Categories: Home

ಸ್ಪೀಕರ್ ಪೀಠದ ಮುಂದೆ ಬಂದು ಪೀಠಕ್ಕೆ ಅಗೌರವ ಹಿನ್ನೆಲೆ: ಶಾಸಕ ಧೀರಜ್ ಮುನಿರಾಜ್ ಸೇರಿದಂತೆ 18 ಮಂದಿ ಶಾಸಕರು ಅಮಾನತು: 6 ತಿಂಗಳವರೆಗೆ ಕಲಾಪದಿಂದ ಅಮಾನತು

ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿ  ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.

ಹನಿಟ್ರ್ಯಾಪ್ ಪ್ರಕರಣ ಖಂಡಿಸಿ, ಪ್ರಕರಣದ ಸಿಬಿಐ ತನಿಖೆ ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು.

ಆಡಳಿತ ಪಕ್ಷದ ವಿರುದ್ಧ ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಸ್ಪೀಕರ್ ಪೀಠದ ಮೇಲೆ ಏರಿ ಬಂದ ಬಿಜೆಪಿ ಸದಸ್ಯರು ತಮ್ಮ ಆಕ್ರೋಶ ಹೊರಹಾಕಿದ್ದರು.

ಗದ್ದಲ ಕೋಲಾಹಲದ ನಡುವೆ ಸ್ಪೀಕರ್ ಪೀಠದ ಮೇಲೆ ಬಿಜೆಪಿ ಸದಸ್ಯರು ಕಾಗದ ಪ್ರತಿಗಳನ್ನು ಹರಿದು ಎಸೆದಿದ್ದರು. ಈ ಹಿನ್ನೆಲೆ ಪೀಠಕ್ಕೆ ಅಗೌರವ ತೋರಿದ 18 ಮಂದಿ ಬಿಜೆಪಿ ಸದಸ್ಯರನ್ನು ಸದನ ಕಲಾಪದಿಂದ 6 ತಿಂಗಳಿಗೆ ಅಮಾನತುಗೊಳಿಸಿ ಸ್ಪೀಕರ್ ರೂಲಿಂಗ್ ನೀಡಿದರು.

ಅಮಾನತು ಆದವರು…

ದೊಡ್ಡಣ್ಣ ಗೌಡ ಪಾಟೀಲ್

ಸಿ ಕೆ ರಾಮಮೂರ್ತಿ

ಅಶ್ವತ್ಥ ನಾರಾಯಣ

ಎಸ್ ಆರ್ ವಿಶ್ವನಾಥ್

ಬೈರತಿ ಬಸವರಾಜ

ಎಂ ಆರ್ ಪಾಟೀಲ್

ಚನ್ನಬಸಪ್ಪ

ಬಿ ಸುರೇಶ್ ಗೌಡ

ಉಮನಾಥ್ ಕೋಟ್ಯಾನ್

ಶರಣು ಸಲಗಾರ್

ಶೈಲೇಂದ್ರ ಬೆಲ್ದಾಳೆ

ಯಶಪಾಲ್ ಸುವರ್ಣ

ಹರೀಶ್ ಬಿಪಿ

ಡಾ. ಭರತ್ ಶೆಟ್ಟಿ

ಮುನಿರತ್ನ

ಬಸವರಾಜ ಮತ್ತಿಮೋಡ್

ಧೀರಜ್ ಮುನಿರಾಜು

ಡಾ ಚಂದ್ರು ಲಮಾಣಿ

ಸದನದ ಪಾವಿತ್ರ್ಯತೆಯನ್ನು ಕಾಪಾಡಬೇಕು. ನೀವು ಯು.ಟಿ.ಖಾದರ್ ಗೆ ಅಪಮಾನ ಮಾಡಿ, ಆದರೆ, ಸ್ಪೀಕರ್ ಪೀಠಕ್ಕೆ ಅಪಮಾನ ಮಾಡಿದರೆ ನಾವು ಸಹಿಸಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಸ್ಪೀಕರ್ ಪೀಠದ ಮೇಲೆ ಕಾಗದ ಎಸೆದಿದ್ದಾರೆ. ಇದನ್ನ ಯಾರೂ‌ ಸಹಿಸುವುದಿಲ್ಲ. ಇದು ಪೀಠಕ್ಕೆ ತೋರಿದ ಅಗೌರವ ಎಂದು ಹೇಳಿ ಅಮಾನತು ಮಾಡಿದ್ದಾರೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

6 minutes ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

13 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

13 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

16 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

16 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

21 hours ago