವತಿ ಪೋಷಕರು, ಪೊಲೀಸ್ ಅಧಿಕಾರಿಗಳು ಯುವತಿಯನ್ನು ಮದುವೆ ಆಗುವಂತೆ ಯುವಕನಿಗೆ ಹೇಳಿದ್ದಾರೆ. ಆದರೆ, ಯುವಕ ನಾನು ಜೈಲಿಗೆ ಹೋದರೂ ಪರವಾಗಿಲ್ಲ ಮದುವೆ ಆಗುವುದಿಲ್ಲ ಎಂದು ಪಟ್ಟು ಹಿಡಿದ್ದಾನೆ ಎನ್ನಲಾಗಿದೆ.

ಅನೇಕ ಬಾರಿ ಯುವತಿಯನ್ನು ಬಳಕೆ ಮಾಡಿಕೊಂಡು, ಗರ್ಭಪಾತ ಕೂಡ ಮಾಡಿಸಿದ್ದಾನೆ ಎಂದು ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಕೊನೆಗೆ ಮದುವೆ ಆಗಲು ಯುವಕ ಒಪ್ಪದ ಕಾರಣ ಯುವತಿ ಅತ್ಯಾಚಾರ ಮತ್ತು ಜಾತಿ ನಿಂದನೆಯ ದೂರು ನೀಡಿದ್ದಾಳೆ. ಹಾಗಾಗಿ ನೆಲಮಂಗಲ ನಗರ ಪೊಲೀಸರು ಯುವಕನ್ನು ವಶಕ್ಕೆ ಪಡೆದು, ಯುವಕ  ಹೋಗಿ ಬರುತ್ತಿದ್ದ ಲಾಡ್ಜ್ ಗಳ ಸ್ಥಳ ಮಹಜರು ಮಾಡಿದ್ದಾರೆ.

ಒಟ್ಟಾರೆ ಯುವಕನನ್ನ ನಂಬಿ ಮೋಸ ಹೋದ ಯುವತಿ ದಿಕ್ಕು ತೋಚದಂತೆ ಆಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಆಗಿ ಪ್ರೀತಿ ಪ್ರೇಮ ಎಂದು ಜೀವನ ಹಾಳು ಮಾಡಿಕೊಳ್ಳುವ ಮೊದಲು ಎಚ್ಚರಿಕೆಯಿಂದ ಇರಬೇಕಾಗಿದ ಅನಿವಾರ್ಯತೆ ಯುವತಿಯರಿಗೆ ಇದೆ.

Ramesh Babu

Journalist

View Comments

  • ಇಂತಹ ಕಚಡಾ *** ಮಕ್ಕಳು ಇರುವ ತನಕ ಜಾತಿ ವ್ಯವಸ್ಥೆ ದೂರವಾಗಲ್ಲ
    ಇವನಿಗೆ ತಕ್ಕ ಶಿಕ್ಷೆ ಆಗಬೇಕು.
    ಹೆಣ್ಣುಮಕ್ಕಳು ಅಷ್ಟೇ ಬೇಗ ಏಕೆ ಧ್ಯಹಿಕ ಸಂಪರ್ಕ ಬೆಳಸಬೇಕು ಇವರುದು ತಪ್ಪಿದೆ ಅದಕ್ಕೆ ಅನುಭವಿಸಲಿ

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

21 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

21 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

1 day ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

2 days ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

2 days ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

2 days ago