ಸ್ಪಿನ್ನರ್ ಗಳ ಕೈಚಳಕ: ಭಾರತಕ್ಕೆ 5 ವಿಕೆಟ್ ಗಳ ಜಯ

ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಏಕದಿನ ಪಂದ್ಯಗಳ ಮೊದಲ ಪಂದ್ಯದಲ್ಲಿಯೇ ಕುಲದೀಪ್ ಯಾದವ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಕೈಚಳಕದಿಂದ ಭಾರತಕ್ಕೆ 5 ವಿಕೆಟ್ ಗಳ ಜಯ ತಂದುಕೊಟ್ಟಿತು.

ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ಪಡೆ ವೆಸ್ಟ್ಇಂಡೀಸ್ ತಂಡವನ್ನು 114 ರನ್ ಗಳಿಗೆ ಆಲೌಟ್ ಮಾಡುವ ಮೂಲಕ ಜಯವನ್ನು ಸುಲಭವಾಗಿಸಿದರು.

ವೆಸ್ಟ್ಇಂಡೀಸ್ ಪರವಾಗಿ ನಾಯಕ ಶೈಹೋಪ್ (42) ಹಾಗೂ ಅಥೆಂಜೆ (22) ರನ್ ಗಳಿಸುವ ಮೂಲಕ ತಂಡವನ್ನು ಶತಕದ ಗಡಿ ದಾಟಿಸಿದರು, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ (4), ಅಲ್ ರೌಂಡರ್ ರವೀಂದ್ರ ಜಡೇಜಾ (3) ವಿಕೆಟ್ ಪಡೆದರೆ ಹಾರ್ದಿಕ್ ಪಾಂಡ್ಯ, ಪಾದಾರ್ಪಣೆ ಪಂದ್ಯವಾಡಿದ ಮುಖೇಶ್ ಕುಮಾರ್ ಹಾಗೂ ಶಾದು೯ಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.

ಸಾಧಾರಣ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರ ಇಶಾನ್ ಕಿಶನ್ (52) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು, ಇವರಿಗೆ ಸೂಯ೯ಕುಮಾರ್ ಯಾದವ್(19) ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ (16) ರನ್ ಗಳಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.

ಉತ್ತಮ ಬೌಲಿಂಗ್ ಪ್ರದರ್ಶಿಸಿದ ಕುಲದೀಪ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

11 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

22 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

23 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago