Categories: Home

ಸ್ಪೀಕರ್ ಪೀಠದ ಮುಂದೆ ಬಂದು ಪೀಠಕ್ಕೆ ಅಗೌರವ ಹಿನ್ನೆಲೆ: ಶಾಸಕ ಧೀರಜ್ ಮುನಿರಾಜ್ ಸೇರಿದಂತೆ 18 ಮಂದಿ ಶಾಸಕರು ಅಮಾನತು: 6 ತಿಂಗಳವರೆಗೆ ಕಲಾಪದಿಂದ ಅಮಾನತು

ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿ  ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.

ಹನಿಟ್ರ್ಯಾಪ್ ಪ್ರಕರಣ ಖಂಡಿಸಿ, ಪ್ರಕರಣದ ಸಿಬಿಐ ತನಿಖೆ ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು.

ಆಡಳಿತ ಪಕ್ಷದ ವಿರುದ್ಧ ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಸ್ಪೀಕರ್ ಪೀಠದ ಮೇಲೆ ಏರಿ ಬಂದ ಬಿಜೆಪಿ ಸದಸ್ಯರು ತಮ್ಮ ಆಕ್ರೋಶ ಹೊರಹಾಕಿದ್ದರು.

ಗದ್ದಲ ಕೋಲಾಹಲದ ನಡುವೆ ಸ್ಪೀಕರ್ ಪೀಠದ ಮೇಲೆ ಬಿಜೆಪಿ ಸದಸ್ಯರು ಕಾಗದ ಪ್ರತಿಗಳನ್ನು ಹರಿದು ಎಸೆದಿದ್ದರು. ಈ ಹಿನ್ನೆಲೆ ಪೀಠಕ್ಕೆ ಅಗೌರವ ತೋರಿದ 18 ಮಂದಿ ಬಿಜೆಪಿ ಸದಸ್ಯರನ್ನು ಸದನ ಕಲಾಪದಿಂದ 6 ತಿಂಗಳಿಗೆ ಅಮಾನತುಗೊಳಿಸಿ ಸ್ಪೀಕರ್ ರೂಲಿಂಗ್ ನೀಡಿದರು.

ಅಮಾನತು ಆದವರು…

ದೊಡ್ಡಣ್ಣ ಗೌಡ ಪಾಟೀಲ್

ಸಿ ಕೆ ರಾಮಮೂರ್ತಿ

ಅಶ್ವತ್ಥ ನಾರಾಯಣ

ಎಸ್ ಆರ್ ವಿಶ್ವನಾಥ್

ಬೈರತಿ ಬಸವರಾಜ

ಎಂ ಆರ್ ಪಾಟೀಲ್

ಚನ್ನಬಸಪ್ಪ

ಬಿ ಸುರೇಶ್ ಗೌಡ

ಉಮನಾಥ್ ಕೋಟ್ಯಾನ್

ಶರಣು ಸಲಗಾರ್

ಶೈಲೇಂದ್ರ ಬೆಲ್ದಾಳೆ

ಯಶಪಾಲ್ ಸುವರ್ಣ

ಹರೀಶ್ ಬಿಪಿ

ಡಾ. ಭರತ್ ಶೆಟ್ಟಿ

ಮುನಿರತ್ನ

ಬಸವರಾಜ ಮತ್ತಿಮೋಡ್

ಧೀರಜ್ ಮುನಿರಾಜು

ಡಾ ಚಂದ್ರು ಲಮಾಣಿ

ಸದನದ ಪಾವಿತ್ರ್ಯತೆಯನ್ನು ಕಾಪಾಡಬೇಕು. ನೀವು ಯು.ಟಿ.ಖಾದರ್ ಗೆ ಅಪಮಾನ ಮಾಡಿ, ಆದರೆ, ಸ್ಪೀಕರ್ ಪೀಠಕ್ಕೆ ಅಪಮಾನ ಮಾಡಿದರೆ ನಾವು ಸಹಿಸಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಸ್ಪೀಕರ್ ಪೀಠದ ಮೇಲೆ ಕಾಗದ ಎಸೆದಿದ್ದಾರೆ. ಇದನ್ನ ಯಾರೂ‌ ಸಹಿಸುವುದಿಲ್ಲ. ಇದು ಪೀಠಕ್ಕೆ ತೋರಿದ ಅಗೌರವ ಎಂದು ಹೇಳಿ ಅಮಾನತು ಮಾಡಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

3 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

5 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

8 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

22 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago