ಸ್ಪಿನ್ನರ್ ಗಳ ಕೈಚಳಕ: ಭಾರತಕ್ಕೆ 5 ವಿಕೆಟ್ ಗಳ ಜಯ

ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಏಕದಿನ ಪಂದ್ಯಗಳ ಮೊದಲ ಪಂದ್ಯದಲ್ಲಿಯೇ ಕುಲದೀಪ್ ಯಾದವ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಕೈಚಳಕದಿಂದ ಭಾರತಕ್ಕೆ 5 ವಿಕೆಟ್ ಗಳ ಜಯ ತಂದುಕೊಟ್ಟಿತು.

ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ಪಡೆ ವೆಸ್ಟ್ಇಂಡೀಸ್ ತಂಡವನ್ನು 114 ರನ್ ಗಳಿಗೆ ಆಲೌಟ್ ಮಾಡುವ ಮೂಲಕ ಜಯವನ್ನು ಸುಲಭವಾಗಿಸಿದರು.

ವೆಸ್ಟ್ಇಂಡೀಸ್ ಪರವಾಗಿ ನಾಯಕ ಶೈಹೋಪ್ (42) ಹಾಗೂ ಅಥೆಂಜೆ (22) ರನ್ ಗಳಿಸುವ ಮೂಲಕ ತಂಡವನ್ನು ಶತಕದ ಗಡಿ ದಾಟಿಸಿದರು, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ (4), ಅಲ್ ರೌಂಡರ್ ರವೀಂದ್ರ ಜಡೇಜಾ (3) ವಿಕೆಟ್ ಪಡೆದರೆ ಹಾರ್ದಿಕ್ ಪಾಂಡ್ಯ, ಪಾದಾರ್ಪಣೆ ಪಂದ್ಯವಾಡಿದ ಮುಖೇಶ್ ಕುಮಾರ್ ಹಾಗೂ ಶಾದು೯ಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.

ಸಾಧಾರಣ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರ ಇಶಾನ್ ಕಿಶನ್ (52) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು, ಇವರಿಗೆ ಸೂಯ೯ಕುಮಾರ್ ಯಾದವ್(19) ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ (16) ರನ್ ಗಳಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.

ಉತ್ತಮ ಬೌಲಿಂಗ್ ಪ್ರದರ್ಶಿಸಿದ ಕುಲದೀಪ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

3 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

3 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

7 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

20 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

23 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

24 hours ago