ಸ್ಫೋಟಕ ಬ್ಯಾಟ್ಸ್‌ಮನ್‌ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ

ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಹಾಗೂ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಈಗಾಗಲೇ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಇದೀಗ ಏಕದಿನ ಮಾದರಿಯಲ್ಲಿ ಮಾತ್ರ ದೇಶದ ಪರವಾಗಿ ಸ್ಫೋಟಕ ಬ್ಯಾಟ್ಸ್‌ಮನ್‌ ಅಬ್ಬರಿಸಲಿದ್ದಾರೆ.

ಟೆಸ್ಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ರೋಹಿತ್, 67 ಟೆಸ್ಟ್‌ಗಳಲ್ಲಿ 40.57 ಸರಾಸರಿಯಲ್ಲಿ 4301 ರನ್ ಗಳಿಸಿದ್ದಾರೆ. ಇದರಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳಿವೆ.

ರೋಹಿತ್ ಶರ್ಮಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, “ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಹೇಳಲು ಇಷ್ಟಪಡುತ್ತೇನೆ. ಬಿಳಿ ಬಣ್ಣದ ಜೆರ್ಸಿಯಲ್ಲಿ ನನ್ನ ದೇಶವನ್ನು ಪ್ರತಿನಿಧಿಸುವುದು ಒಂದು ದೊಡ್ಡ ಗೌರವ. ವರ್ಷಗಳಿಂದ ನೀವು ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಒಡಿಐ ಮಾದರಿಯಲ್ಲಿ ಭಾರತವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ,” ಎಂದು ರೋಹಿತ್ ಶರ್ಮಾ ಬರೆದುಕೊಂಡಿದ್ದಾರೆ.

ರೋಹಿತ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಹೊಸ ಟೆಸ್ಟ್ ನಾಯಕ ಸಿಗುತ್ತಾರೆ ಎಂಬುದು ಸ್ಪಷ್ಟವಾಗಿದೆ. ಈ ರೇಸ್‌ನಲ್ಲಿ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ರಿಷಭ್ ಪಂತ್ ಮುಂಚೂಣಿಯಲ್ಲಿದ್ದಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

13 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

22 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

23 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago