ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.
ಹನಿಟ್ರ್ಯಾಪ್ ಪ್ರಕರಣ ಖಂಡಿಸಿ, ಪ್ರಕರಣದ ಸಿಬಿಐ ತನಿಖೆ ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು.
ಆಡಳಿತ ಪಕ್ಷದ ವಿರುದ್ಧ ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಸ್ಪೀಕರ್ ಪೀಠದ ಮೇಲೆ ಏರಿ ಬಂದ ಬಿಜೆಪಿ ಸದಸ್ಯರು ತಮ್ಮ ಆಕ್ರೋಶ ಹೊರಹಾಕಿದ್ದರು.
ಗದ್ದಲ ಕೋಲಾಹಲದ ನಡುವೆ ಸ್ಪೀಕರ್ ಪೀಠದ ಮೇಲೆ ಬಿಜೆಪಿ ಸದಸ್ಯರು ಕಾಗದ ಪ್ರತಿಗಳನ್ನು ಹರಿದು ಎಸೆದಿದ್ದರು. ಈ ಹಿನ್ನೆಲೆ ಪೀಠಕ್ಕೆ ಅಗೌರವ ತೋರಿದ 18 ಮಂದಿ ಬಿಜೆಪಿ ಸದಸ್ಯರನ್ನು ಸದನ ಕಲಾಪದಿಂದ 6 ತಿಂಗಳಿಗೆ ಅಮಾನತುಗೊಳಿಸಿ ಸ್ಪೀಕರ್ ರೂಲಿಂಗ್ ನೀಡಿದರು.
ಅಮಾನತು ಆದವರು…
ದೊಡ್ಡಣ್ಣ ಗೌಡ ಪಾಟೀಲ್
ಸಿ ಕೆ ರಾಮಮೂರ್ತಿ
ಅಶ್ವತ್ಥ ನಾರಾಯಣ
ಎಸ್ ಆರ್ ವಿಶ್ವನಾಥ್
ಬೈರತಿ ಬಸವರಾಜ
ಎಂ ಆರ್ ಪಾಟೀಲ್
ಚನ್ನಬಸಪ್ಪ
ಬಿ ಸುರೇಶ್ ಗೌಡ
ಉಮನಾಥ್ ಕೋಟ್ಯಾನ್
ಶರಣು ಸಲಗಾರ್
ಶೈಲೇಂದ್ರ ಬೆಲ್ದಾಳೆ
ಯಶಪಾಲ್ ಸುವರ್ಣ
ಹರೀಶ್ ಬಿಪಿ
ಡಾ. ಭರತ್ ಶೆಟ್ಟಿ
ಮುನಿರತ್ನ
ಬಸವರಾಜ ಮತ್ತಿಮೋಡ್
ಧೀರಜ್ ಮುನಿರಾಜು
ಡಾ ಚಂದ್ರು ಲಮಾಣಿ
ಸದನದ ಪಾವಿತ್ರ್ಯತೆಯನ್ನು ಕಾಪಾಡಬೇಕು. ನೀವು ಯು.ಟಿ.ಖಾದರ್ ಗೆ ಅಪಮಾನ ಮಾಡಿ, ಆದರೆ, ಸ್ಪೀಕರ್ ಪೀಠಕ್ಕೆ ಅಪಮಾನ ಮಾಡಿದರೆ ನಾವು ಸಹಿಸಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಸ್ಪೀಕರ್ ಪೀಠದ ಮೇಲೆ ಕಾಗದ ಎಸೆದಿದ್ದಾರೆ. ಇದನ್ನ ಯಾರೂ ಸಹಿಸುವುದಿಲ್ಲ. ಇದು ಪೀಠಕ್ಕೆ ತೋರಿದ ಅಗೌರವ ಎಂದು ಹೇಳಿ ಅಮಾನತು ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…